ಪ್ರತಿಪಕ್ಷಗಳಲ್ಲಿ ಪ್ರಧಾನಿ ಮೋದಿಗಿಂತ ಅನುಭವಿ ನಾಯಕರಿದ್ದಾರೆ: ತೇಜಸ್ವಿ ಯಾದವ್

Date:

Advertisements
  • ಸಭೆಯಲ್ಲಿ ಪ್ರತಿ ನಾಯಕರಿಂದ ಅಭಿಪ್ರಾಯ ಮಂಡನೆ ಎಂದ ತೇಜಸ್ವಿ ಯಾದವ್
  • ಜೂನ್‌ 23 ರಂದು ನಿತೀಶ್‌ ಕುಮಾರ್‌ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಭೆ

ಪ್ರತಿಪಕ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗಿಂತ ಹೆಚ್ಚು ಅನುಭವಿ ನಾಯಕರಿದ್ದಾರೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಗುರುವಾರ (ಜೂನ್ 22) ಅಭಿಪ್ರಾಯಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಾಟ್ನಾದಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಪಕ್ಷಗಳ ಸಭೆಯಲ್ಲಿ ಅನುಭವಿ ನಾಯಕರು ತಮ್ಮ ಅಭಿಪ್ರಾಯ ಮಂಡಿಸಲಿದ್ದಾರೆ ಎಂದು ತೇಜಸ್ವಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಸೋಲಿಸಲು ಅದರ ವಿರುದ್ಧ ಮಹಾಮೈತ್ರಿಕೂಟವನ್ನು ರೂಪಿಸುವ ನಿರಂತರ ಪ್ರಯತ್ನಗಳ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರತಿಪಕ್ಷಗಳ ಉನ್ನತ ನಾಯಕರ ಸಭೆಯನ್ನು ಕರೆದಿದ್ದಾರೆ.

Advertisements

“ಪ್ರಧಾನಿ ಮೋದಿಯವರಿಗಿಂತ ಹೆಚ್ಚು ಅನುಭವ ಹೊಂದಿರುವ ಅನೇಕ ನಾಯಕರು ಪ್ರತಿಪಕ್ಷದಲ್ಲಿದ್ದಾರೆ ಎಂಬ ಅಂಶವನ್ನು ಯಾರೂ ಅಲ್ಲಗಳೆಯುವಂತಿಲ್ಲ. ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯವನ್ನು ಮಂಡಿಸುತ್ತಾರೆ” ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೂನಿಯರ್‌ ಇಂಜಿನಿಯರ್‌ ಕಪಾಳಕ್ಕೆ ಬಾರಿಸಿದ ಬಿಜೆಪಿ ಬೆಂಬಲಿತ ಶಾಸಕಿ

“ಮುಂದಿನ ವರ್ಷ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹೆಸರನ್ನು ಬದಿಗಿಟ್ಟು ಜನರ ಸಮಸ್ಯೆಗಳ ಮುಂದಿಟ್ಟು ಹೋರಾಡಲಾಗುವುದು. ನಾಳಿನ ಸಭೆಯೂ ಬದಲಾವಣೆಯ ಧ್ವನಿಯನ್ನು ಒಂದುಗೂಡಿಸುತ್ತದೆ ಎಂಬುದು ಎಲ್ಲರಿಗೂ ಸ್ಪಷ್ಟವಾಗಿದೆ” ಎಂದು ತೇಜಸ್ವಿ ಹೇಳಿದರು.

“ನಿತೀಶ್ ಕುಮಾರ್ ಮತ್ತು ನಾನು ಒಗ್ಗೂಡಿದ ನಂತರ ಸಾಧ್ಯವಾದಷ್ಟು ಪ್ರತಿಪಕ್ಷಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸಿದ್ದೇವೆ. ಈ ಸಭೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸಮಾನ ಮನಸ್ಕ ಪ್ರತಿಪಕ್ಷಗಳ ಒಗ್ಗೂಡುವಿಕೆಗೆ ಅಡಿಪಾಯ ಹಾಕುವ ಗುರಿ ಹೊಂದಿದೆ” ಎಂದು ತೇಜಸ್ವಿ ಯಾದವ್‌ ಹೇಳಿದರು.

ಮುಂದಿನ ಲೋಕಸಭೆ ಚುನಾವಣೆಯನ್ನು ಗುರಿಯಲ್ಲಿಟ್ಟುಕೊಂಡು ನಿತೀಶ್‌ ಕುಮಾರ್‌ ಅವರು ಪ್ರತಿಪಕ್ಷಗಳನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಭೆಯು ಇದರ ಭಾಗವಾಗಿರಲಿದೆ ಎನ್ನಲಾಗಿದೆ. ಅಲ್ಲದೆ ಜೂನ್‌ 24 ರಂದು ಗೃಹ ಸಚಿವ ಅಮಿತ್‌ ಶಾ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಮಣಿಪುರದ ಹಿಂಸಾಚಾರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X