ಕರ್ನಾಟಕ ಹೈಕೋರ್ಟ್‌ನ ಕೆಲ ನ್ಯಾಯಾಧೀಶರನ್ನು ವರ್ಗಾಯಿಸಿ: ಸುಪ್ರೀಂಗೆ ನೈಜ ಹೋರಾಟಗಾರರ ವೇದಿಕೆ ಮನವಿ

Date:

Advertisements

ಕರ್ನಾಟಕದ ಉಚ್ಚ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿಗಳ ರಕ್ತ ಸಂಬಂಧಿಗಳು ಮತ್ತು ಹತ್ತಿರದ ಸಂಬಂಧಿಗಳು ವಕೀಲಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ನ್ಯಾಯ ವಿತರಣೆಯಲ್ಲಿ ವಾದಿ, ಪ್ರತಿವಾದಿಗಳು ಮತ್ತು ಕಕ್ಷಿದಾರರಿಗೆ ನ್ಯಾಯಾಲಯಗಳಲ್ಲಿ ಪಾರದರ್ಶಕತೆಯ ವಿಶ್ವಾಸಾರ್ಹ ನ್ಯಾಯ ವಿತರಣೆ ಬಗ್ಗೆ ನಂಬಿಕೆ ಇಲ್ಲದಂತಾಗಿದೆ. ಹಾಗಾಗಿ, ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಇತರ ರಾಜ್ಯಗಳ ಉಚ್ಚ ನ್ಯಾಯಾಲಯಗಳಿಗೆ ವರ್ಗಾವಣೆ ಮಾಡಬೇಕೆಂದು ನೈಜ ಹೋರಾಟಗಾರರ ವೇದಿಕೆಯು ಸುಪ್ರೀಂ ಕೋರ್ಟಿಗೆ ಮನವಿ ಮಾಡಿದೆ.

ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿರುವ ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ ವೆಂಕಟೇಶ್ ಹಾಗೂ ಬಿ.ಎಸ್ ಲೋಕೇಶ್, ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ತಮ್ಮ ದೂರಿನಲ್ಲಿ ನೈಜ ಹೋರಾಟಗಾರರ ವೇದಿಕೆಯ ಮುಖಂಡರು ಗಂಭೀರ ಆರೋಪಗಳನ್ನು ಮಾಡಿದ್ದು, ನಮಗೆ ನ್ಯಾಯಾಂಗದಲ್ಲಿ ಅಪಾರವಾದ ನಂಬಿಕೆ, ವಿಶ್ವಾಸ, ಮತ್ತು ಗೌರವವನ್ನು ಹೊಂದಿದ್ದೇವೆ. ಭಾರತ ದೇಶದ ಎಲ್ಲ ನಾಗರಿಕರಿಗೂ ತ್ವರಿತವಾಗಿ ನ್ಯಾಯ ವಿತರಣೆ ಮಾಡುವಲ್ಲಿ ದೇಶದ ಎಲ್ಲ ನ್ಯಾಯಮೂರ್ತಿಗಳು ಅತ್ಯಂತ ಶ್ರಮ ವಹಿಸುತ್ತಿರುವುದು ಸ್ವಾಗತಾರ್ಹವಾಗಿದೆ. ಆದರೆ, ದೇಶದ ಅತ್ಯಂತ ಕಟ್ಟ ಕಡೆಯ ವ್ಯಕ್ತಿಯು ಕೂಡ ನ್ಯಾಯ ವಂಚಿತರಾಗಬಾರದು ಎಂಬ ಆಶಯ ನಮ್ಮೆಲ್ಲರಿಗೂ ಇದೆ. ಆದರೆ ನ್ಯಾಯವನ್ನು ಕೇಳಿ ಉಚ್ಚ ನ್ಯಾಯಾಲಯ ಅಥವಾ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗದೇ ಇರುವುದು ದುರದೃಷ್ಟಕರ ಸಂಗತಿಯಾಗಿದೆ” ಎಂದು ತಿಳಿಸಿದ್ದಾರೆ.

Advertisements

ನ್ಯಾಯಾಂಗದಲ್ಲೂ ಕೂಡ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಅಘಾತಕಾರಿ ವಿಷಯವನ್ನು ಹಲವಾರು ನ್ಯಾಯಮೂರ್ತಿಗಳು ಈ ಹಿಂದೆ ಹೇಳಿರುವುದನ್ನು ಮಾಧ್ಯಮಗಳಲ್ಲಿ ನಾವು ಓದಿದ್ದೇವೆ. ಇದಕ್ಕೆ ಪೂರಕವಾಗಿ ಹಲವಾರು ನ್ಯಾಯಾಧೀಶರುಗಳ ಮೇಲೆ ಭ್ರಷ್ಟಾಚಾರದ ಆರೋಪಗಳು ಸಾರ್ವಜನಿಕ ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹೋರಾಟಗಾರರ ವೇದಿಕೆಯು ತಿಳಿಸಿದೆ.

ನ್ಯಾಯ ವಿತರಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ವಕೀಲ ವೃಂದದ ಬಗ್ಗೆ ನಮಗೆಲ್ಲರಿಗೂ ಅತ್ಯಂತ ಪ್ರೀತಿಪೂರ್ವಕವಾದ ಗೌರವ ಮತ್ತು ವಿಶ್ವಾಸವಿದೆ ಎಂಬುದನ್ನು ಸ್ಪಷ್ಟಪಡಿಸುತ್ತಾ,
ಕರ್ನಾಟಕ ರಾಜ್ಯದಲ್ಲಿಯೂ ಕೂಡ ಕಾರ್ಯನಿರ್ವಹಿಸಿದ ಹಲವಾರು ನ್ಯಾಯಾಧೀಶರುಗಳು ಮತ್ತು ನ್ಯಾಯಮೂರ್ತಿಗಳ ಮೇಲೆ ಭ್ರಷ್ಟಾಚಾರದ ಆರೋಪಗಳು ಇವೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಆದರೆ ಇದಕ್ಕೆ ಪೂರಕವಾದ ಸಾಕ್ಷಿ ಆಧಾರಗಳು ಇಲ್ಲದೆ ಇರುವುದರಿಂದ ಒಂದು ರೀತಿಯಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರವು ಗುಪ್ತಗಾಮಿನಿಯಾಗಿ ನಿರಂತರವಾಗಿ ಹರಿಯುತ್ತಿದೆ ಎಂಬ ಅಂಶ ಅತ್ಯಂತ ಚಿಂತೆಗೆ ಎಡೆ ಮಾಡಿಕೊಟ್ಟಿದೆ. ಈ ಎಲ್ಲ ಹಿನ್ನೆಲೆಯನ್ನು ಗಮನಿಸಿದಾಗ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿಗಳ ರಕ್ತ ಸಂಬಂಧಿಗಳು ಮತ್ತು ಹತ್ತಿರದ ಸಂಬಂಧಿಗಳು ವಕೀಲಿ ವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರಿಂದ ನ್ಯಾಯ ವಿತರಣೆಯಲ್ಲಿ ವಾದಿ, ಪ್ರತಿವಾದಿಗಳು ಮತ್ತು ಕಕ್ಷಿದಾರರಿಗೆ ನ್ಯಾಯಾಲಯಗಳಲ್ಲಿ ಪಾರದರ್ಶಕತೆಯ ವಿಶ್ವಾಸಾರ್ಹ ನ್ಯಾಯ ವಿತರಣೆ ಬಗ್ಗೆ ನಂಬಿಕೆ ಇಲ್ಲದಂತಾಗಿದೆ. ಈ ವಿಷಯದಲ್ಲಿ ಸಾರ್ವಜನಿಕ ವಲಯದಲ್ಲಿ ಮತ್ತು ವಕೀಲ ವೃಂದದಲ್ಲಿ ಕೂಡ ಗಂಭೀರವಾದ ಚರ್ಚೆಗಳು ನಡೆಯುತ್ತಿವೆ ಎಂಬ ವಿಷಯ ನೈಜ್ಯ ಹೋರಾಟಗಾರರ ವೇದಿಕೆ ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ನ್ಯಾಯಮೂರ್ತಿಗಳ ಹತ್ತಿರದ ಸಂಬಂಧಿಗಳು ಮತ್ತು ರಕ್ತ ಸಂಬಂಧದಲ್ಲಿರುವ ವಕೀಲರುಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಮತ್ತು ಕೆಳಹಂತದ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನು ನಡೆಸುತ್ತಿರುವುದಾರ ಬಗ್ಗೆ ಮಾಹಿತಿಗಳನ್ನು ಪಡೆದು ಅಂತಹ ಗೌರವಾನ್ವಿತ ನ್ಯಾಯಮೂರ್ತಿಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಇತರ ರಾಜ್ಯಗಳ ಉಚ್ಚ ನ್ಯಾಯಾಲಯಗಳಿಗೆ ವರ್ಗಾವಣೆ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿಯ ಜಾಮಾ ಮಸೀದಿಯಲ್ಲಿ ಮುಸ್ಲಿಮರಿಗೆ ಪ್ರತಿದಿನ ಇಫ್ತಾರ್ ಆಯೋಜಿಸುತ್ತಿರುವ ಹಿಂದೂ ಯುವತಿ ನೇಹಾ ಭಾರ್ತಿ

ಇತ್ತೀಚೆಗೆ ದೆಹಲಿಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಯಶವಂತ ವರ್ಮಾರವರ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿದ್ದು ಬಹಿರಂಗಗೊಳ್ಳುತ್ತಿದ್ದಂತೆ ನ್ಯಾಯಾಂಗದ ಬಗ್ಗೆ ದೇಶದ ನಾಗರಿಕರು ಕಳವಳಗೊಂಡಿದ್ದು ಮತ್ತು ತಲ್ಲಣಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಯೊಬ್ಬರೂ ಚರ್ಚೆಯಲ್ಲಿ ತೊಡಗಿರುವುದು ನ್ಯಾಯಾಂಗದ ಬಗ್ಗೆ ದೇಶದ ನಾಗರಿಕರು ಇಟ್ಟಿರುವ ವಿಶ್ವಾಸ, ನಂಬಿಕೆ , ಮತ್ತು ಗೌರವವನ್ನು ಪ್ರಶ್ನಿಸುವಂಥಾಗಿದೆ. ಈ ಹಿನ್ನೆಲೆಯಲ್ಲಿ ಈ ವಿಷಯವನ್ನು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರಸ್ತಾಪಿಸಿ ಗಮನ ಸೆಳೆಯುವುದು ನಮಗೆ ಅನಿವಾರ್ಯವಾಗಿದೆ. ಇದರಿಂದ ರಾಜ್ಯದ ನಾಗರಿಕರಿಗೆ ನ್ಯಾಯಾಂಗದಲ್ಲಿ ಪಾರದರ್ಶಕತೆ, ನಂಬಿಕೆ, ವಿಶ್ವಾಸ ಇನ್ನಷ್ಟು ಗಟ್ಟಿಯಾಗಿ ದೃಢವಾಗುವುದರಲ್ಲಿ ಸಂಶಯವಿಲ್ಲ ಎಂದು ನೈಜ ಹೋರಾಟಗಾರರ ವೇದಿಕೆ ಮನವಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಾಂಗದ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ನೈಜ ಹೋರಾಟಗಾರರ ವೇದಿಕೆಯು ಸಮಾಜಮುಖಿ ಕೆಲಸಗಳ ಜೊತೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮತ್ತು ಸಾರ್ವಜನಿಕ ಹಿತಾಸಕ್ತಿಯ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ನಮಗೆ ಬಂದ ಮಾಹಿತಿಗಳ ಆಧಾರದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗೌರವಾನ್ವಿತ ನ್ಯಾಯಮೂರ್ತಿಗಳ ರಕ್ತ ಸಂಬಂಧಿಗಳು ಮತ್ತು ಹತ್ತಿರದ ಸಂಬಂಧಿಗಳು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕೆಳಹಂತದ ಸಿವಿಲ್ ನ್ಯಾಯಾಲಯ, ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳಲ್ಲಿ ವಕೀಲಿ ವೃತ್ತಿಯನ್ನು ನಡೆಸುತ್ತಿರುವುದರಿಂದ ಸಾರ್ವಜನಿಕರಲ್ಲಿ ನ್ಯಾಯಾಂಗದ ಬಗ್ಗೆ ಅನುಮಾನದ ಹುತ್ತ ಬೆಳೆದು ನಿಂತಿದೆ. ಇದನ್ನು ಪರಿಹರಿಸಲು ತಾವು ಶ್ರಮವಹಿಸಿ ಮತ್ತು ಜನರಲ್ಲಿ ನ್ಯಾಯಾಂಗದ ಬಗ್ಗೆ ವಿಶ್ವಾಸವನ್ನು ಮತ್ತು ನಂಬಿಕೆಯನ್ನು ಹಾಗೂ ಗೌರವವನ್ನು ಹೆಚ್ಚಿಸುವಲ್ಲಿ ತಾವು ಮುಖ್ಯಪಾತ್ರ ವಹಿಸಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಯವರಿಗೆ ದೂರು ಸಲ್ಲಿಸಿರುವ ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ ವೆಂಕಟೇಶ್ ಹಾಗೂ ಬಿ.ಎಸ್ ಲೋಕೇಶ್ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

17 COMMENTS

  1. There are many judges in Karnataka High court who have links with Real estate businessmen,,,,politicians,,,,and white collar criminals like V Heggade ( soujanya case ) ,,,,,,High court judges dictate judgements for lower court judges,,,,to target and harass advocates best example of. Most corrupt and criminal character judge is Krishna Dikshit ,,,,,

    • I totally agree and understand the present situation of these so called Hon’ble judges at higher and at even lower levels . Being an senior practicing advocate myself at proper stages I have fought against the odds of the corruption of judges . Hope this time I am not alone in this . !

    • No he is most independent impartial intelligent judge and functions with out any fear or favour which can be seen from his court live proceedings or judgements. He has most concern to the poor, helpless and last section of the society..

      • ಸರ್ ಓಪನ್ ಕೋರ್ಟ್ ಹಲ್ಲಿ facts supress ಮಾಡಿದ್ರು justice krishna dixith matte ಓಪನ್ ಕೋರ್ಟ್ halli order dictation madalla allotment cancelled hagidru writ allowed madidare one hearing halli writ allowed madi 2day halli order copy realese hagide w p. No. 21758/2018 ಈ case halli namge thumba thondre hagide most corrupt judge i complaint chife justice and avra mele enquiry ಗೆ ಕ್ರಮ ಜರುಗಿಸಲು ಆದೇಶ horadisiddre

  2. There are many judges in Karnataka High court who have links with Real estate businessmen,,,,politicians,,,,and white collar criminals like V Heggade ( soujanya case ) ,,,,,,High court judges dictate judgements for lower court judges,,,,to target and harass advocates best example of. Most corrupt and criminal character judge is Krishna Dikshit ,,,,,

  3. Such irresponsible comments, do you have any incidents while coming out with such false aligation, your intention directly says how corrupt you are, Role of justice is to control corrupt in the lower court so that common people get justice in the lower court that’s what honourable justice Krishna Dixit is doing in making society corruption free ……. people like you must be sentenced for misguiding the society

    • Mr Gentleman,,,,read carefully what happened in following cases

      WP No 21758/2019 —-+ In this case suit schedule property was allotted to petitioner by KIADB cin 1982,,,,,,same was cancelled by KIADB on 13/09/2005,,,,,,,this fact was brought to Notice of Krishna Dikshit by caveator Respondent ,,,and it was also informed that same was not challenged by Petitioner at any point of time,,,,,Mr Krishna Dikshit suppressed this allowed writ of certiorari in first hearing against Judicial order passed in MA.No.4/2018…….

      The copy Writ order was released in three days,,,,further At Anekal ,,,,Syed Baleegur Rahaman now at Bagalkot,,,,,Gokul now at Magistrate court beng,,,,Ramprashant conducted meeting to target particular Advocate and dismiss all his cases,,,,,Mr Syed Baleegur rehaman informed this fact to his community member in his house ,,,

      • Later on It is Syed Baleegur Rahaman himself told his community member he and all other judges decided to target particular Advocate and dismiss all his cases,,,,as per the instructions given by Mr Krishna Dikshit,,,,,,,,

        CC 392 /2015,,,,,,,,Criminal Appeal No.5013/2019,,,,,Accused convicted only to target particular Advocate,,,,,one see all details filed in Criminal RP 1088/2019

  4. This NGO do not have any work or what. Advised to do some concrete work in the interest of this Country. Many Judges children are practicing before High Court and Supreme Court but our Judges are so fair that they dont consider this favoritism. Go through cases filed by children of judges and see how many cases allowed and dismissed.Without reading the judgements this type of anti social useless NGOs spoiling our judiciary sacrifice, commitment to work

  5. Krishna Dikshit ,,,must be transferred immediately,,,,,Baleegur Rahaman,,,,,RamaPrashant and. Gokul their moments,,,,their orders and Judgements must be watched regarding supression of material facts and twisting of material facts

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X