ನಗದು ಸಿಕ್ಕ ಪ್ರಕರಣ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ವಿಚಾರಣೆಗೆ ಮೂವರ ಸದಸ್ಯರ ಸಮಿತಿ

Date:

Advertisements

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧ ನಗದು ಪತ್ತೆ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ.

ಅಗ್ನಿ ಅವಘಡದ ನಂತರ ನ್ಯಾಯಮೂರ್ತಿ ವರ್ಮ ಅವರ ಅಧಿಕೃತ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿತ್ತು.

ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ಕೆ ಉಪಾಧ್ಯಾಯ ಅವರಿಂದ ವರದಿ ಪಡೆದ ನಂತರ ಸಿಜೆಐ ಖನ್ನಾ ಅವರು ಆಂತರಿಕ ವಿಚಾರಣೆಗೆ ಸಮಿತಿ ರಚಿಸಿ ಆದೇಶ ಹೊರಡಿಸಿದರು. ನ್ಯಾಯಮೂರ್ತಿ ವರ್ಮ ಅವರಿಗೆ ನ್ಯಾಯಾಂಗಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಈಗ ವಹಿಸಬಾರದು ಎಂದು ಸಿಜೆಐ ಅವರು ನ್ಯಾಯಮೂರ್ತಿ ಉಪಾಧ್ಯಾಯ ಅವರಿಗೆ ಸೂಚಿಸಿದ್ದಾರೆ.

Advertisements

ವಿಚಾರಣಾ ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ ಎಸ್ ಸಂಧಾವಾಲಿಯಾ, ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಇದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

‘ನ್ಯಾಯಮೂರ್ತಿ ಉಪಾಧ್ಯಾಯ ಅವರು ಸಲ್ಲಿಸಿದ ವರದಿ, ನ್ಯಾಯಮೂರ್ತಿ ವರ್ಮ ಅವರ ಪ್ರತಿಕ್ರಿಯೆ ಮತ್ತು ಇತರ ದಾಖಲೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತಿದೆ’ ಎಂದು ಸುಪ್ರೀಂ ಕೋರ್ಟ್‌ನ ಪ್ರಕಟಣೆ ತಿಳಿಸಿದೆ.

ನ್ಯಾಯಮೂರ್ತಿ ವರ್ಮ ಅವರ ಅಧಿಕೃತ ನಿವಾಸದಲ್ಲಿ ಮಾರ್ಚ್‌ 14ರ ರಾತ್ರಿ ಬೆಂಕಿ ಹೊತ್ತಿಕೊಂಡಾಗ, ಅದನ್ನು ಆರಿಸಲು ಅಗ್ನಿಶಾಮಕ ಸಿಬ್ಬಂದಿ ಅಲ್ಲಿಗೆ ಧಾವಿಸಿದರು. ಆಗ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎನ್ನಲಾಗಿದೆ.

ಆದರೆ, ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎಂಬ ಹೇಳಿಕೆಗಳನ್ನು ದೆಹಲಿ ನ್ಯಾಯಮೂರ್ತಿ ಯಶವಂತ ವರ್ಮ ಅವರು ಅಲ್ಲಗಳೆದಿದ್ದು, ಇದು ಸಂಪೂರ್ಣ ಅಸಂಬದ್ಧ ಹಾಗೂ ನಂಬಲಾಗದು. ಹಣ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಸೇರಿಲ್ಲ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X