₹13,850 ಕೋಟಿ ವಂಚನೆ: ಭಾರತದಿಂದ ಪರಾರಿಯಾಗಿದ್ದ ‘ಮೆಹುಲ್ ಚೋಕ್ಸಿ’ ಬೆಲ್ಜಿಯಂನಲ್ಲಿ ವಾಸ

Date:

Advertisements

ಭಾರತದ ಸರ್ಕಾರಿ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದು, ವಂಚಿಸಿ, ದೇಶದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಬೆಲ್ಜಿಯಂಗೆ ಭಾರತ ವಿನಂತಿಸಿದೆ ಎಂದು ವರದಿಯಾಗಿದೆ.

ಚೋಕ್ಸಿ ಅವರು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 13,850 ಕೋಟಿ ರೂ. ಸಾಲ ಮಾಡಿದ್ದಾರೆ. ಆದರೆ, ಸಾಲವನ್ನು ಮರುಪಾವತಿ ಮಾಡಿಲ್ಲ. ಅವರು 2018ರಲ್ಲಿ ಭಾರತದಿಂದ ಪಲಾಯನ ಮಾಡಿದ್ದಾರೆ. ಅವರ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ.

“ಭಾರತದಿಂದ ಪರಾರಿಯಾಗಿದ್ದ ಚೋಕ್ಸಿ ಆರಂಭದಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇತ್ತೀಚಿನ ಮಾಹಿತಿಯಂತೆ ಅವರು ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅಸೋಸಿಯೇಟೆಡ್ ಟೈಮ್ಸ್ ವರದಿ ಮಾಡಿದೆ. ಆದರೆ, ಭಾರತ ಸರ್ಕಾರ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.

Advertisements

ಚೋಕ್ಸಿ ರಕ್ತ ಕ್ಯಾನ್ಸರ್‌ನಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಮೆಹುಲ್ ಚೋಕ್ಸಿ ಅವರು ಭಾರತದ ಮತ್ತೊಬ್ಬ ವಜ್ರದ ಉದ್ಯಮಿ, ವಂಚಕ ನೀರವ್ ಮೋದಿ ಅವರ ಸೋದರ ಸಂಬಂಧಿಯಾಗಿದ್ದಾರೆ. ನೀರವ್ ಮೋದಿ ಕೂಡ ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ಗೆ 13,500 ಕೋಟಿ ರೂ. ವಂಚಿಸಿದ್ದು, ಅವರೂ ದೇಶಬಿಟ್ಟು ಪರಾರಿಯಾಗಿದ್ದಾರೆ. ಅತನನ್ನು ಲಂಡನ್ ಅಧಿಕಾರಿಗಳು ಬಂಧಿಸಿದ್ದು, ಲಂಡನ್ ಜೈಲಿನಲ್ಲಿ ಇರಿಸಲಾಗಿದೆ. ಆತನನ್ನೂ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X