ಮತ್ತೆ ಏರಲಿದೆ ಹಾಲಿನ ದರ; 3ರಿಂದ 5 ರೂ. ಹೆಚ್ಚಳ ಸಾಧ್ಯತೆ

Date:

Advertisements

ಹಾಲಿದ ದರ ಏರಿಕೆಯಾಗಿ ಇನ್ನೂ ಒಂದು ವರ್ಷವೂ ಕಳೆದಿಲ್ಲ. ಇದೀಗ, ಮತ್ತೆ ದರ ಹಚ್ಚಳದ ಚರ್ಚೆ ನಡೆಯುತ್ತಿವೆ. ಹಾಲಿನ ದರದಲ್ಲಿ 3ರಿಂದ 5 ರೂ.ಗೆ ಹೆಚ್ಚಿಸುವ ಬಗ್ಗೆ ಚರ್ಚೆಗಳು ನಡೆದಿದ್ದು 3 ರೂ. ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕರ್ನಾಟಕ ಹಾಲು ಮಹಾ ಮಂಡಳಿಯು ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚಿಸಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಶು ಸಂಗೋಪನಾ ಸಚಿವ ಕೆ ವೆಂಕಟೇಶ್, ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯಕ್ ಹಾಗೂ ಅಧಿಕಾರಿಗಳು ಸಭೆ ನಡೆಸಿದ್ದಾರೆ. 5 ರೂ. ಬದಲಿಗೆ 3 ರೂ. ಹೆಚ್ಚಳಕ್ಕೆ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ದರ ಏರಿಕೆ ವಿಚಾರ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆಯಾದ ಬಳಿಕ, ಸರ್ಕಾರವು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಸಂಪುಟ ಸಭೆಯು ದರ ಏರಿಕೆಗೆ ಸಮ್ಮತಿಸಿದರೆ, ಪ್ರತಿ ಲೀಟರ್ ಹಾಲಿಗೆ 3 ರೂ. ಏರಿಕೆ ಆಗಲಿದೆ ಎಂದು ಹೇಳಲಾಗಿದೆ.

Advertisements

“ಹಾಲು ಒಕ್ಕೂಟಗಳು ಮತ್ತು ಹಾಲು ಉತ್ಪಾದಕರ ಬೇಡಿಕೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಲಾಗಿದೆ. ಸಭೆಯಲ್ಲಿ ದರ ಏರಿಕೆ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ತಿಳಿಸುತ್ತಾರೆ” ಎಂದು ಭೀಮಾ ನಾಯ್ಕ್ ಹೇಳಿದ್ದಾರೆ.

ರಾಜ್ಯದಲ್ಲಿ ಸರ್ಕಾರ ಬದಲಾದ ಬಳಿಕ ಎರಡು ಬಾರಿ ಹಾಲಿನ ದರ ಏರಿಕೆ ಮಾಡಲಾಗಿದೆ. 2023ರ ಆಗಸ್ಟ್‌ನಲ್ಲಿ ಪ್ರತಿ ಲೀಟರ್‌ ಹಾಲಿಗೆ 3 ರೂ. ಹೆಚ್ಚಿಸಲಾಗಿತ್ತು. ಆನಂತರ, 2024ರ ಜೂನ್‌ 26ರಲ್ಲಿ ಲೀಟರ್ ಹಾಲಿಗೆ 2 ರೂ. ಹೆಚ್ಚಿಸಿ, 50 ಎಂಎಲ್‌ ಹೆಚ್ಚುವರಿ ಹಾಲು ವಿತರಿಸಲಾಗುತ್ತಿತ್ತು. ಇದೀಗ, ಮತ್ತೊಮ್ಮೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X