ಧಾರವಾಡ | ವಾಮಮಾರ್ಗದಿಂದ ವಿದ್ಯುತ್ ದರ ಏರಿಕೆ ಮಾಡುವುದು ಅಕ್ಷಮ್ಯ: ಶಾಸಕ ಅರವಿಂದ ಬೆಲ್ಲದ

Date:

Advertisements

ಗೃಹಜ್ಯೋತಿ ಯೋಜನೆಯ ಅಡಿ ಉಚಿತ ವಿದ್ಯುತ್‌ ನೀಡಲಿ. ಆದರೆ, ವಾಮಮಾರ್ಗದ ಮೂಲಕ ವಿದ್ಯುತ್‌ ದರ ಏರಿಕೆ ಮಾಡುವುದು ತಪ್ಪಾಗುತ್ತದೆ ಎಂದು ಧಾರವಾಡ ಪಶ್ಚಿಮ‌ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು.

ಗುರುವಾರ ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, “ವಿದ್ಯುತ್‌ ವಿತರಣಾ ಸಂಸ್ಥೆ ಕೇಳಿದ ಪ್ರಮಾಣಕ್ಕಿಂತ ಹೆಚ್ಚು ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಆಗ್ರಹಿಸಿ ಇತಿಹಾಸದಲ್ಲೇ ಮೊದಲ ಬಾರಿಗೆ ವಾಣಿಜ್ಯೋದ್ಯಮ ಸಂಘದ ಸದಸ್ಯರು ರಾಜ್ಯಾದ್ಯಂತ ಬಂದ್‌ ಕರೆ ನೀಡಿದ್ದಾರೆ” ಎಂದು ಅವರು ಹೇಳಿದರು.

“ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರ ಕೈಗೊಂಡ ನಿರ್ಧಾರ ತಪ್ಪಾಗಿದೆ. ವಿದ್ಯುತ್ ಹೆಚ್ಚಳದಿಂದ ಕೈಗಾರಿಕೋದ್ಯಮಿಗಳು ಬೇರೆ ರಾಜ್ಯಗಳತ್ತ ಗಮನ ಹರಿಸುತ್ತವೆ. ಆಗ ಸಹಜವಾಗಿ ಕರ್ನಾಟಕದಲ್ಲಿ ನಿರುದ್ಯೋಗ ಸೃಷ್ಟಿಯಾಗುತ್ತದೆ” ಎಂದು ಮುನ್ನೆಚ್ಚರಿಕೆ ನೀಡಿದರು.

Advertisements

ಹುಬ್ಬಳ್ಳಿ ಧಾರವಾಡ ಮಾರ್ಗಮದ್ಯದಲ್ಲಿ ಸಂಚರಿಸುವ ಬಿಆರ್‌ಟಿಎಸ್ ಚಿಗರಿ ಬಸ್ಸಿನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X