ಬೆಂಗಳೂರು | ಅಪಾರ್ಟ್‌ಮೆಂಟ್‌ನ ಲಿಫ್ಟ್‌ನಲ್ಲಿ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಫುಡ್‌ ಡೆಲಿವರಿ ಬಾಯ್

Date:

Advertisements
  • ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲು
  • ಫುಡ್‌ ಡೆಲಿವರಿ ಮಾಡಲು ಅಪಾರ್ಟ್‌ಮೆಂಟ್‌ಗೆ ತೆರಳಿದ್ದ ಆರೋಪಿ

ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದಕ್ಕೆ ಫುಡ್‌ ಡೆಲಿವರಿ ಮಾಡಲು ತೆರಳಿದ್ದ ಡೆಲಿವರಿ ಬಾಯ್ ಲಿಫ್ಟ್‌ನಲ್ಲಿ ತೆರಳುವಾಗ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಜೂನ್‌ 23 ರಂದು ಬೆಂಗಳೂರಿನ ತಲ್ಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರು ಆನ್‌ಲೈನ್ ಮುಖಾಂತರ ಫುಡ್‌ ಆರ್ಡರ್ ಮಾಡಿದ್ದಾರೆ. ಆರ್ಡರ್ ಮಾಡಿದ್ದ ಫುಡ್ ಅನ್ನು ಡೆಲಿವರಿ ಮಾಡಲು ಅಪಾರ್ಟ್‌ಮೆಂಟ್‌ಗೆ 30 ವರ್ಷದ ಚೇತನ್ ಎಂಬ ಫುಡ್ ಡೆಲಿವರಿ ಬಾಯ್ ಬಂದಿದ್ದನು. ಈ ವೇಳೆ, ಅಪಾರ್ಟ್‌ಮೆಂಟ್‌ನ 10 ವರ್ಷದ ಬಾಲಕಿ 13 ನೇ ಮಹಡಿಯಲ್ಲಿರುವ ತನ್ನ ಮನೆಗೆ ತೆರಳಲು ಲಿಫ್ಟ್‌ನಲ್ಲಿ ತೆರಳುತ್ತಿದ್ದಳು. ಇದೇ ಸಮಯದಲ್ಲಿ ಲಿಫ್ಟ್‌ನಲ್ಲಿ ಬಂದ ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಾಲಕಿಯ ಪೋಷಕರು ತಕ್ಷಣವೇ ಅಪಾರ್ಟ್‌ಮೆಂಟ್‌ನ ಸೆಕ್ಯೂರಿಟಿ ಗಾರ್ಡ್‌ಗೆ ಮಾಹಿತಿ ನೀಡಿ, ಡೆಲಿವರಿ ಬಾಯ್ ಅನ್ನು ತಡೆಹಿಡಿಯಲು ಹೇಳಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisements

ಲಿಫ್ಟ್‌ನಲ್ಲಿ ಬಾಲಕಿ ಒಬ್ಬಳೆ ಇದ್ದ ಕಾರಣ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಕಾಮುಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ದೃಶ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆಯರ ಸುರಕ್ಷತೆಗಾಗಿ ‘ಸುರಕ್ಷಾ ದ್ವೀಪ’ ಆರಂಭ

ಸದ್ಯ ತಲ್ಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X