ಗೃಹ ಜ್ಯೋತಿ | ಅರ್ಜಿ ಸಲ್ಲಿಸಲು ಲಂಚ ನೀಡಬೇಕಿಲ್ಲ, ಹಣ ಪಡೆದವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್

Date:

Advertisements

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಎಚ್ಚರಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಜನರಲ್ಲಿ ನಾನು ಮಾಡುವ ಮನವಿ ಒಂದೇ, ಯಾರೂ ದುಡ್ಡು ಕೊಡಬೇಡಿ” ಎಂದಿದ್ದಾರೆ.

20.10 ಲಕ್ಷ ಗ್ರಾಹಕರಿಂದ ನೋಂದಣಿ

Advertisements

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ನೋಂದಣಿ ಜೂನ್‌ 18ರಿಂದ ಪ್ರಾರಂಭವಾಗಿದೆ. ಮೊದಲ ದಿನ 96,305 ಗ್ರಾಹಕರು ನೋಂದಣಿ ಮಾಡಿಸಿದ್ದಾರೆ. ಈವರೆಗೂ ಒಟ್ಟು 20.10 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿದ್ದಾರೆ.

ಗ್ರಾಹಕರು ಕರ್ನಾಟಕ ಒನ್‌, ಬೆಂಗಳೂರು ಒನ್‌ ಹಾಗೂ ಗ್ರಾಮ ಒನ್‌ ಹಾಗೂ ವಿದ್ಯುತ್‌ ಕಚೇರಿಗಳಲ್ಲಿ ನೋಂದಣಿ ಮಾಡಿಸಬಹುದು. ಅಲ್ಲದೇ ಸ್ವಂತ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಹಾಗೂ ಮೊಬೈಲ್‌ ಫೋನ್‌ಗಳಲ್ಲೂ ನೋಂದಣಿ ಮಾಡಿಕೊಳ್ಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X