ಬೆಳಗಾವಿ | ರಾಮದುರ್ಗ ಪುರಸಭೆ: ₹4.98 ಲಕ್ಷ ಉಳಿತಾಯ ಬಜೆಟ್‌ಗೆ ಅನುಮೋದನೆ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ 2025-26ನೇ ಸಾಲಿನ ₹33.81 ಕೋಟಿ ಆಯವ್ಯಯ ಬಜೆಟ್ ನ್ನು ಅಂಗೀಕರಿಸಲಾಯಿತು. ಪುರಸಭೆ ಸದಸ್ಯರು ₹4.98 ಲಕ್ಷ ಉಳಿತಾಯ ಬಜೆಟ್‌ಗೆ ಒಪ್ಪಿಗೆ ನೀಡಿದರು.

ಪುರಸಭೆಯ ಸ್ಥಳೀಯ ಅಭಿವೃದ್ಧಿ ಕಾಮಗಾರಿ, ಸಿಬ್ಬಂದಿ ವೇತನ, ಕುಡಿಯುವ ನೀರು, ಬೀದಿ ದೀಪಗಳು ಸೇರಿದಂತೆ ರಾಜಸ್ವ ಖಾತೆಗೆ ₹1,22,97,700, ಬಂಡವಾಳ ಖಾತೆಗೆ ₹5,57,80,000, ಮತ್ತು ಅಸಾಧಾರಣ ಖಾತೆಗೆ ₹15,88,76,009 ವೆಚ್ಚ ಮಾಡಲಾಗುವುದು.

ರಾಜ್ಯ ಮತ್ತು ಕೇಂದ್ರ ಅನುದಾನ:

Advertisements

ರಾಜ್ಯ ಹಣಕಾಸು ಆಯೋಗದಿಂದ ₹9 ಲಕ್ಷ ಅನುದಾನ

ಕೇಂದ್ರ ಹಣಕಾಸು ಆಯೋಗದಿಂದ ₹185 ಲಕ್ಷ ಅನುದಾನ

ಈ ಅನುದಾನಗಳ ಕ್ರಿಯಾಯೋಜನೆ ಸಿದ್ಧಪಡಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.

ಮಹತ್ವದ ನಿರ್ಧಾರಗಳು:

✔ ಆಸ್ತಿ ತೆರಿಗೆ ಶೇ.3% ಹೆಚ್ಚಳ – ಸಭೆಯಲ್ಲಿ ಚರ್ಚಿಸಿ ಅನುಮೋದನೆ.
✔ ಕುಡಿಯುವ ನೀರಿನ ಬಿಲ್ ₹80ರಿಂದ ₹70ಕ್ಕೆ ಇಳಿಸುವ ಒತ್ತಾಯ – ಜನರ ಸಹಲಾಭಕ್ಕಾಗಿ.
✔ ಒಟ್ಟು ₹33.81 ಕೋಟಿ ವೆಚ್ಚ ನಿರ್ಧಾರ – ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುದಾನ ವಿಂಗಡಣೆ.
✔ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸ್ಥಳೀಯ ತೆರಿಗೆ ಸೇರಿ ಪುರಸಭೆಗೆ ₹12.54 ಕೋಟಿ ಆದಾಯ ನಿರೀಕ್ಷೆ.

ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಕಡಕೋಳ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಪುರಸಭೆ ಉಪಾಧ್ಯಕ್ಷೆ ಸರಿತಾ ಧೂತ, ಮುಖ್ಯಾಧಿಕಾರಿ ಈರಣ್ಣ ಗುಡದಾರಿ ಸೇರಿದಂತೆ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ರಾಮಪ್ಪ ಬೆಂಬಳಗಿ ಬಜೆಟ್ ಮಂಡನೆ ಮಂಡಿಸಿ, ಸಭೆಯ ಅನುಮೋದನೆ ಪಡೆಯಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X