ಚಿಕ್ಕಮಗಳೂರು l ಕುಡಿದ ಅಮಲಿನಲ್ಲಿ ಸುಳ್ಳು ಹೇಳಿ ಆಂಬುಲೆನ್ಸ್ ಕರೆಸಿದ ಕುಡುಕ 

Date:

Advertisements

ಎಣ್ಣೆ ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ 108 ಕ್ಕೆ ಕರೆ ಮಾಡಿ ಬಸ್ ನಿಲ್ದಾಣ ಬಳಿ ಗಲಾಟೆ ಆಗುತ್ತಿದೆ ಬೇಗ ಬನ್ನಿ, ಎಂದು ಸುಳ್ಳು ಹೇಳಿ ಆಂಬುಲೆನ್ಸ್ ಕರೆಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ  ಶೃಂಗೇರಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿ ನಡೆದಿದೆ.

ಶೃಂಗೇರಿ ಹಾಗೂ ಕೊಪ್ಪ ತಾಲ್ಲೂಕಿನಲ್ಲಿ 108 ಆಂಬುಲೆನ್ಸ್ ಇರುವುದೇ ಕಡಿಮೆ. ಇದರ ಪರಿಣಾಮವಾಗಿ ಸುಮಾರು 45 ಕಿ. ಮೀ ದೂರವಿರುವ ಬಾಳೆಹೊನ್ನೂರು ಹೋಬಳಿಯಿಂದ 108 ಆಂಬುಲೆನ್ಸ್ ಬಂದಿದೆ‌. ಸ್ಥಳಕ್ಕೆ ಆಂಬುಲೆನ್ಸ್ ಸಿಬ್ಬಂದಿಗಳು ಬಂದು ನೋಡಿದಾಗ ಯಾವ ಗಲಾಟೆಯೂ ಇಲ್ಲ. ಅನಾರೋಗ್ಯ ಪೀಡಿತರಾಗಿರುವವರು ಇಲ್ಲವೆಂದು ತಿಳಿದಾಗ, ಕುಡುಕನ ಹುಚ್ಚಾಟಕ್ಕೆ ಸಿಬ್ಬಂದಿಗಳಿಗೆ ಸಮಯ ವ್ಯರ್ಥಮಾಡಿದಂತಾಗಿದೆ.

ಈ ಘಟನೆ ಕುರಿತು ಆಂಬುಲೆನ್ಸ್ ಸಿಬ್ಬಂದಿಗಳು 112ಕ್ಕೆ ಕರೆ ಮಾಡಿ ವಿಚಾರ ತಿಳಿಸಿದಾಗ, ಪೊಲೀಸರು ಕುಡಿತ ವ್ಯಕ್ತಿಗೆ ಕರೆ ಮಾಡಿ ವಿಚಾರಿಸಿದಾಗ ನಾನು ಭೂಮಿ ಮೇಲೆ, ಆಕಾಶದ ಕೆಳಗೆ ಇದ್ದೀನಿ.. ತಾಕತ್ತಿದ್ರೆ ನನ್ನ ಹಿಡೀರಿ ನೋಡೋಣ’ ಎಂದು ಪೊಲೀಸರಿಗೆ ಸವಾಲು ಹಾಕಿದ್ದಾನೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಹಾಡ್ ಸತ್ಯಗ್ರಹ ನೆನಪಿನಲ್ಲಿ ಶೋಷಿತರ ಸಂಘರ್ಷ ಕಾರ್ಯಕ್ರಮ ಯಶಸ್ವಿ; ದಸಂಸ

ಪೊಲೀಸರು ಹಾಗೂ ಸ್ಥಳೀಯರು ಹುಡುಕಿದರೂ ಕೆಲವು ಕಾಲ ವ್ಯಕ್ತಿ ಸಿಕ್ಕಿರಲಿಲ್ಲ. ನಂತರ ಶೃಂಗೇರಿ ಪಟ್ಟಣದ ವೈನ್ ಅಂಗಡಿ ಬಳಿ ಇದ್ದ, ಪಟ್ಟಣದ ಆಟೋ ಚಾಲಕರು ಕುಡುಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X