ಯಾದಗಿರಿ | ಕಂದಕಕ್ಕೆ ಬಿದ್ದು ಹಸು ಸಾವು; ಪರಿಹಾರಕ್ಕೆ ಆಗ್ರಹ

Date:

Advertisements

ರಸ್ತೆಯ ಸೇತುವೆ ಕಂದಕಕ್ಕೆ ಹಸುವೊಂದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಪರಿಹಾರ ನೀಡುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ ಆಗ್ರಹಿಸಿದ್ದಾರೆ.

ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಮಳ್ಳಳ್ಳಿ ಗ್ರಾಮದ ಮಲ್ಲಪ್ಪ ಹಣಮಂತ ಬಳಿಚಕ್ರ ಎಂಬುವವರ ಹಸು ಮೃತಪಟ್ಟಿದ್ದು, ಗ್ರಾಮಸ್ಥರ ಸಹಾಯದಿಂದ ಹಸುವಿನ ಮೃತ ದೇಹವನ್ನು ಹೊರತೆಗೆದು ಅಂತ್ಯ ಸಂಸ್ಕಾರ ಮಾಡಿದ ಬಳಿಕ ಮಾತನಾಡಿದರು.

“ಈ ಹಿಂದೆ ಧಾರಾಕಾರವಾಗಿ ಮಳೆ ಸುರಿದ ಕಾರಣದಿದಂದ ರಸ್ತೆ ಹಾಳಾಗಿದೆ. ರಸ್ತೆಯ ಕಳಪೆ ಕಾಮಗಾರಿ ಮಾಡಿದ್ದು, ಸಮರ್ಪಕ ಸೇತುವೆ ನಿರ್ಮಿಸದ ಕಾರಣ ರಸ್ತೆಯ ಮಗ್ಗುಲಲ್ಲಿರುವ ಕಂದಕ ಬಿದ್ದು ಹಸು ಮೃತಪಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಗುರುಸುಣಿಗಿಯಿಂದ ಮಳ್ಳಳ್ಳಿಗೆ ಹೋಗುವ ಪ್ರಮುಖ ರಸ್ತೆ ಇದಾಗಿದ್ದು, ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದು ಇದೇ ರಸ್ತೆಯಾಗಿದೆ. ಹೀಗಾಗಿ ಇಂತಹ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಈ ರಸ್ತೆಯಲ್ಲಿ ಸುಮಾರು 5 ರಿಂದ 6ಕಡೆ ಕಂದಕಗಳು ನಿರ್ಮಾಣವಾಗಿರುವುದು ತೀರ ಆತಂಕಕಾರಿ ಸಂಗತಿಯಾಗಿದೆ” ಎಂದರು.

“ಇದೇ ರಸ್ತೆಯ ಮುಖಾಂತರ ಬಸ್ ಸೇರಿದಂತೆ ಇತರೆ ಎಲ್ಲ ವಾಹನಗಳೂ ಸಂಚರಿಸುತ್ತಿದ್ದವು. ಆದರೆ, ರಸ್ತೆ ಗುಂಡಿ ಬಿದ್ದಿರುವ ಕಾರಣ ಇತ್ತೀಚೆಗೆ ಬಸ್‌ ಹಾಗೂ ಬೃಹತ್ ವಾಹನಗಳ ಸಂಚಾರವೂ ಸ್ಥಗಿತಗೊಂಡಿದೆ. ಇದರಿಂದಾಗಿ ಸಣ್ಣ ಪುಟ್ಟ ವಾಹನಗಳು ಟಂಟಂಗಳು ಸಂಚರಿಸುತ್ತಿವೆ. ಈ ರಸ್ತೆಯಲ್ಲಿ ಹೊಸಬರು ಸಂಚರಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಗ್ರಾಮಸ್ಥರು ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಇನ್ನೂ ಹೆಚ್ಚಿನ ಅನಾಹುತ ಆಗುವ ಮೊದಲೇ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು. ಮೃತಪಟ್ಟ ಹಸುವಿಗೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನರಸಾಪುರ ಕೆರೆ ಒತ್ತುವರಿ ತೆರವುಗೊಳಿಸಿ : ಸಚಿವ ಬೋಸರಾಜು ಸೂಚನೆ

“ಇನ್ನು ಮುಂದೆ ಯಾವುದೇ ಜೀವ ಹಾನಿಯಾದರೂ ಜಿಲ್ಲಾಡಳಿತವೇ ಹೊಣೆ ಹೊರಬೇಕಾಗುತ್ತದೆ. ಇಲ್ಲವಾದಲ್ಲಿ ಪ್ರಕರಣ ದಾಖಲಿಸಲು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಈ ವೇಳೆ ನಿಂಗಪ್ಪ, ಬಾಬು, ಮರೆಪ್ಪ, ಅಮ್ಮಣ್ಣ, ಸಾಬರೆಡ್ಡಿ, ತಿಪ್ಪಣ್ಣ, ಪದ್ಮಣ್ಣ, ದೇವು ಸೇರಿದಂತೆ ಗ್ರಾಮಸ್ಥರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X