‘ನಾನು ನಾಯಕನಲ್ಲ, ಖಳನಾಯಕ’- ಸಿಎಂ ನಿತೀಶ್‌ ಮನೆ ಮುಂದೆ ಹಾಕಿದ್ದ ಬ್ಯಾನರ್ ಚಿತ್ರ ವೈರಲ್

Date:

Advertisements

ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಆಡಳಿತಾರೂಢ ಜೆಡಿಯು ಮತ್ತು ಬಿಜೆಪಿ, ವಿಪಕ್ಷ ಆರ್‌ಜೆಡಿ ಮತ್ತು ಕಾಂಗ್ರೆಸ್‌ ಚುನಾವಣಾ ಸಿದ್ದತೆಯನ್ನು ಆರಂಭಿಸಿವೆ. ಈ ನಡುವೆ, ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್‌ ಕುಮಾರ್ ಅವರ ನಿವಾಸದ ಮುಂದೆ ‘ನಾನು ನಾಯಕನಲ್ಲ, ಖಳನಾಯಕ’ ಎಂಬ ಬರಹವಿರುವ ಬೃಹತ್ ಬ್ಯಾನರ್ ಹಾಕಲಾಗಿದೆ. ಅದರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬ್ಯಾನರ್‌ಅನ್ನು ಆರ್‌ಜೆಡಿ ಹಾಕಿದೆ ಎಂದು ಹೇಳಲಾಗಿದೆ. ಬ್ಯಾನರ್‌ನಲ್ಲಿ ‘ನಾನು ನಾಯಕನಲ್ಲ, ಖಳನಾಯಕ’ ಎಂದು ಬರೆದಿರುವುದು ಮಾತ್ರವಲ್ಲದೆ, ‘ನಿತೀಶ್ ಕುಮಾರ್ ಮಹಿಳೆಯರನ್ನು ಅವಮಾನಿಸಿದ್ದಾರೆ. ನಿತೀಶ್ ಕುಮಾರ್ ಅವರು ಮಹಾತ್ಮ ಗಾಂಧಿ ಮತ್ತು ರಾಷ್ಟ್ರಗೀತೆಯನ್ನು ಅಪಮಾನಿಸಿದ್ದಾರೆ’ ಎಂದೂ ಬರೆಯಲಾಗಿದೆ.

ಗುರುವಾರ ‘ಪಾಟ್ಲಿಪುತ್ರ ಕ್ರೀಡಾ ಸಂಕೀರ್ಣ’ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿತೀಶ್ ಕುಮಾರ್ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ಸಮಯದಲ್ಲಿ ತಮ್ಮ ಪ್ರಧಾನ ಕಾರ್ಯದರ್ಶಿಯೊಂದಿಗೆ ನಗುತ್ತಾ ಮಾತನಾಡಿದ್ದರು. ಆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನಿತೀಶ್‌ ಕುಮಾರ್ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಶುಕ್ರವಾರ ರಾಜ್ಯ ಅಧಿವೇಶನದಲ್ಲಿಯೂ ಚರ್ಚೆಯಾಗಿತ್ತು. ವಿಪಕ್ಷಗಳು ತೀವ್ರವಾಗಿ ಟೀಕಿಸಿದ್ದವು.

Advertisements

ಅಧಿವೇಶನದಲ್ಲಿ ವಿಪಕ್ಷವಾದ ಆರ್‌ಜೆಡಿ ಶಾಸಕರು ಪೋಸ್ಟರ್ ಮತ್ತು ಬ್ಯಾನರ್‌ ಹಿಡಿದು ನಿತೀಶ್‌ ಕುಮಾರ್ ವರ್ತನೆಯನ್ನು ಖಂಡಿಸಿದ್ದರು. ‘ಭಾರತದಲ್ಲಿ ರಾಷ್ಟ್ರಗೀತೆಗೆ ಅವಮಾನ ಮಾಡುವುದವನ್ನು ಸಹಿಸಲಾಗುವುದಿಲ್ಲ’ ಎಂದು ಘೋಷಣೆ ಕೂಗಿದ್ದರು. ರಾಷ್ಟ್ರಗೀತೆಗೆ ಅವಮಾನಿಸಿದ್ದರ ಬಗ್ಗೆ ಚರ್ಚೆ ನಡೆಸಬೇಕೆಂದು ವಿಪಕ್ಷ ನಾಯಕ ತೇಜಸ್ವಿ ಯಾದವ್ ಒತ್ತಾಯಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X