ಮನೆಯಲ್ಲಿ ತಾಯಿ ನಿಧನ, ಮಡುಗಟ್ಟಿದ ದುಃಖದ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

Date:

Advertisements

ವರ್ಷ ಪೂರ್ತಿ ಕಷ್ಟ ಪಟ್ಟು ಓದಿದ ವಿದ್ಯಾರ್ಥಿ, ಇನ್ನೇನು ವಾರ್ಷಿಕ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ಹೆತ್ತ ತಾಯಿ ನಿಧನರಾದರೆ ಪಾಪಾ ಆ ಹುಡುಗನ ಪರಿಸ್ಥಿತಿ ಹೇಗಾಗಬೇಡ? ಸುಮ್ಮನೇ ಊಹಿಸಿಕೊಂಡರೆ ಕರುಳು ಕಿವುಚುತ್ತೆ. ಆದರೆ ಇಂತಹ ಘಟನೆ ರಾಜ್ಯದಲ್ಲಿ ಇಂದು ನಡೆದಿದೆ.

ಶುಕ್ರವಾರ (ಮಾ.21) ಗಂಗಾವತಿಯಲ್ಲಿ ಈ ನೈಜ ಘಟನೆ ನಡೆದಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇಂದು ಆರಂಭವಾಗಿದ್ದು, ಬೆಳಿಗ್ಗೆ ಎದ್ದ ಹುಡುಗ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ತಾಯಿ ನಿಧನರಾಗಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆಸರಹಟ್ಟಿ ಗ್ರಾಮದ ಈ ಘಟನೆ ನಡೆದಿದೆ. ತಮ್ಮ ತಾಯಿ ಮೃತಪಟ್ಟ ದುಃಖದ ನಡುವೆಯೂ ಅಡಿವೆಯ್ಯಸ್ವಾಮಿ ಹಿರೇಮಠ ಎಂಬ ವಿದ್ಯಾರ್ಥಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದಾನೆ. ಶೈಕ್ಷಣಿಕ ಜೀವನಕ್ಕೆ ಮಹತ್ವ ನೀಡಿ, ಮಾದರಿಯಾಗಿದ್ದಾನೆ.

Advertisements

ಅಡಿವೆಯ್ಯಸ್ವಾಮಿ ಕೆಸರಹಟ್ಟಿ ಗ್ರಾಮದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದು, ತಾಯಿ ನಿಧನದ ಸುದ್ದಿಯ ನೋವಿನ ನಡುವೆಯೂ ಶಿಕ್ಷಕರು, ವಿದ್ಯಾರ್ಥಿ ಮತ್ತು ಅವರ ಕುಟುಂಬ ಸದಸ್ಯರ ಮನವೊಲಿಸಿ ವಿದ್ಯಾರ್ಥಿಯ ಪರೀಕ್ಷೆ ಬರೆಯಿಸಿದ್ದಾರೆ. ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿ ತಾಯಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದಾನೆ.

ಕೆಲ ದಿನಗಳ ಹಿಂದೆ ವಿದ್ಯಾರ್ಥಿಯ ತಾಯಿ ವಿಜಯಲಕ್ಷ್ಮಿ ಸಿದ್ದಯ್ಯಸ್ವಾಮಿ ಅವರು ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು. ರಕ್ತ ಹೆಪ್ಪುಗಟ್ಟಿದ್ದರಿಂದ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಅಂಜನಾದ್ರಿ‌ ದೇವಾಲಯ ಬಳಿಯ ಅಂಗಡಿಗಳಲ್ಲಿ ಸರಣಿ ಕಳ್ಳತನ; ಪೊಲೀಸರ ಭೇಟಿ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟ ಬಳಿಯ ಅಂಗಡಿಗಳಲ್ಲಿ...

ಕೊಪ್ಪಳ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಿಗೆ 6 ತಿಂಗಳು ಜೈಲು, ₹1000 ದಂಡ

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೊಪ್ಪಳ...

ಕೊಪ್ಪಳ | ಕೊಲೆಗೆ ಯತ್ನಿಸಿದ ಆರೋಪ ಸಾಬೀತು; ಅಪರಾಧಿಗೆ 7 ವರ್ಷ ಜೈಲು

ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿಯ...

ಕೊಪ್ಪಳ | ವಿಸ ಉಪ ಚುನಾವಣೆ ಸನ್ನಿಹಿತ; ಪೂರ್ವ ಸಿದ್ಧತೆಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೂಚನೆ

ಕೊಪ್ಪಳದ ಗಂಗಾವತಿ ವಿಧಾನ ಸಭಾ ಉಪ ಚುನಾವಣೆ ಸನ್ನಿಹಿತವಾಗಿದ್ದು, ಸಕಲ ಸಿದ್ಧತೆ...

Download Eedina App Android / iOS

X