ರಾಘವೇಂದ್ರ ಸ್ವಾಮಿ ಮಠಕ್ಕೆ 3 ಕೋಟಿ ರೂಪಾಯಿಗೂ ಅಧಿಕ ನಗದು, 32 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ ದೇಣಿಗೆ

Date:

Advertisements

ರಾಜ್ಯದ ರಾಯಚೂರಿನ ದೇವಾಲಯಕ್ಕೆ ಒಟ್ಟು 3,48,69,621 ರೂ. ನಗದು, 32 ಗ್ರಾಂ ಚಿನ್ನ ಮತ್ತು 1.24 ಕೆಜಿ ಬೆಳ್ಳಿಯನ್ನು ದಾನ ಮಾಡಲಾಗಿದೆ. ರಾಘವೇಂದ್ರ ಸ್ವಾಮಿ ಮಠದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಘವೇಂದ್ರ ಸ್ವಾಮಿ ಮಠದಲ್ಲಿ ನೂರಕ್ಕೂ ಹೆಚ್ಚು ಅರ್ಚಕರು ದೇಣಿಗೆಗಳನ್ನು ಎಣಿಸುತ್ತಿರುವುದನ್ನು ತೋರಿಸುವ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಇದನ್ನು ಓದಿದ್ದೀರಾ? ಕಟ್ಟುಪಾಡು ದಾಟಿ ಹೃದಯ ಸ್ಪರ್ಶಿಸುವ ಬ್ರಹ್ಮಚರ್ಯದ ಗೋಳಿನ ಕತೆ ‘ರಾಘವೇಂದ್ರ ಸ್ಟೋರ್ಸ್‌’

Advertisements

16ನೇ ಶತಮಾನದ ಸಂತ ರಾಘವೇಂದ್ರ ಸ್ವಾಮಿಗಳ ಜನ್ಮ ದಿನಾಚರಣೆ ಆಚರಣೆ ವೇಳೆ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದು, 30 ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ.

ಇನ್ನು ಕಳೆದ ವರ್ಷ, ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಕೂಡ ಬೆಂಗಳೂರಿನಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ತಮ್ಮ ಮಗಳು ಮತ್ತು ಅಳಿಯನೊಂದಿಗೆ ಮಠಕ್ಕೆ ಬಂದಿದ್ದರು. ಹಾಗೆಯೇ ಹಲವು ಗಣ್ಯರು ಮಠಕ್ಕೆ ಭೇಟಿ ನೀಡಿದ್ದರು.

ಸದ್ಯ ನೆಟ್ಟಿಗರು ಒಂದು ತಿಂಗಳಲ್ಲೇ ಇಷ್ಟೊಂದು ಹಣ ದೇಣಿಗೆಯಾಗಿ ಸಂಗ್ರಹವಾಗಿರುವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X