ರಾಯಚೂರು | ಅವೈಜ್ಞಾನಿಕ ತಾಲೂಕು ಘೋಷಣೆ; ರದ್ದುಗೊಳಿಸಲು ಆಗ್ರಹ

Date:

Advertisements

ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ರಾಯಚೂರು ಜಿಲ್ಲೆಗೆ ಹೊಸದಾಗಿ ಅರಕೇರಾ ತಾಲೂಕನ್ನು ಘೋಷಣೆ ಮಾಡಿದ್ದಾರೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ರದ್ದುಪಡಿಸಬೇಕೆಂದು ಸಾಮಾಜಿಕ ಹೋರಾಟಗಾರ ವಿ ಎಂ ಮೇಟಿ ಆಗ್ರಹಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈ ಪಂಚಾಯ್ತಿ ವ್ಯಾಪ್ತಿಯಲ್ಲಿ ಜಾಲಹಳ್ಳಿ, ಹೊಸೂರು, ಸಿದ್ದಾಪುರ, ಸೋಮನ ಮರಡಿ, ಸುಂಕೇಶ್ವರಹಾಳ, ರಾಮದುರ್ಗ ಜಿನ್ನಾಪುರ, ಸೇರಿದಂತೆ ಹಲವಾರು ಗ್ರಾಮಗಳಿವೆ. ತಾಲೂಕು ಘೋಷಣೆ ಮಾಡುವ ಮೊದಲು ಗ್ರಾಮಸ್ಥರ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸುವ ಸಣ್ಣ ಇರಾದೆ ತೋರಿಲ್ಲ. ರಾಜಕೀಯ ಬಲದಿಂದ, ಸ್ವ ಲಾಭಕ್ಕಾಗಿ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ವಿರೋಧದ ನಡುವೆಯೂ ತಾಲೂಕು ಘೋಷಣೆ ಮಾಡಿದ್ದಾರೆ” ಎಂದು ಆರೋಪಿಸಿದರು.

“ಈ ಅವೈಜ್ಞಾನಿಕವಾಗಿ ನಿರ್ಧಾರದಿಂದ ಈ ಭಾಗದ ಗ್ರಾಮಸ್ಥರು ಹಾಗೂ ರೈತರು ಉಪ ನೊಂದಣಿ ಸೇರಿದಂತೆ ಹಲವಾರು ಸಮಸ್ಯೆಗಳು ಎದುರಿಸುವಂತಾಗಿದೆ. ಈಗಾಗಲೇ ಕಳೆದ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಿಸುವ ಮೂಲಕ ತಾಲೂಕಿನ ಮತದಾರರು ಶಿವನಗೌಡ ನಾಯಕರಿಗೆ ತಕ್ಕ ಪಾಠ ಕಲಿಸಿದ್ದಾರೆ. ಅವರ ಅವೈಜ್ಞಾನಿಕ ಜನವಿರೋಧಿ ನಡೆಗಳಿಂದ ಸೋಲುಂಡಿದ್ದಾರೆ.
ಈಗಲಾದರೂ ಅರಕೇರಾ ತಾಲೂಕು ಕೇಂದ್ರವನ್ನು ರದ್ದು ಮಾಡಿ, ಗಬ್ಬೂರನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕು” ಎಂದು ಜಿಲ್ಲಾಡಳಿತ ಹಾಗೂ ಸರಕಾರಕ್ಕೆ ಮನವಿ ಮಾಡಿದರು.

ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

ಮಾಜಿ ತಾಪಂ ಸದಸ್ಯ ಗೋವಿಂದರಾಯ, ಮರಲಿಂಗಪ್ಪ ಕೂಳ್ಳೂರು, ಆಂಜನೇಯ ಬಡಿಗೇರಾ, ಮಂಜುನಾಥ್ ಹೇರುಂಡಿ, ಉಪಸ್ಥಿತರಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X