ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಿದೆ.
ಗೌರವ ಡಾಕ್ಟರೇಟ್ಗೆ ಭಾಜನರಾಗಿರುವವರು:
- ಸತೀಶ್ ಜಾರಕಿಹೊಳಿ – ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ
- ಸಿ.ಎಂ. ಇರ್ಪಾನುಲ್ಲಾ ಷರೀಫ್ – ಐಡಿಯಲ್ ಎಜ್ಯುಕೇಷನ್ ಸೊಸೈಟಿಯ ಛೇರ್ಮನ್
- ಡಾ. ದಾಕ್ಷಯಿಣಿ ಎಸ್. ಅಪ್ಪ – ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಛೇರ್ಮನ್
ರಾಜ್ಯಪಾಲ ಮತ್ತು ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹಲೋಠ್ ಅವರ ಅನುಮೋದನೆಯೊಂದಿಗೆ, ರಾಜ್ಯಪಾಲರ ಅಧೀನ ಕಾರ್ಯದರ್ಶಿ ಬಿ.ಬಿ. ಪ್ರಶಾಂತ್ ಕುಮಾರ್ ಅವರು KSOU ಉಪಕುಲಪತಿಗೆ ಈ ಕುರಿತು ಅಧಿಕೃತ ಪತ್ರವನ್ನು ಮಾರ್ಚ್ 13, 2025 ರಂದು ರವಾನಿಸಿದ್ದಾರೆ.
KSOU ತನ್ನ 20ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಗೌರವ ಡಾಕ್ಟರೇಟ್ ಪದವಿಗಳನ್ನು ಅಧಿಕೃತವಾಗಿ ಪ್ರಧಾನ ಮಾಡಲಿದೆ.