ರಾಯಚೂರು | ಹೆಚ್ಚುವರಿ ಭೂಮಿ ಹಂಚಿಕೆ ವಿಳಂಬ; ಮಾನಸಯ್ಯ ಬೇಸರ

Date:

Advertisements

ಉಳುವವನೇ ಭೂಮಿ ಒಡೆಯ, ಭೂ ಸುಧಾರಣೆ ಕಾಯ್ದೆ ಜಾರಿ ಮಾಡಿದ್ದೇ ಕಾಂಗ್ರೆಸ್ ಎಂದು ಹೇಳುವ ಪಕ್ಷದ ನಾಯಕರುಗಳು ಕಳೆದ 45 ವರ್ಷಗಳಿಂದ ಜವಳಗೇರಾದ ಹೆಚ್ಚುವರಿ ಭೂಮಿಯನ್ನು ಹಂಚಿಕೆ ಮಾಡಲು ಮುಂದಾಗದೇ ಇರುವುದು ಕಳವಳಕಾರಿಯಾಗಿದ್ದು, ಕೂಡಲೇ ಕ್ರಮಕ್ಕೆ ಒತ್ತಾಯಿಸಿ ಮತ್ತೊಮ್ಮೆ ಹೋರಾಟದ ಮೂಲಕ ಮನವಿ ಮಾಡಲಾಗಿದೆ ಎಂದು ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ ಸದಸ್ಯ ಆರ್. ಮಾನಸಯ್ಯ ಹೇಳಿದರು.

ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಜವಳಗೇರಾದ ಸಿದ್ದಲಿಂಗಮ್ಮ-ವೆಂಕಟರಾವ್‌ಗೆ ಸೇರಿದ 1064 ಎಕರೆ ಹೆಚ್ಚುವರಿ ಭೂಮಿಯನ್ನು ಹಂಚಿಕೆ ಮಾಡುವಂತೆ 1981 ರಲ್ಲಿಯೇ ಘೋಷಿಸಲಾಗಿದೆ. ಸಿದ್ದಲಿಂಗಮ್ಮವರಿಗೆ ಮಕ್ಕಳೇ ಇಲ್ಲ. ವಾರಸುದಾರರು ಅಲ್ಲದೇ ಇದ್ದರೂ ರುದ್ರಭೂಪಾಲ ನಾಡಗೌಡ, ವೆಂಕಟರಾವ್ ನಾಡಗೌಡ ಹಾಗೂ ರಾಜಶೇಖರ ನಾಡಗೌಡ ಇವರ ಹೆಸರಿನಲ್ಲಿ ಅಕ್ರಮವಾಗಿ ಆಸ್ತಿ ವರ್ಗಾವಣೆ ಮಾಡಿಸಲಾಗಿದೆ. ಕೂಡಲೇ ಇದನ್ನು ಪರಿಶೀಲಿಸಿ ಭೂ ಹಂಚಿಕೆಗೆ ಕ್ರಮವಹಿಸಬೇಕು” ಎಂದರು.

“ಹೆಚ್ಚುವರಿ ಭೂಮಿಯನ್ನು ಹಂಚಿಕೆ ಮಾಡಲು ಒತ್ತಾಯಿಸಿ ಅನೇಕ ಹಂತದ ಹೋರಾಟ ನಡೆದರೂ ಕಂದಾಯ ಇಲಾಖೆ ಮಾತ್ರ ಯಾವ ಕ್ರಮಕ್ಕೂ ಮುಂದಾಗಲೇ ಇಲ್ಲ. 1981ರಲ್ಲಿ ಸಿದ್ದಲಿಂಗಮ್ಮನ ವಾರಸುದಾರರೆಂದು ಹೇಳಿಕೊಂಡವರು ಉಚ್ಚ ನ್ಯಾಯಾಲಯ ಮೊರೆ ಹೋಗಿದ್ದರು. ಇಡೀ ಪ್ರಕರಣವನ್ನು ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ. ಆದರೆ 1981 ರಿಂದ 2025 ರವರೆಗೆ 44 ವರ್ಷಗಳು ಕಳೆದರೂ ಭೂ ನ್ಯಾಯ ಮಂಡಳಿಯು ಪ್ರಕರಣದ ವಿಚಾರಣೆ ನಡೆಸದೇ ಇರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ” ಎಂದು ಹೇಳಿದರು.

“ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಯವರಿಗೂ ಪ್ರಕರಣ ಕುರಿತು ಮನವಿ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಭೂ ಸುಧಾರಣೆ ತಂದಿರುವುದಾಗಿಯೂ, ದೇವರಾಜ ಅರಸು ಅವರ ಉಳುವವನೇ ಭೂ ಒಡೆಯ ಜಾರಿಗೊಳಿಸುವುದಾಗಿ ಹೇಳುತ್ತಿದೆ. ಆದರೆ ಹೆಚ್ಚುವರಿ ಭೂಮಿ ಹಂಚಲು ಮಾತ್ರ ಸಿದ್ಧವಿಲ್ಲ. ಏಪ್ರಿಲ್ ಮೊದಲ ವಾರದಲ್ಲಿ ಸಿಎಂ ಬಳಿಗೆ ನಿಯೋಗ ತೆರಳಿ ‌ಮತ್ತೊಮ್ಮೆ ಮನವಿ ನೀಡಲಾಗುತ್ತದೆ. ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದುಳಿಯುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಆರು ತಿಂಗಳ ಕಾಲ ಭೂ ಹಂಚಿಕೆ ಆಗ್ರಹಿಸಿ ಹೋರಾಟ ನಡೆಸಲಾಗಿತ್ತು. ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೂ ನ್ಯಾಯ ಮಂಡಳಿ ರಚಿಸಿ ಪ್ರಕರಣ ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದರಿಂದ ಅನಿರ್ಧಿಷ್ಟಾವಧಿ ಧರಣಿ ಹಿಂಪಡೆಯಲಾಗಿತ್ತು. ಈಗಲೂ ಅದೇ ಮೌನ ವಹಿಸುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರಾಯಚೂರು | ರಸ್ತೆ ಕಾಮಗಾರಿಗೆ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Advertisements

ಈ ವೇಳೆ ಜಿ.ಅಮರೇಶ, ಎಂ.ಗಂಗಾಧರ್, ಆದೇಶ ಕುಮಾರ, ಸಂತೋಷ ಹಿರೇದಿನ್ನಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X