ಸಿಗದ ಆಹಾರ ಭದ್ರತೆ; 79 ಲಕ್ಷ ಫಲಾನುಭವಿಗಳಿಗೆ ದೊರೆಯುತ್ತಿಲ್ಲ ಉಚಿತ ಪಡಿತರ; ನಿಖರ ಸಂಖ್ಯೆ ಇನ್ನೂ ಅಧಿಕ

Date:

Advertisements

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ (NFSS) ಅಡಿಯಲ್ಲಿ ದೇಶಾದ್ಯಂತ 81.35 ಕೋಟಿ ಫಲಾನುಭವಿಗಳಿಗೆ ಆಹಾರ ಒದಗಿಸುವ ಗುರಿ ಇದೆ. ಆದಾಗ್ಯೂ, 80.56 ಕೋಟಿ ಫಲಾನುಭವಿಗಳನ್ನು ರಾಜ್ಯಗಳು ಗುರುತಿಸಿವೆ. ಇನ್ನೂ, ಸುಮಾರು 79 ಲಕ್ಷ ಫಲಾನುಭವಿಗಳು ಪಡಿತರ ಯೋಜನೆಯಡಿ ಉಚಿತ ಆಹಾರ ಧಾನ್ಯಗಳನ್ನು ಪಡೆಯಲಾಗುತ್ತಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ರಾಜ್ಯಸಭೆಯಲ್ಲಿ ಪ್ರಶ್ನೋತ್ತರದ ವೇಳೆ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಅವರು ‘ಬಡತನ ರೇಖೆಗಿಂತ ಕೆಳಗಿರುವವರನ್ನು ಗುರುತಿಸಲು ಮತ್ತು ಅವರಿಗೆ ಪಡಿತರ ದೊರೆಯುವಂತೆ ಮಾಡಲು ಸರ್ಕಾರ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ’ ಎಂದು ಪ್ರಶ್ನಿಸಿದ್ದರು. ಅವರ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ, “ಫಲಾನುಭವಿಗಳನ್ನು ಗುರುತಿಸುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ” ಎಂದು ಹೇಳಿದ್ದಾರೆ.

“ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯು (NFSA) ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರ ಜನಸಂಖ್ಯೆಯ 50% ಜನರನ್ನು ಪಡಿತರ ವ್ಯವಸ್ಥೆಯ ವ್ಯಾಪ್ತಿಗೆ ತರಲು ಅವಕಾಶ ನೀಡುತ್ತದೆ. 2011ರ ಜನಗಣತಿಯ ಪ್ರಕಾರ 81.35 ಕೋಟಿ ಜನರು ಪಡಿತರ ವ್ಯಾಪ್ತಿಗೆ ಬರುತ್ತಾರೆ. ಆದಾಗ್ಯೂ, ಈವರೆಗೆ 80.56 ಕೋಟಿ ಫಲಾನುಭವಿಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳು ಗುರುತಿಸಿವೆ. 79 ಲಕ್ಷ ಜನರನ್ನು ಇನ್ನೂ ಉಚಿತ ಪಡಿತರ ವ್ಯವಸ್ಥೆಯ ವ್ಯಾಪ್ತಿಗೆ ತರಬೇಕಾಗಿದೆ” ಎಂದು ಹೇಳಿದ್ದಾರೆ.

Advertisements

“ಫಲಾನುಭವಿಗಳನ್ನು ಗುರುತಿಸುವುದು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ನಿರಂತರ ಪ್ರಕ್ರಿಯೆಯಾಗಿದೆ. ಇದರಲ್ಲಿ ಅನರ್ಹ/ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದು, ಸಾವು – ವಲಸೆ ಇತ್ಯಾದಿಗಳ ಕಾರಣದಿಂದಾಗಿ ಹೊರಗಿಡುವುದು ಹಾಗೂ ಪಡಿತರ ವ್ಯವಸ್ಥೆಯಿಂದ ಹೊರಗುಳಿದ ಅರ್ಹ ಕುಟುಂಬಗಳನ್ನು ಸೇರಿಸುವುದು ರಾಜ್ಯಗಳ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಆಹಾರದ ಸ್ವಾತಂತ್ರ್ಯವನ್ನು ಮನ್ನಿಸದ ಸಮಾಜದಲ್ಲಿ ಅರ್ಥಪೂರ್ಣ ಡೆಮಾಕ್ರಸಿಯಿದೆ ಎನ್ನಲಾಗದು

ಸಚಿವರ ಉತ್ತರಕ್ಕೆ ಪ್ರತಿಕ್ರಿಯಿಸಿರುವ ಜೈರಾಮ್ ರಮೇಶ್, “ಸಚಿವರ ಉತ್ತರಂತೆ ಉಚಿತ ಪಡಿತರವನ್ನು ಪಡೆಯಲು ಅರ್ಹರಾಗಿರುವ ಸುಮಾರು 80 ಲಕ್ಷ ಭಾರತೀಯರು ಇನ್ನೂ ಪಡಿತರವನ್ನು ಪಡೆಯಲಾಗುತ್ತಿಲ್ಲ. ಉದ್ದೇಶಿತ ಮತ್ತು ಗುರುತಿಸಲಾದ ಫಲಾನುಭವಿಗಳ ನಡುವಿನ ಈ ಅಂತರವನ್ನು ಹೇಗೆ ನಿಭಾಯಿಸಲಾಗುತ್ತದೆ” ಎಂದು ಕೇಳಿದರು.

ಅಲ್ಲದೆ, “2021ರ ಜನಗಣತಿ ಇನ್ನೂ ನಡೆಯದ ಕಾರಣ, ಪ್ರಸ್ತುತ ಸಂದರ್ಭದಲ್ಲಿ ಪಡಿತರ ವಂಚಿತರಾಗಿರುವ ನಿಖರ ಜನಸಂಖ್ಯೆ ಇನ್ನೂ ಹೆಚ್ಚಿದೆ. NFSA ಅಡಿಯಲ್ಲಿ ಅರ್ಹರಾಗಿರುವ ಸುಮಾರು 14 ಕೋಟಿ ಭಾರತೀಯರು ಪರಿತರವನ್ನು ಪಡೆಯುತ್ತಿಲ್ಲ. ಇದು ಸ್ಪಷ್ಟವಾಗಿ ತಿಳಿಸಬೇಕಾದರೆ 2021ರಲ್ಲಿ ಜನಗಣತಿ ನಡೆಯಬೇಕಿತ್ತು. ಇನ್ನೂ ನಡೆದಿಲ್ಲ. ಯಾವಾಗ ನಡೆಯುತ್ತದೆ” ಎಂದು ರಮೇಶ್‌ ಪ್ರಶ್ನಿಸಿದರು.

“ಸರಿಯಾದ ಫಲಾನುಭವಿಗಳನ್ನು ಹುಡುಕುವುದು ರಾಜ್ಯ ಸರ್ಕಾರದ ಕೆಲಸ. ನಾವು ರಾಜ್ಯ ಸರ್ಕಾರಕ್ಕೆ ಮತ್ತೆ ಮತ್ತೆ ನೆನಪಿಸುತ್ತಿದ್ದೇವೆ” ಎಂದು ಹೇಳಿದ ಸಚಿವ ಜೋಶಿ, ಹೊಣೆಗಾರಿಕೆಯನ್ನು ರಾಜ್ಯಗಳ ಮೇಲೆ ಹಾಕಿ, ಸುಮ್ಮನಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X