ದಾವಣಗೆರೆ | ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ, ಕ್ರಮಕ್ಕೆ ಮಹಿಳಾ ಒಕ್ಕೂಟ ಆಗ್ರಹ.

Date:

Advertisements

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಹೂವಿನಹಡಗಲಿ ಮೂಲದ ಕೆಲಸದ ಮಹಿಳೆಯನ್ನು ಮೀನು ಕದ್ದಿದ್ದಾರೆ ಎನ್ನುವ ನೆಪವೊಡ್ಡಿ ಮರಕ್ಕೆ ಕಟ್ಟಿ ಥಳಿಸಿರುವುದನ್ನು ಖಂಡಿಸಿ ಎನ್ ಎಫ್ ಐ ಡಬ್ಲ್ಯೂ ಮಹಿಳಾ ಒಕ್ಕೂಟ ದಾವಣಗೆರೆ ಘಟಕದ ವತಿಯಿಂದ ರಾಜ್ಯದ ಗೃಹ ಮಂತ್ರಿಗಳಿಗೆ ದಾವಣಗೆರೆ ಉಪ ವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದವರನ್ನು ಶಿಕ್ಷೆಗೊಳಪಡಿಸುವಂತೆ ಒತ್ತಾಯಿಸಲಾಯಿತು.

1001746264

ದಾವಣಗೆರೆ ಉಪವಿಭಾಗಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಮಹಿಳಾ ಒಕ್ಕೂಟದ ಕಾರ್ಯಕರ್ತರು, ಮೀನು ಕದ್ದ ನೆಪವೊಡ್ಡಿ ಮಹಿಳೆಗೆ ಮರಕ್ಕೆ ಕಟ್ಟಿ ಹತ್ತಾರು ಜನ ಸುತ್ತುವರಿದು ಮಹಿಳೆ ಎನ್ನುವ ಸೌಜನ್ಯವಿಲ್ಲದೇ ಹಲ್ಲೆ ಮಾಡಲಾಗಿದೆ.
ಮಹಿಳೆಗೆ ಹಲ್ಲೆ ನಡೆಸಿ ಕಾನೂನು ಕೈಗೆತ್ತಿಕೊಂಡು ಮಾನವೀಯತೆ ಮರೆತಿದ್ದಾರೆ. ಹಲ್ಲೆ ನಡೆಸಿದ ಅನಾಗರೀಕರಿಗೆ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು. ಈ ತರಹದ ಘಟನೆಗಳು ರಾಜ್ಯದಲ್ಲಿ ಮುಂದೆ ನಡೆಯದಂತೆ ಸರ್ಕಾರ ಕ್ರಮವಹಿಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿ ತಾರತಮ್ಯ, ಎಸ್ಡಿಎಂಸಿ ಅಧ್ಯಕ್ಷನಿಂದ ಮುಖ್ಯ ಶಿಕ್ಷಕನ ವಿರುದ್ಧ ದೂರು, ಕ್ರಮಕ್ಕೆ ಆಗ್ರಹ.

Advertisements

ಪ್ರತಿಭಟನೆಯಲ್ಲಿ ಎನ್ ಎಫ್ ಐ ಡಬ್ಲ್ಯೂ ಮಹಿಳಾ ಒಕ್ಕೂಟದ ರಾಜ್ಯ ಸಮಿತಿ ಸದಸ್ಯೆ ಸರೋಜಾ, ಗೀತಾ, ಅನ್ನಪೂರ್ಣ, ಕುಸುಮ, ಶಕುಂತಲಮ್ಮ, ಮಲ್ಲಮ್ಮ, ಮಮತಾ, ಪದ್ಮಾವತಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X