ಕೊಪ್ಪಳ | ಬಲ್ಡೋಟಾ ವಿರೋಧಿ ಪ್ರತಿಭಟನೆ ಅಂಗವಾಗಿ ಪರಿಸರ ಜಾಗೃತಿ

Date:

Advertisements

ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ಸೇರಿದಂತೆ ಹೊಸ ಉಕ್ಕಿನ ಕಾರ್ಖಾನೆ ಸ್ಥಾಪನೆ ಹಾಗೂ ಅಣುವಿದ್ಯುತ್ ಸ್ಥಾವರ ಯೋಜನೆಯ ಪ್ರಸ್ತಾಪವನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಹೋರಾಟದ ಭಾಗವಾಗಿ ಎರಡು ದಿನಗಳ ಪರಿಸರ ಜಾಗೃತಿ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ತಿಳಿಸಿದೆ.

ಈ ಕುರಿತು ಸಂಘಟನೆಯ ಜಿಲ್ಲಾ ಸಂಚಾಲಕ ಶರಣು ಪಾಟೀಲ್ ಮಾತನಾಡಿ, “ಹುತಾತ್ಮ ಭಗತ್ ಸಿಂಗ್, ರಾಜಗುರು, ಸುಖದೇವ್‌ರನ್ನು ಗಲ್ಲಿಗೇರಿಸಿದ ದಿನದಂದು ಶಿಬಿರ ಹಮ್ಮಿಕೊಳ್ಳಲಾಗಿದೆ. ಇದು ಜಿಲ್ಲೆಗೆ ಭೂತದಂತೆ ವಕ್ಕರಿಸಿರುತ್ತಿರುವ ಬೃಹತ್ ಕಾರ್ಖಾನೆಗಳನ್ನು ತೊಲಗಿಸುವ ಹೋರಾಟಕ್ಕೆ ಸ್ಫೂರ್ತಿಯಾಗಲಿದೆ. ಅನ್ಯಾಯದ ವಿರುದ್ಧ ಹೋರಾಟ ಮುಂದುವರೆಸುತ್ತೇವೆ” ಎಂದರು.

ಶರಣು ಗಡ್ಡಿ ಮಾತನಾಡಿ, “ಹೇಳುವವರು ಎಷ್ಟೇ ಮಹಾನ್ ವ್ಯಕ್ತಿಗಳಾಗಿರಲಿ ಅವರ ಮಾತುಗಳನ್ನು ವಿಮರ್ಶಿಸದೇ ಒಪ್ಪದಿರಿ ಎನ್ನುವ ಭಗತ್‌ ಸಿಂಗ್‌ ಮಾತಿನಂತೆ, ಯಾವುದೇ ವಿಷಯನ್ನು ವಿಚಾರ ಮಾಡದೇ ಒಪ್ಪಿಕೊಳ್ಳಬಾರದು. ಸತ್ಯ ಮತ್ತು ಸಾಮಾನ್ಯ ಜನರ ಹಿತಕ್ಕೆ ಧಕ್ಕೆ ಮಾಡುವವರ ವಿರುದ್ಧ ಹೋರಾಟ ಮಾಡಲು ಎಲ್ಲಾ ರೀತಿಯಿಂದಲೂ ಸನ್ನದ್ದರಾಗಬೇಕಾಗುತ್ತದೆ” ಎಂದರು.            

Advertisements

“ವೈಚಾರಿಕವಾಗಿ, ಸಂಘಟನಾತ್ಮಕವಾಗಿ, ರಾಜಕೀಯವಾಗಿ ಎರಡು ದಿನದ ಶಿಬಿರದಲ್ಲಿ ಅನೇಕ ವಿಷಯ ತಜ್ಞರು, ಪರಿಸರವಾದಿಗಳು, ಚಿಂತಕರು, ಹೋರಾಟಗಾರರು, ಕಾರ್ಖಾನೆ, ಉದ್ಯೋಗ, ಅಭಿವೃದ್ಧಿ, ಕೃಷಿ, ಪರಿಸರ ಮಾಲಿನ್ಯ, ಜನಹೋರಾಟಗಳು, ಕಲ್ಯಾಣ ಕರ್ಣಾಟಕದ ಅಭಿವೃದ್ಧಿ ಕುರಿತು ಚರ್ಚಿಸಲಾಗುತ್ತದೆ. ಪ್ರತಿಯೊಬ್ಬರೂ ಈ ಶಿಬಿರದಲ್ಲಿ ಪಾಲ್ಗೊಂಡು ಇದರ ಪ್ರಯೋಜನ ಪಡೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಕೊಪ್ಪಳ | ಕರ್ತವ್ಯ ಲೋಪ ಆರೋಪ : ಆನೆಗೊಂದಿ ಗ್ರಾ.ಪಂ. ಪಿಡಿಒ ಅಮಾನತು

ಶಿಬಿರದಲ್ಲಿ ಹೋರಾಟಗಾರರಾದ ಎಸ್ ಆರ್ ಹಿರೇಮಠ್, ವಿ ಎನ್ ರಾಜಶೇಖರ್, ಬಸವರಾಜ್ ಸೂಳಿಭಾವಿ, ಕೃಷಿ ವಿಜ್ಞಾನಿ ರಾಜೇಂದ್ರ ಪೋತದಾರ್, ಖ್ಯಾತ ಲೇಖಕ ಶಿವಸುಂದರ್, ಕೊಪ್ಪಳ ಜಿಲ್ಲಾ ಬಚಾವೋ ಸಮಿತಿಯ ನಾಯಕ ಅಲ್ಲಮಪ್ರಭು ಬೆಟ್ಟದೂರು ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X