ರೈತರ ಮೇಲೆ ನೈಸ್ ಸಂಸ್ಥೆ ದೌರ್ಜನ್ಯ: ಜೂನ್ 28ರಂದು ರೈತ ಸಂಘ ಪ್ರತಿಭಟನೆ

Date:

Advertisements

ರಸ್ತೆ ನಿರ್ಮಾಣದ ಹೆಸರಿನಲ್ಲಿ ನೈಸ್‌ ಸಂಸ್ಥೆ ರೈತರ ಭೂಮಿಯನ್ನ ಸ್ವಾಧೀನ ಪಡಿಸಿಕೊಳ್ಳುತ್ತಿದೆ. ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಭೂಸ್ವಾಧೀನದ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ರೈತ ಸಂಘ ಆರೋಪಿಸಿದೆ. ಸಂತ್ರಸ್ತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ, ನೈಸ್‌ ಸಂಸ್ಥೆಯ ವಿರುದ್ಧ ಜೂನ್ 28ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಹೇಳಿದೆ.

ಧರಣಿ ನಡೆಸುವ ಬಗ್ಗೆ ರೈತ ಸಂಘ ಪತ್ರಿಕಾ ಪ್ರಕಟಣೆ ಹೊರಡಿಸಿದೆ. “ನೈಸ್‌ ಸಂಸ್ಥೆಯ ವಿರುದ್ಧ ಹಗರಣಗಳ ಸರಮಾಲೆಯ ಆರೋಪಗಳಿವೆ. ಆ ಸಂಸ್ಥೆಗೆ ನೀಡಲಾಗಿರುವ ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ)ಯನ್ನು ರದ್ದುಪಡಿಸಬೇಕು. ನೈಸ್‌ ಸಂಸ್ಥೆಯ ಹಗರಣಗಳ ಬಗ್ಗೆ ತನಿಖೆ ನಡೆಸಬೇಕು. ರೈತರ ಅನುಮತಿ ಪಡೆಯದೇ ಭೂಸ್ವಾಧೀನ ಮಾಡಿಕೊಂಡಿರುವ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಧರಣಿ ನಡೆಸುತ್ತೇವೆ” ಎಂದು ತಿಳಿಸಿದೆ.

“ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ನೈಸ್‌ ಸಂಸ್ಥೆಯು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಿದೆ. ರಸ್ತೆಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಇನ್ನೂ ಪರಿಹಾರ ನೀಡಿಲ್ಲ. ಈ ಹಿಂದೆ ಮಾಡಿಕೊಳ್ಳಲಾಗಿದ್ದ ಒಪ್ಪಂದದಂತೆ ಸಂತ್ರಸ್ತ ರೈತರಿಗೆ ನಿವೇಶನ ಮತ್ತು ಪರಿಹಾರ ನೀಡಬೇಕು” ಎಂದು ರೈತ ಸಂಘ ಆಗ್ರಹಿಸಿದೆ.

Advertisements

“ಬಿಎಂಐಸಿಪಿ ಯೋಜನೆಗಾಗಿ ರೈತರ ಭೂಮಿ ಸ್ವಾಧೀನ ಮಾಡಿಕೊಂಡು 27 ವರ್ಷಗಳು ಕಳೆದಿವೆ. ಆದರೂ, ಕಾಮಗಾರಿ ಆರಂಭವಾಗಿಲ್ಲ. ಮೂಲ ಒಪ್ಪಂದಕ್ಕೆ ವಿರುದ್ಧವಾಗಿ ನೈಸ್‌ ಸಂಸ್ಥೆ ನಡೆದುಕೊಂಡಿದೆ. ಅದಕ್ಕೆ ನೀಡಲಾಗಿರುವ ಬಿಎಂಐಸಿಪಿಯನ್ನು ರದ್ದುಗೊಳಿಸಬೇಕು. ಸ್ವಾಧೀನಪಡಿಕೊಂಡಿರುವ ಭೂಮಿಯ ಪಹಣಿಯು ನೈಸ್‌ ಸಂಸ್ಥೆಯ ಹೆಸರಿನಲ್ಲಿದ್ದು, ಅದನ್ನು ತೆಗೆಯಬೇಕು” ಎಂದು ಒತ್ತಾಯಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X