ಮೈಸೂರು | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ತಪ್ಪಿಸಿಕೊಳ್ಳಲು ಯತ್ನ; ಆರೋಪಿ ಕಾಲಿಗೆ ಗುಂಡು

Date:

Advertisements

ಮೈಸೂರು ಜಿಲ್ಲಾ ವ್ಯಾಪ್ತಿಯ ಜಯಪುರದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ, ಕೊಲೆ ಪ್ರಯತ್ನ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಸದರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಗ್ರಾಮಾಂತರ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಚ್ಚೇಗೌಡನಪುರ ಗ್ರಾಮದ ಬಳಿ ದಿನಾಂಕ -20-01-2025 ರಂದು ನಡೆದ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯಚರಣೆಗೆ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ರವರು ತಂಡಗಳನ್ನು ರಚಿಸಿದ್ದರು.

ಅದರಂತೆ, ಆರೋಪಿಗಳಾದ ಕೇರಳ ಮೂಲದ ಆದರ್ಶ ಎಂ, ಮುರುಗನ್ ಬಿನ್ ಲೇಟ್ ಮುತ್ತು, ವಿಜೇಶ್ ಬಿನ್ ವಿಜಯನ್, ಶ್ರೀಜಿತ್ ಬಿನ್ ಪೊನ್ನಪ್ಪನ್ ಇವರುಗಳನ್ನು ದಿನಾಂಕ-21-03-2025 ರಂದು ವಶಕ್ಕೆ ಪಡೆದು, ಮೈಸೂರು ಗ್ರಾಮಾಂತರ ವೃತ್ತ ನಿರೀಕ್ಷಕ ಶಿವನಂಜ ಶೆಟ್ಟಿ ತನಿಖೆ ಕೈಗೊಂಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಪೊಲೀಸ್ ವಶದಲ್ಲಿದ್ದ ಆದರ್ಶ ಮುರುಗನ್ ಎಂಬಾತನೊಂದಿಗೆ ಕೃತ್ಯ ನಡೆದ ಸ್ಥಳದ ಪರಿಶೀಲನೆಗಾಗಿ ವೃತ್ತ ನಿರಿಕ್ಷಕ ಶಿವನಂಜ ಶೆಟ್ಟಿ ಮತ್ತು ಬೈಲಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ತೆರಳಿದ್ದರು. ರಾತ್ರಿ ಜಯಪುರ ಠಾಣಾ ಸರಹದ್ದಿನ ಗೋಪಾಲಪುರ ಗ್ರಾಮದ ರಸ್ತೆಯ ಬಳಿ ಹೋಗಿದ್ದಾಗ ಆದರ್ಶ ತುರ್ತಾಗಿ ಮೂತ್ರ ವಿಸರ್ಜನೆ ಮಾಡುವ ನೆಪದಲ್ಲಿ ಸ್ಥಳದಲ್ಲಿ ಬಿದ್ದಿದ್ದ ಗಾಜಿನ ಬಿಯರ್ ಬಾಟಲಿನಿಂದ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲೆ ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿ, ತಪ್ಪಿಸಿಕೊಂಡು ಓಡಲೆತ್ನಿಸಿದಾಗ ವೃತ್ತ ನಿರೀಕ್ಷಕ ಶಿವನಂಜ ಶೆಟ್ಟಿ ತಮ್ಮ ಪಿಸ್ತೂಲ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ತಪ್ಪಿಸಿಕೊಳ್ಳಲು ಆರೋಪಿ ಯತ್ನಿಸಿದಾಗ ಬೈಲುಕುಪ್ಪೆ ವೃತ್ತ ನಿರೀಕ್ಷಕ ದೀಪಕ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದರಿ ಆರೋಪಿಯ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿರುತ್ತದೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X