ಶಿವಮೊಗ್ಗ | ನಕಲು ಅಂಕಪಟ್ಟಿ ನೀಡಿ ಹುದ್ದೆಗೆ ಆಯ್ಕೆಯಾಗಿದ್ದ ಇಬ್ಬರಿಗೆ ಶಿಕ್ಷೆ ವಿಧಿಸಿದ ಕೋರ್ಟ್

Date:

Advertisements

ಶಿವಮೊಗ್ಗ ಎಸ್ಎಸ್ಎಲ್‌ಸಿ ಜೆರಾಕ್ಸ್ ಅಂಕಪಟ್ಟಿ ನೀಡಿ ಮೆಸ್ಕಾಂ ಕೆಲಸಕ್ಕೆ ಸೇರ್ಪಡೆಯಾಗಿದ್ದ ಇಬ್ಬರಿಗೆ, ಶಿವಮೊಗ್ಗದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕು ಆರುಂಡಿ ಗ್ರಾಮದ ನಿವಾಸಿ ಗಣೇಶಗೌಡ ಬಿ ಜಿ (23) ಹಾಗೂ ತಾಲೂಕಿನ ಕಂದಗಲ್ ಗ್ರಾಮದ ನಿವಾಸಿ ಬಿ ಬಿ ಗಿರೀಶ್ (27) ಜೈಲು ಶಿಕ್ಷೆಗೊಳಗಾದವರೆಂದು ಗುರುತಿಸಲಾಗಿದೆ.

ಕಲಂ 420 ಸಹಿತ 34 ಐಪಿಸಿ ಗೆ 2 ವರ್ಷ ಸಜೆ 4000 ರೂ ದಂಡ, ಕಲಂ 465 ಐಪಿಸಿ ಗೆ 6 ತಿಂಗಳು ಸಜೆ ಹಾಗೂ ಕಲಂ 468 ಸಹಿತ 34 ಐಪಿಸಿಗೆ 2 ವರ್ಷ ಸಜೆ ಹಾಗೂ 4000 ರೂ. ದಂಡ ಮತ್ತು ಕಲಂ 471 ಸಹಿತ 34 ಐಪಿಸಿಗೆ 6 ತಿಂಗಳ ಕಾಲ ಸಜೆ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.ನ್ಯಾಯಾಧೀಶರಾದ ಶಿವಕುಮಾರ್ ಜಿ ಎನ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರುಗಳಾದ ಕಿರಣ್ ಕುಮಾರ್ ಹಾಗೂ ರಂಜಿತ್ ಕುಮಾರ್ ಅವರು ವಾದ ಮಂಡಿಸಿದ್ದರು.

Advertisements

ಇದನ್ನೂ ಓದಿ: Video Thumbnail: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುತ್ತಿದೆ ಶಿವಮೊಗ್ಗದ ಈ ಸರ್ಕಾರಿ ಶಾಲೆ | School | Shivamogga

ಶಿಕ್ಷೆಗೊಳಗಾಗಿರುವ ಗಣೇಶಗೌಡ ಹಾಗೂ ಗಿರೀಶ್ ಅವರು, 2016ರ ನವೆಂಬರ್‌ 24ರಂದು ಮೆಸ್ಕಾಂ ಹುದ್ದೆಗೆ ಎಸ್ಎಸ್ಎಲ್‌ಸಿಯ ಅಸಲಿ ಅಂಕಪಟ್ಟಿಗೆ ಬದಲಾಗಿ, ಜೆರಾಕ್ಸ್ ಅಂಕಪಟ್ಟಿ ನೀಡಿ ಸೇರ್ಪಡೆಯಾಗಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಪಿಎಸ್ಐ ಆಗಿದ್ದ ಇಮ್ರಾನ್ ಬೇಗ್ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X