ಡೇ ಕೇರ್ ಸೆಂಟರ್‌ | ಚಿಕ್ಕ ಮಗು ಮೇಲೆ ಪದೇ ಪದೆ ಹಲ್ಲೆ ನಡೆಸಿದ ದೊಡ್ಡ ಮಗು

Date:

Advertisements
  • ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ವಿಡಿಯೋ
  • ಸುಮಾರು ಐದು ನಿಮಿಷಗಳ ವರೆಗೆ ಮಗುವಿಗೆ ಹೊಡೆತ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಹುತೇಕ ದಂಪತಿ ಕೆಲಸಕ್ಕೆ ತೆರಳುತ್ತಾರೆ. ಹಾಗಾಗಿ, ಮಕ್ಕಳನ್ನು ನೋಡಿಕೊಳ್ಳಲು ಜತೆಗೆ ಯಾರು ಇಲ್ಲದಿರುವ ಕಾರಣ ತಮ್ಮ ಮಕ್ಕಳನ್ನ ಡೇ ಕೇರ್‌ಗೆ ಸೇರಿಸುತ್ತಾರೆ. ಇದೀಗ ನಗರದ ಡೇ ಕೇರ್ ಸೆಂಟರ್‌ವೊಂದರಲ್ಲಿ ಮಕ್ಕಳನ್ನು ಒಂದು ಕೋಣೆಯಲ್ಲಿ ಇರಿಸಲಾಗಿದೆ. ಇಲ್ಲಿ ಒಂದು ಚಿಕ್ಕ ಮಗುವಿಗೆ ದೊಡ್ಡ ಮಗು ಪದೇ ಪದೆ ಹೊಡೆದಿದೆ.

ನಗರದ ಚಿಕ್ಕಲಸಂದ್ರದಲ್ಲಿರುವ ಡೇ ಕೇರ್ ಸೆಂಟರ್​ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ಡೇ ಕೇರ್ ಸೆಂಟರ್‌ನಲ್ಲಿ ಮಗುವನ್ನು ನೋಡಿಕೊಳ್ಳುತ್ತಿದ್ದ ಆಯಾ ಕೋಣೆಯಿಂದ ಒಂದು ಮಗುವನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ಈ ಕೋಣೆಯಲ್ಲಿ ಎಂಟು ಮಕ್ಕಳಿದ್ದರು. ಈ ವೇಳೆ, ಸುಮಾರು ಐದು ನಿಮಿಷಗಳ ವರೆಗೆ ದೊಡ್ಡ ಮಗುವೊಂದು ಚಿಕ್ಕ ಮಗುವಿಗೆ ಪದೇ ಪದೆ ಹೊಡೆದಿದೆ. ಆದರೆ, ಮಕ್ಕಳನ್ನು ನೋಡಲು ಯಾವ ಸಿಬ್ಬಂದಿಯೂ ಕೂಡ ಕೋಣೆಗೆ ಬಂದಿಲ್ಲ.

Advertisements

ಈ ಬಗ್ಗೆ ಮಗುವಿನ ಪೋಷಕರು ಟ್ವೀಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದು, ಟ್ವೀಟರ್‌ನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೆಟ್ರೋ ಪಿಲ್ಲರ್ ಕುಸಿದು ಸಾವು; ಐದು ತಿಂಗಳ ಬಳಿಕ ಚಾರ್ಜ್‌ಶೀಟ್ ಸಲ್ಲಿಸಿದ ಪೊಲೀಸರು

ಸುಬ್ರಹ್ಮಣ್ಯಪುರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಂಟೆಸ್ಸರಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯಿಂದ ಮಾಹಿತಿ ಕಲೆಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X