ಬೆಂಗಳೂರು | ಯುಗಾದಿ, ರಂಜಾನ್ ವಿಶೇಷ; ರಸ್ತೆಗಿಳಿಯಲಿವೆ 2000 ಕೆಎಸ್‌ಆರ್‌ಟಿಸಿ ಬಸ್‌

Date:

Advertisements

ಯುಗಾದಿ ಹಾಗೂ ರಂಜಾನ್‌ ಹಬ್ಬಗಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಪ್ರಯುಕ್ತ ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಲಿರುವುದರಿಂದ ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 2000 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ತೀರ್ಮಾನಿಸಿದೆ.

ಮಾರ್ಚ್‌ 28 ರಿಂದ 30 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗಳಿಗೆ, ಹೊರ ರಾಜ್ಯಗಳಿಗೆ ಹಾಗೂ ಮಾರ್ಚ್‌ 31ರಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣಗಳಿಂದ ವಿಶೇಷ ಬಸ್‌ಗಳು ಓಡಾಡಲಿವೆ ಎಂದು ನಿಗಮ ತಿಳಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನೂ ಕಲ್ಪಿಸಲಾಗಿದ್ದು, ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಪಿಕಪ್‌, ಡ್ರಾಪ್‌ ಪಾಯಿಂಟ್‌ ಸೇರಿದಂತೆ ಟಿಕೆಟ್‌ ಮೇಲೆ ನಮೂದಾಗಿರುವ ಮಾಹಿತಿಯನ್ನು ಪರಿಶೀಲಿಸಿಕೊಳ್ಳುವಂತೆ ಕೋರಲಾಗಿದೆ.

Advertisements

ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಹೆಚ್ಚಿನ ಮಾಹಿತಿಗಾಗಿ ಹಾಗೂ ಮುಂಗಡ ಇ-ಟಿಕೆಟ್‌ ಕಾಯ್ದಿರಿಸಲು ನಿಗಮದ ಅಧಿಕೃತ ವೆಬ್‌ಸೈಟ್‌ www.ksrtc.karnataka.gov.inನ್ನು ಸಂಪರ್ಕಿಸಬೇಕು. ಒಮ್ಮೆಗೆ ನಾಲ್ಕು ಅಥವಾ ಹೆಚ್ಚು ಟಿಕೆಟ್‌ಗಳನ್ನು ಬುಕ್‌ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೇ ಕಾಯ್ದಿರಿಸಿದಲ್ಲಿ ವಾಪಸ್ಸಾಗುವ ದರದಲ್ಲಿ ಶೇ.10 ರಷ್ಟು ರಿಯಾಯಿತಿ ದೊರೆಯಲಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X