ನೈರ್ಮಲ್ಯ ಕಾರ್ಮಿಕರ ಬಗ್ಗೆ ವಿವಾದಿತ ಮಾತು; ಯೂಟ್ಯೂಬರ್ ಮನೆಗೆ ಮಲ ಸುರಿದು ಆಕ್ರೋಶ

Date:

Advertisements

ನೈರ್ಮಲ್ಯ ಕಾರ್ಮಿಕರ ಸಮವಸ್ತ್ರದಲ್ಲಿ ನಗರದ ಯೂಟ್ಯೂಬರ್ ಸವುಕ್ಕು ಶಂಕರ್ ಎಂಬುವವರ ಮನೆಗೆ ನುಗ್ಗಿದ ಗುಂಪೊಂದು ಅವರ ಮನೆಯ ಕೊಠಡಿ, ಅಡುಗೆಮನೆ ಮತ್ತು ಹಜಾರದಲ್ಲಿ ಬಕೆಟ್‍ಗಟ್ಟಲೆ ಕೆಸರು, ಹೊಲಸು ಮತ್ತು ಮಲ ಸುರಿದು ಆಕ್ರೋಶ ವ್ಯಕ್ತಪಡಿಸಿದ ಪ್ರಕರಣ ಚೆನ್ನೈನ ನಗರವೊಂದರಲ್ಲಿ ಬೆಳಕಿಗೆ ಬಂದಿದೆ.

ನೈರ್ಮಲ್ಯ ಕಾರ್ಮಿಕರ ಬಗ್ಗೆ ವ್ಯಕ್ತಪಡಿಸಿದ ಅಭಿಪ್ರಾಯವನ್ನು ವಿರೋಧಿಸಿ ಈ ದಾಳಿ ನಡೆದಿರಬೇಕು ಎಂದು ಶಂಕಿಸಲಾಗಿದೆ. ಶಂಕರ್ ಅವರ ತಾಯಿ ಕಮಲಾ ಒಬ್ಬರೇ ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಯ ಹಿಂಬಾಗಿಲು ಒಡೆದು ಒಳ ಪ್ರವೇಶಿಸಿದ ಗುಂಪು, ಮನೆಯನ್ನು ಲೂಟಿ ಮಾಡಿ, ಇದೇ ಬಗೆಯ ಅಭಿಪ್ರಾಯವನ್ನು ಮಗನ ಮುಂದೆ ವ್ಯಕ್ತಪಡಿಸಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

ಮಹಿಳೆಯ ಫೋನ್ ಕಿತ್ತುಕೊಂಡು, ಶಂಕರ್‌ಗೆ ವಿಡಿಯೋ ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಯಿತು. ಈ ಸಂದರ್ಭದಲ್ಲಿ “ನನ್ನ ಮಗನ ವಿರುದ್ಧ ಯಾವುದೇ ಸಮಸ್ಯೆ ಇದ್ದಲ್ಲಿ, ಕಾನೂನು ಕ್ರಮಗಳನ್ನು ಕೈಗೊಳ್ಳಬೇಕಿತ್ತು” ಎಂದು ಕಮಲಾ ಪ್ರತಿಕ್ರಿಯಿಸಿದ್ದಾರೆ.

Advertisements

ತಕ್ಷಣವೇ ಪೊಲೀಸರು ಧಾವಿಸಿದರು. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ದಾಳಿಕೋರರನ್ನು ಪತ್ತೆ ಮಾಡಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ವಿನಾಶ: ಆರ್‌ಎಸ್‌ಎಸ್ ಬೂಟಾಟಿಕೆಗೆ ಮಿತಿ ಇಲ್ಲವೇ?

ನೈರ್ಮಲ್ಯ ಕಾರ್ಮಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪವನ್ನು ಶಂಕರ್ ಅಲ್ಲಗಳೆದಿದ್ದಾರೆ. “ನಿಜವಾಗಿ ನೈರ್ಮಲ್ಯ ಕಾರ್ಮಿಕರಿಗೆ ಸಲ್ಲಬೇಕಾದ ಹಣವನ್ನು ಶಾಸಕರು ಒಯ್ದಿದ್ದಾರೆ ಎಂದು ನಾನು ಬಿಂಬಿಸಿದ್ದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಶಂಕರ್ ಮನೆಯ ಮೇಲಿನ ದಾಳಿಯ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://twitter.com/SavukkuOfficial/status/1904054335849591205
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X