ಕಿರುಚಿದರೆ ಕತ್ತು ಹಿಸುಕುತ್ತೇನೆ: ಪ್ರತಿಭಟನಾನಿರತ ಮಹಿಳೆಯರಿಗೆ ಬೆದರಿಕೆ ಹಾಕಿದ ಬಿಜೆಪಿ ನಾಯಕ

Date:

Advertisements

ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಶುಕ್ರವಾರ ಪ್ರತಿಭಟನಾನಿರತ ಮಹಿಳೆಯರ ಗುಂಪಿನೊಂದಿಗೆ ತೀವ್ರ ವಾಗ್ವಾದ ನಡೆಸಿದ್ದು, “ಕಿರುಚಬೇಡಿ, ನಿಮ್ಮ ಕತ್ತು ಹಿಸುಕುತ್ತೇನೆ” ಎಂದು ಮಹಿಳೆಯರಿಗೆ ಬೆದರಿಕೆ ಹಾಕಿದ್ದಾರೆ.

ಮಹಿಳೆಯರು ಕ್ಷೇತ್ರದ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಗೆಯೇ ದಿಲೀಪ್ ಘೋಷ್ ಸಂಸದರಾಗಿದ್ದ ಸಂದರ್ಭದಲ್ಲಿ ಒಮ್ಮೆಯೂ ಕ್ಷೇತ್ರದಲ್ಲಿ ನೋಡಿಲ್ಲ ಎಂದು ಮಹಿಳೆಯರು ದೂರಿದರು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಪಿಎಸ್​ಐ ಮೇಲೆ ಬಿಜೆಪಿ ಮುಖಂಡನಿಂದ ಹಲ್ಲೆ

Advertisements

ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ರಸ್ತೆ ಉದ್ಘಾಟನೆಯ ಸಂದರ್ಭದಲ್ಲಿ ಈ ಘರ್ಷಣೆ ಸಂಭವಿಸಿದೆ. ಸ್ಥಳೀಯ ಮಹಿಳೆಯರು ಮಾಜಿ ಬಿಜೆಪಿ ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದು, ತೀವ್ರ ವಾಗ್ವಾದ ಏರ್ಪಟ್ಟಿತು. ದಿಲೀಪ್ ಘೋಷ್ ಅವಾಚ್ಯ ಪದಗಳನ್ನು ಬಳಸಿ ಮಹಿಳೆಯರಿಗೆ ಬೈದಿದ್ದು, “ಕಿರುಚಬೇಡಿ, ಕೂಗಾಡಿದರೆ ನಿಮ್ಮ ಕತ್ತು ಹಿಸುಕುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ.

ಪುರಸಭೆಯಿಂದ ರಸ್ತೆ ನಿರ್ಮಿಸಲಾಗುತ್ತಿದ್ದರೂ ಬಿಜೆಪಿ ನಾಯಕ ರಸ್ತೆ ಉದ್ಘಾಟನೆಗೆ ಏಕೆ ಹಾಜರಾಗುತ್ತಿದ್ದಾರೆ ಎಂದು ಮಹಿಳೆಯರು ಪ್ರಶ್ನಿಸಿದ್ದಾರೆ. ಈ ವೇಳೆ “ಇದಕ್ಕೆ ನಾನು ಹಣ ನೀಡಿದ್ದೇನೆ; ಇದು ನಿಮ್ಮ ಅಪ್ಪನ ಹಣವಲ್ಲ. ಹೋಗಿ ಪ್ರದೀಪ್ ಸರ್ಕಾರ್ (ಸ್ಥಳೀಯ ಟಿಎಂಸಿ ಕೌನ್ಸಿಲರ್) ಅವರನ್ನು ಕೇಳಿ” ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

“ತಂದೆಯನ್ನು ಮಧ್ಯ ತರುವುದೇಕೆ? ನೀವು ಇಲ್ಲಿ ಈ ಹಿಂದೆ ಸಂಸರಾಗಿದ್ದದ್ದು” ಎಂದು ಮಹಿಳೆಯೊಬ್ಬರು ಪ್ರತ್ಯುತ್ತರ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಘೋಷ್, “ನಾನು ನಿಮ್ಮ ಹದಿನಾಲ್ಕು ತಲೆಮಾರುಗಳನ್ನು ಬೆಳೆಸುತ್ತೇನೆ” ಎಂದು ಹಣದ ದರ್ಪದಿಂದ ನುಡಿದಿದ್ದಾರೆ.

ಘೋಷ್ ಅವರ ಭದ್ರತಾ ಸಿಬ್ಬಂದಿ ಮತ್ತು ಬಿಜೆಪಿ ಕಾರ್ಯಕರ್ತರು ಮಧ್ಯಪ್ರವೇಶಿಸಲು ಪ್ರಯತ್ನಿಸುತ್ತಿದ್ದಂತೆ ಮಹಿಳೆಯರು ಘೋಷ್ ಅವರ ಕಾರನ್ನು ಸುತ್ತುವರೆದರು. ಈ ನಡುವೆ ಪ್ರತಿಭಟನಾಕಾರರು ಟಿಎಂಸಿ ಬೆಂಬಲಿಗರು ಎಂದು ಘೋಷ್ ಆರೋಪಿಸಿದ್ದಾರೆ.

ಬಿಜೆಪಿ ನಾಯಕನ ಈ ವರ್ತನೆಯನ್ನು ಟಿಎಂಸಿ ಖಂಡಿಸಿದೆ. ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ ಕೆಲವ ಬಿಜೆಪಿ ಕಾರ್ಯಕರ್ತರು ಘೋಷ್ ಮಹಿಳೆಯರಿಗೆ ಬೆದರಿಕೆ ನೀಡಿರುವುದನ್ನು ಹಾಡಿ ಹೊಗಳಿದ್ದಾರೆ. ಬಿಜೆಪಿ ನಾಯಕನ ವರ್ತನೆ ಖಂಡನಾರ್ಹ ಮತ್ತು ಅಧಿಕಾರ, ಹಣದ ದರ್ಪ ಸ್ಪಷ್ಟವಾಗಿ ಕಾಣುತ್ತಿದೆ ಎಂದು ನೆಟ್ಟಿಗರು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X