ಚಿಕ್ಕಮಗಳೂರು l ಮಹಿಳೆಗೆ ಚಪ್ಪಲಿಯಿಂದ ಹಲ್ಲೆ, ಜಾತಿ ನಿಂದನೆ ಆರೋಪ; ದೂರು ದಾಖಲು

Date:

Advertisements

ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಹಾಗೂ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುವೆ ಕಲ್ಮನೆ ಗ್ರಾಮದಲ್ಲಿ ಬುಧವಾರ ನಡೆದಿದೆ. ನಿಂದನೆಗೆ ಒಗೊಳಗಾದ ಮಹಿಳೆ ಸುಮಿತ್ರ (40), ಕುವೆ ಕಲ್ಮನೆ ಗ್ರಾಮಕ್ಕೆ ಕೆ ಬಿ ಮಹೇಶ್ ಎಂಬುವರನ್ನು ಮದುವೆ ಆಗಿ 15 ವರ್ಷವಾಗಿದೆ. 4 ವರ್ಷಗಳ ಹಿಂದೇ, ಹೃದಯಾಘಾತದಿಂದ ಸುಮಿತ್ರ ಅವರ ಪತಿ ಸಾವನಪ್ಪಿದ್ದಾರೆ. ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಮಹಿಳೆ, ಕೂಲಿ ಕೆಲಸವನ್ನೇ ಅವಲಂಬಿಸಿ ಜೀವನ ಕಟ್ಟಿಕೊಂಡಿದ್ದಾರೆ.

Screenshot 2025 03 25 13 29 11 61 7352322957d4404136654ef4adb64504

ಇದೇ ತಿಂಗಳು 19ರಂದು ಬೆಳಗ್ಗೆ ಹಾಲು ತರಲು ಪಕ್ಕದ ಮನೆಗೆ ತೆರಳುವಾಗ ಒಕ್ಕಲಿಗ ಸಮುದಾಯಕ್ಕೆ ಸೇರಿದ ಹೇಮಾ ಎಂಬ ಮಹಿಳೆ ಏಕಾಏಕಿ ನನ್ನನ್ನು ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಚಪ್ಪಲಿಯಲ್ಲಿ ಒಡೆದಿದ್ದಾರೆ. ಹಾಗೆಯೇ, ಸಂಜೆ ಸಮಯದಲ್ಲಿ ಹೇಮಾ ಅವರ ಪತಿ ಮಂಜುನಾಥ್ ಎರಡು ಸಲ ಮನೆ ಬಳಿ ಬಂದು ಬೆದರಿಕೆ ಹಾಗೂ ಜಾತಿ ನಿಂದಿಸಿದ್ದಾರೆ, ಭಯದಿಂದ ಪಕ್ಕದವರ ಮನೆಯಲ್ಲಿ ರಾತ್ರಿ ಉಳಿದು, 20ರಂದು ಮಹಿಳೆ ಆಸ್ಪತ್ರೆ ಚಿಕಿತ್ಸೆ ಪಡೆದ, ನಂತರ 22ರಂದು ಅಖಿಲ ಕರ್ನಾಟಕ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಆಶಾ ಮತ್ತು ಸಂತೋಷ್ ಅವರ ಸಹಾಯದಿಂದ ಪೊಲೀಸ್ ಕೇಸ್ ಕೊಟ್ಟಿದ್ದೇನೆ, ಎಂದು ಸುಮಿತ್ರ ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

Screenshot 2025 03 25 13 31 26 95 7352322957d4404136654ef4adb64504

ಮಹಿಳೆಯರ ಮೇಲೆ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಇದು ಅಧಿಕಾರಿಗಳು ಗಮನ ಅರಿಸಬೇಕಾಗಿದೆ. ಹಾಗೆಯೇ,  ಒಕ್ಕಲಿಗ ಸಮುದಾಯಕ್ಕೆ ಸೇರಿದ ಹೇಮಾ ಅವರು ಸುಮಿತ್ರ ಎಂಬ ಮಹಿಳೆಗೆ ಚಪ್ಪಲಿಯಿಂದ ಒಡೆದು,ಜಾತಿ ನಿಂದಿಸಿ ಬೆದರಿಕೆ ಹಾಕಿದ್ದರಿಂದ, ಸುಮಿತ್ರ ಅವರು ಬಾಳೂರು ಪೊಲೀಸ್ ಠಾಣೆಯಲ್ಲಿ ಹೇಮಾ ಮತ್ತು ಮಂಜುನಾಥ್ ವಿರುದ್ಧ ಅಟ್ರಾಸಿಟಿ ಕೇಸು ದಾಖಲಿಸಲಾಗಿದೆ, ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಆಶಾ ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

Advertisements
Screenshot 2025 03 25 13 40 47 88 439a3fec0400f8974d35eed09a31f914

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಮಲೆನಾಡಿನಲ್ಲಿ ಬೆಳ್ಳಂಬೆಳಗ್ಗೆ ವರುಣನ ಅಬ್ಬರ

ಯಾರೇ ಆಗಲಿ ತಪ್ಪು ಮಾಡಿದ್ದಾರೆ ಎಂದಾದರೆ ಶಿಕ್ಷೆ ಕೊಡಲು ಕಾನೂನು ವ್ಯವಸ್ಥೆ ಇದೆ. ಅದರಲ್ಲೂ ಮಹಿಳೆಯರ ಮೇಲೆ ಇತ್ತೀಚಿನ ದಿನಗಳಲ್ಲಿ ಜಾತಿನಿಂದನೆ, ದೌರ್ಜನ್ಯ,  ಅತ್ಯಾಚಾರ, ಎಗ್ಗಿಲ್ಲದೆ ನಡೆಯುತ್ತಿದೆ. ಇದನ್ನು ಸೂಕ್ಷ್ಮವಾಗಿ ಪರಿಗಣಿಸಿ ಇಂತಹ ಸಮಸ್ಯೆಯನ್ನು ಆಡಳಿತ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ನೊಂದವರಿಗೆ ನ್ಯಾಯ ಸಿಗಲಿ ಎಂದು ಆಶಿಸೋಣ.

WhatsApp Image 2024 10 24 at 12.02.30
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X