ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿ

Date:

Advertisements

ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ ಕುತ್ತು ಬಂದಿದೆ.

ಬೆಕ್ಕುಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳುತ್ತಿದ್ದು, ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದೆ ಸಾವನ್ನಪ್ಪುತ್ತಿವೆ. ಪರ್ಶಿಯನ್ ಬೆಕ್ಕುಗಳನ್ನು ಸಾಕಿಕೊಂಡಿರುವ ಪ್ರಾಣಿಪ್ರಿಯರಲ್ಲಿ ಈಗ ಆತಂಕ ಹೆಚ್ಚಾಗುತ್ತಿದೆ. ಎಲ್ಲ ಜಾತಿಯ ಬೆಕ್ಕುಗಳಿಗೂ ಈ ವೈರಸ್ ಹರಡಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಕಳೆದ 20 ದಿನಗಳಲ್ಲಿ 70 ಬೆಕ್ಕುಗಳಲ್ಲಿ ವೈರಸ್ ಕಾಣಿಸಿಕೊಂಡಿದೆ. ಅದರಲ್ಲಿ 38 ಬೆಕ್ಕುಗಳು ಸಾವನ್ನಪ್ಪಿವೆ.


ವಿಚಿತ್ರ ಕಾಯಿಲೆಯಿಂದ ಬೆಕ್ಕುಗಳ ಸ್ಥಿತಿ ನೋಡಿ ಬೆಕ್ಕು ಸಾಕಿದ ಮಾಲೀಕರಲ್ಲಿ ಆತಂಕ ಸೃಷ್ಟಿಯಾಗಿದೆ.ಈ‌ ಬಗ್ಗೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಎಸ್.ಎಸ್.ಪಾಟೀಲ್ ಮಾತನಾಡಿ, ಈ ವೈರಸ್ ಇಂದು‌ ನಿನ್ನೆಯದ್ದಲ್ಲ ಅನೇಕ ವರ್ಷಗಳಿಂದ ಇದೆ ಆದರೆ ಬಯಲಿಗೆ ಬರುತ್ತಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ಕರ್ತವ್ಯಲೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು

ಬೆಕ್ಕುಗಳು ಚಿಕ್ಕ ಮೂರು ವಾರದ ಮರಿಗಳಿದ್ದಾಗಲೇ ವ್ಯಾಕ್ಸಿನೇಶನ್ ಮಾಡಬೇಕಿದೆ. ಅದಾದ ಬಳಿಕ ಬೂಸ್ಟರ್ ಡೋಸ್ ನೀಡಬೇಕು. ಆದರೆ, ಈ ವ್ಯಾಕ್ಸಿನ್ ಸರ್ಕಾರದಿಂದ ಪೂರೈಕೆಯಾಗುತ್ತಿಲ್ಲ. ಖಾಸಗಿಯವರಿಂದಲೇ ಖರೀದಿಸಬೇಕಿದ್ದು, 900 ರೂ. ಖರ್ಚಾಗುತ್ತದೆ. ಬೆಕ್ಕು ಸಾಕಿದವರು ವ್ಯಾಕ್ಸಿನ್ ಹಾಕಿಸಿದರೆ ಬೀದಿ ಬೆಕ್ಕುಗಳಿಗೆ ಯಾವುದೇ ವ್ಯಾಕ್ಸಿನ್ ಸಿಗದೆ ಬೇಗನೇ ವೈರಸ್‌ಗೆ ತುತ್ತಾಗುತ್ತಿವೆ. ಇದು ಬೆಕ್ಕುಗಳಿಂದ‌ ಬೆಕ್ಕುಗಳಿಗೆ ಮಾತ್ರ ಹರಡುತ್ತದೆ. ಈ ವೈರಸ್ ಮನುಷ್ಯರಿಗೆ ಯಾವುದೇ ಅಪಾಯ ತರುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X