ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌, ನ್ಯಾಯಾಂಗ ಇಲವೇ ಸಿಬಿಐ ತನಿಖೆ ನಡೆಯಲಿ: ಆರ್‌ ಅಶೋಕ್

Date:

Advertisements

ಮುಖ್ಯಮಂತ್ರಿ ಕುರ್ಚಿಗಾಗಿ ಹನಿಟ್ರ್ಯಾಪ್‌ ನಡೆಯುತ್ತಿದೆ. ಸಚಿವ ಕೆ.ಎನ್‌.ರಾಜಣ್ಣ ಸದನದಲ್ಲೇ ಮಾತಾಡಿರುವುದರಿಂದ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅವರ ಹೇಳಿಕೆ ಈಗ ಸದನದ ಆಸ್ತಿ. ಈ ಹನಿಟ್ರ್ಯಾಪ್‌ ಮಾಡಿದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

‌ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್‌.ರಾಜಣ್ಣ ಅವರು ವಿಧಾನಸಭೆಯಲ್ಲಿ ಎಲ್ಲರ ಮುಂದೆ ಹನಿಟ್ರ್ಯಾಪ್‌ ಬಗ್ಗೆ ಹೇಳಿದ್ದಾರೆ. ಇದರಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೀಗೆ ಹೇಳಿ ಎಂದು ರಾಜಣ್ಣ ಅವರಿಗೆ ಸೂಚನೆ ನೀಡಿ ಕಳಿಸಿದ್ದಾರೆ” ಎಂದು ಆರೋಪಿಸಿದರು.

“ಇಷ್ಟೆಲ್ಲ ಆದ ಮೇಲೂ ಇದನ್ನು ತನಿಖೆ ಮಾಡದೆ ಸುಮ್ಮನೆ ಬಿಡಬಾರದು. ಸಚಿವ ರಾಜಣ್ಣ ಅವರು ಪರಿಶಿಷ್ಟ ವರ್ಗಕ್ಕೆ ಸೇರಿದವರು. ಒಂದು ಕಡೆ ಕಾಂಗ್ರೆಸ್‌ ಸರ್ಕಾರ ದಲಿತರ ಹಣವನ್ನು ಗ್ಯಾರಂಟಿಗೆ ದುರ್ಬಳಕೆ ಮಾಡುತ್ತಿದೆ. ಮತ್ತೊಂದು ಕಡೆ ಪರಿಶಿಷ್ಟ ವರ್ಗದವರ ಅಹವಾಲುಗಳನ್ನು ಆಲಿಸುತ್ತಿಲ್ಲ. ಕೂಡಲೇ ಸರ್ಕಾರ ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಅಥವಾ ಸಿಬಿಐ ತನಿಖೆಗೆ ವಹಿಸಬೇಕು” ಎಂದು ಒತ್ತಾಯಿಸಿದರು.

Advertisements

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಮರ ಹಲಾಲ್‌ ಬಜೆಟ್‌ ಮಂಡಿಸಿದ್ದಾರೆ. ಹಿಂದುಳಿದ ಜನರ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡಲಾಗಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಲಿದೆ. ಬಿಜೆಪಿಯಲ್ಲಿ ಯಾರೂ ಸಂಧಾನಕ್ಕೆ ಸಿದ್ಧವಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು...

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

Download Eedina App Android / iOS

X