ಹಾಸ್ಯನಟ ಕುನಾಲ್ ಕಾಮ್ರಾಗೆ ಮತ್ತೊಂದು ಸಮನ್ಸ್‌ ನೀಡಿದ ಪೊಲೀಸರು

Date:

Advertisements

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕುಟುಕಿ ಹಾಸ್ಯ ಮಾಡಿದ್ದ ಆರೋಪದ ಮೇಲೆ ಸ್ಟ್ಯಾಂಡ್-ಅಪ್ ಕಮೆಡಿಯನ್‌ ಕುನಾಲ್ ಕಾಮ್ರಾ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ, ಕಾಮ್ರಾ ಅವರಿಗೆ ಎರಡನೇ ಸಮನ್ಸ್‌ ನೀಡಿದ್ದಾರೆ.

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿಚಾರಣೆಗಾಗಿ ತನಿಖಾಧಿಕಾರಿಗಳ ಎದುರು ಹಾಜರಾಗುವಂತೆ 2ನೇ ಸಮನ್ಸ್‌ ನೀಡಿದ್ದಾರೆ.

ಪೊಲೀಸರು ಮಂಗಳವಾರ ಕಾಮ್ರಾ ಅವರಿಗೆ ಮೊದಲ ಸಮನ್ಸ್‌ ನೀಡಿದ್ದರು. ಕಾಮ್ರಾ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ, ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದರು. ಶಿವಸೇನಾ (ಶಿಂಧೆ ಬಣ) ಕಾರ್ಯಕರ್ತರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ, ಮುಂಬೈಗೆ ಬಂದು, ವಿಚಾರಣೆಗೆ ಹಾಜರಾಗಲು ಒಂದು ವಾರದ ಸಮಯ ನೀಡಬೇಕೆಂದು ಕಾಮ್ರಾ ಕೇಳಿದ್ದರು.

Advertisements

ಆದಾಗ್ಯೂ, ಕಾರ್ಮಾ ಅವರ ಮನವಿಗೆ ಸ್ಪಂದಿಸದ ಪೊಲೀಸರು, ಇದೀಗ 2ನೇ ಸಮನ್ಸ್‌ ಜಾರಿಗೊಳಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆ;

ಇತ್ತೀಚೆಗೆ, ಮುಂಬೈನ ಸ್ಟುಡಿಯೋವೊಂದರಲ್ಲಿ ನಡೆದ ಹಾಸ್ಯ ಕಾರ್ಯಕ್ರಮದಲ್ಲಿ ಶಿವಸೇನೆಯ ಮುಖ್ಯಸ್ಥ ಏಕನಾಥ್ ಶಿಂಧೆ ಅವರ ಹೆಸರನ್ನು ಉಲ್ಲೇಖಿಸದೆ ಹಾಸ್ಯ ಮಾಡಿದ್ದ ಕಾಮ್ರಾ, “ಉಪಮುಖ್ಯಮಂತ್ರಿಗಳು 2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರವನ್ನು ಉರುಳಿಸಿದ, ಶಿವಸೇನೆ ಮತ್ತು ಎನ್‌ಸಿಪಿಯ ವಿಭಜಿಸಲು ಕಾರಣವಾಗಿದ್ದರು” ಎಂಬುದನ್ನು ಇಟ್ಟುಕೊಂಡು ಹಾಸ್ಯ ಚಟಾಕಿ ಹಾರಿಸಿದ್ದರು. ಅವರೊಬ್ಬ ದ್ರೋಹಿ ಎಂದು ಜರಿದಿದ್ದರು. ಅವರ ಹಾಸ್ಯವು ಮಹಾರಾಷ್ಟ್ರದಲ್ಲಿ ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿತ್ತು.

ಅವರ ಹಾಸ್ಯದ ವಿಡಿಯೋ ಬಿಡುಗಡೆಯಾದ ಬಳಿಕ, ಭಾನುವಾರ ರಾತ್ರಿ, ಶಿವಸೇನೆ ಕಾರ್ಯಕರ್ತರು ಕಮ್ರಾ ಅವರು ಕಾರ್ಯಕ್ರಮ ನಡೆಸಿದ್ದ ಖಾರ್‌ನಲ್ಲಿರುವ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ಗೆ ನುಗ್ಗಿ ದಾಂಧಲೆ ನಡೆಸಿದ್ದರು. ಶಿವಸೇನೆ ಶಾಸಕ ಮುರ್ಜಿ ಪಟೇಲ್ ಅವರು ಕಾರ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಕಾಮ್ರಾ ವಿರುದ್ಧ ಎಫ್‌ಐಅರ್‌ ದಾಖಲಾಗಿದೆ.

ಈ ವರದಿ ಓದಿದ್ದೀರಾ?: ಶಿವಸೇನೆ ಕಾರ್ಯಕರ್ತರನ್ನು ಕುಟುಕಿದ ಕುನಾಲ್ ಕಾಮ್ರಾ ಹೊಸ ಹಾಡು

ಅಲ್ಲದೆ, ಕಾಮಿಡಿ ಕ್ಲಬ್ ಸ್ಟೂಡಿಯೋದಲ್ಲಿ ದಾಂಧಲೆ ನಡೆಸಿ, ಹಾನಿಗೊಳಿಸಿದ ಶಿವಸೇನೆಯ 40 ಕಾರ್ಯಕರ್ತರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 11 ಮಂದಿಯನ್ನು ಬಂಧಿಸಿದ್ದಾರೆ.

ಕಾಮ್ರಾ ಅವರ ಹಾಸ್ಯವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಹಲವಾರು ನಾಯಕರು ಖಂಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು ಹಾಸ್ಯನಟನ ವಿರುದ್ಧದ ದಾಖಲಿಸಿರುವ ಪ್ರಕರಣ ಮತ್ತು ನಡೆಯುತ್ತಿರುವ ಬೆಳವಣಿಗೆಗಳು ವಿಧ್ವಂಸಕ ಕೃತ್ಯ ಮತ್ತು ಬೆದರಿಕೆಯಾಗಿವೆ ಎಂದು ಟೀಕಿಸಿವೆ. ವಾಕ್ ಸ್ವಾತಂತ್ರ್ಯದ ಮೇಲೆ ಸರ್ಕಾರ ದಾಳಿ ಮಾಡುತ್ತಿದೆ ಎಂದು ಆರೋಪಿಸಿವೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಕಾಮ್ರಾ, “ನನ್ನ ಹೇಳಿಕೆಗಾಗಿ ನಾನು ಕ್ಷಮೆಯಾಚಿಸುವುದಿಲ್ಲ. ಈ ಗುಂಪಿಗೆ (ಶಿವಸೇನೆ) ಹೆದರುವುದಿಲ್ಲ. ನಾನು ಹೆದರಿ, ಅಡಗಿ ಕೂರುವುದೂ ಇಲ್ಲ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X