ರಾಜ್ಯದಲ್ಲಿ ಹೂಡಿಕೆ ಮಾಡಿ: ಟೆಸ್ಲಾ ಕಂಪನಿಗೆ ಆಹ್ವಾನ ನೀಡಿದ ಸಚಿವ ಎಂ ಬಿ ಪಾಟೀಲ್

Date:

Advertisements
  • ಟೆಸ್ಲಾ ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಹೆಸರುವಾಸಿ ಕಂಪನಿ
  • ಕಾರು ತಯಾರಿಕಾ ಘಟಕ ಆರಂಭಿಸಿದರೆ ಎಲ್ಲ ರೀತಿಯ ಸಹಕಾರ ಲಭ್ಯ

ವಿಶ್ವ ಖ್ಯಾತಿಯ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ರಾಜ್ಯದಲ್ಲಿ ತನ್ನ ಘಟಕ ಸ್ಥಾಪಿಸಿದರೆ ಅದಕ್ಕೆ ಎಲ್ಲ ರೀತಿಯ ನೆರವು ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿಕೊಂಡಿದ್ದಾರೆ.

ಭಾರತದಲ್ಲಿ ಹೂಡಿಕೆಗೆ ಆಸಕ್ತಿ ತೋರಿರುವ ಟೆಸ್ಲಾ ಕಂಪನಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡಿ ಎಂದು ಎಂ ಬಿ ಪಾಟೀಲ್ ಆಹ್ವಾನ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಂ ಬಿ ಪಾಟೀಲ್ ಟೆಸ್ಲಾ ಕಂಪನಿಯು ತನ್ನ ಉದ್ಯಮವನ್ನು ಭಾರತದಲ್ಲಿ ವಿಸ್ತರಿಸಲು ಇಷ್ಟಪಡುವುದಾದರೆ ಕರ್ನಾಟಕ ರಾಜ್ಯವು ಅದಕ್ಕೆ ಸೂಕ್ತ ತಾಣವಾಗಿದೆ ಎಂದವರು ಹೇಳಿಕೊಂಡಿದ್ದಾರೆ.

Advertisements

ಅಮೆರಿಕಾ ಮೂಲಕ ಟೆಸ್ಲಾ ಕಂಪನಿಯು ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಸೌರಫಲಕಗಳು ಮತ್ತಿತರ ಪರ್ಯಾಯ ಇಂಧನದ ಉತ್ಪನ್ನಗಳನ್ನು ತಯಾರಿಸುತ್ತದೆ. ಜೊತೆಗೆ ಸ್ಪೇಸ್- ಎಕ್ಸ್ ಕಂಪನಿ ಮೂಲಕ ಉಪಗ್ರಹ ಅಂತರ್ಜಾಲ ಸೇವೆ (ಸ್ಟಾರ್ ಲಿಂಕ್) ಒದಗಿಸುತ್ತಿದೆ.

ಇಂತಹ ಪ್ರತಿಷ್ಠಿತ ಕಂಪನಿ ಕರ್ನಾಟಕದಲ್ಲಿ ಯಾವುದೇ ಉದ್ಯಮ ಸ್ಥಾಪಿಸುವುದಾದರೂ ಅದಕ್ಕೆ ಸಹಕಾರ ಕೊಡಲಾಗುವುದು. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಉತ್ಸುಕರಾಗಿದ್ದಾರೆ ಎಂದು ಪಾಟೀಲ್ ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭ: ಮೋದಿಗೆ ಧನ್ಯವಾದ ಅರ್ಪಿಸಿದ ತೇಜಸ್ವಿ ಸೂರ್ಯ

ಕರ್ನಾಟಕ ರಾಜ್ಯವು ತಂತ್ರಜ್ಞಾನ ಮತ್ತು ತಯಾರಿಕಾ ಕ್ಷೇತ್ರದಲ್ಲಿ 5.0 ಪ್ರಮಾಣೀಕೃತ ಮಟ್ಟ ಅಳವಡಿಸಿಕೊಂಡು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ಹೊಂದಿದೆ. ಹೀಗಾಗಿ, ಟೆಸ್ಲಾ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಬಹುದೆನ್ನುವುದು ಸಚಿವರ ಸಲಹೆ.

ಅಂದಹಾಗೆ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್ ಮಸ್ಕ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದೇ ಭೇಟಿಯನ್ನು ಉಲ್ಲೇಖಿಸಿ ರಾಜ್ಯದ ಬೃಹತ್ ಕೈಗಾರಿಕಾ ಸಚಿವರು ಟೆಸ್ಲಾಗೆ ರಾಜ್ಯದಲ್ಲಿ ಹೂಡಿಕೆ ಮಾಡಲು ಆಹ್ವಾನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X