ಮೈಸೂರು | ವಿದ್ಯುತ್ ಸಂಪರ್ಕ, ರೈತರಿಂದ ದುಪ್ಪಟ್ಟು ವಸೂಲಿ; ರೈತ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

Date:

Advertisements

ಕರ್ನಾಟಕ ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ‘ ವಿದ್ಯುತ್ ಸಂಪರ್ಕ ಪಡೆಯಲು ನಿಗದಿತ ಹಣಕ್ಕಿಂತ ದುಪ್ಪಟ್ಟಾಗಿ ರೈತರಿಂದ ಗುತ್ತಿಗೆದಾರರು ಹಣ ಸುಲಿಗೆ ಮಾಡುತಿದ್ದು ದಂಧೆಯಾಗಿ ಪರಿಣಮಿಸಿದೆ. ಕೂಡಲೇ ಸಂಭಂದ ಪಟ್ಟ ಅಧಿಕಾರಿಗಳು, ಸರ್ಕಾರ ಎಚ್ಚೆತ್ತುಕೊಳ್ಳದೆ ಇದ್ದಲಿ ಜಿಲ್ಲೆಯ ಎಲ್ಲಾ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದ್ದಾರೆ.

” ರೈತರು ವಿದ್ಯುತ್ ಸಂಪರ್ಕ ಪಡೆಯಲು ವಿದ್ಯುತ್ ಇಲಾಖೆ ಐಪಿ ಸೆಟ್‌ 5 ಹೆಚ್ ಪಿ ಗೆ ₹ 7,400 ನಿಗದಿಪಡಿಸಿದೆ. ಗುತ್ತಿಗೆದಾರರು ರೈತರಿಂದ 15 ಸಾವಿರದಿಂದ 18 ಸಾವಿರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದು, ದೊಡ್ಡ ದಂಧೆಯಾಗಿ ಮಾಡಿಕೊಂಡಿದ್ದಾರೆ ” ಎಂದು ಆರೋಪಿಸಿದರು.

” ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವುದಾಗಲಿ, ಅಗತ್ಯಕ್ಕನುಗುಣವಾಗಿ ಹೊಸ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸುವುದಾಗಲಿ ಸಾಧ್ಯವಾಗದಂತಾಗಿದೆ. ಸರ್ಕಾರದ ಈ ನಿಲುವಿನಿಂದ ರೈತರು ಹೊಸ ಸಂಪರ್ಕವನ್ನು ಪಡೆಯಲು 2 ಲಕ್ಷ ರೂಪಾಯಿಗಳ ಹಣ ಸಂದಾಯ ಮಾಡಿ ವಿದ್ಯುತ್ ಸಂಪರ್ಕ ಪಡೆಯುವ ಕೆಟ್ಟ ಪರಿಸ್ಥಿತಿ ಒದಗಿ ಬಂದಿದೆ.ವೈಜ್ಞಾನಿಕ ಬೆಲೆ ಸಿಗುವವರೆಗೆ ವಿದ್ಯುಚ್ಛಕ್ತಿ ಬಿಲ್ಲನ್ನು ಕಟ್ಟುವುದಿಲ್ಲ ಎಂದು ರೈತ ಸಂಘ ಹೋರಾಟ ಮಾಡಿದರ ಫಲವಾಗಿ 10 ಹೆಚ್ ಪಿ ವರೆಗೆ ವಿದ್ಯುಚ್ಛಕ್ತಿ ಉಚಿತವಾಗಿ ನೀಡಲು ಸರ್ಕಾರವು ಘೋಷಣೆ ಮಾಡಿದೆ”.

Advertisements

ಆದರೆ, ಇತ್ತೀಚಿನ ದಿನಗಳಲ್ಲಿ ರೈತರು ವಿದ್ಯುಚ್ಛಕ್ತಿ ಪಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ. ಈ ರೈತ ವಿರೋಧಿ ನೀತಿಯನ್ನು ಕಳೆದ ಎರಡು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದು, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ಗಮನಕ್ಕೆ ತಂದರೂ ಕೂಡ ರೈತರಿಗಾಗುವ ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೊಸ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸದ ಕಾರಣ ರೈತರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ಕಾರಣ ಅಗತ್ಯತೆಗೆ ಮೀರಿದ ಸಂಪರ್ಕವನ್ನು ಪಡೆದುಕೊಂಡಿರುವ ರೈತರಿಗೆ ಹಿಂದಿನಂತೆ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸದೆ ವೋಲ್ವೇಜ್ ಅಭಾವದಿಂದ ರೈತರ ಪಂಪ್ ಸೆಟ್‌ಗಳು ಸುಟ್ಟು ಹೋಗುತ್ತಿದ್ದು, ಬೆಳೆ ನಷ್ಟಕ್ಕೆ ಒಳಗಾಗುತ್ತಿದ್ದೇವೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಯುವಕ ಸಂಘಗಳಿಗೆ ಕ್ರೀಡಾ ಸಲಕರಣೆ ವಿತರಣೆ

ರೈತರಿಂದ ಹೆಚ್ಚುವರಿಯಾಗಿ ಪಡೆಯುತ್ತಿರುವ ಹಣಕ್ಕೆ ಕಡಿವಾಣ ಹಾಕುವ ಮೂಲಕ ಹಾಗೂ ರೈತರಿಗೆ ತೊಂದರೆಯಾಗದಂತೆ ಇಲಾಖೆಗೆ ಅರಿವು ಮೂಡಿಸಿ, ಕಟ್ಟಬೇಕಾದ ಕನಿಷ್ಠ ಹಣವನ್ನು ಮಾತ್ರ ವಡೆಯಬೇಕು. ಇಲ್ಲವಾದಲ್ಲಿ ರೈತ ಸಂಘವು ಎಲ್ಲಾ ಕಚೇರಿಗಳ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X