ದಾವಣಗೆರೆ | ಪಂಜಾಬ್ ನಲ್ಲಿ ರೈತರ ಮೇಲೆ ಪೊಲೀಸರ ದಬ್ಬಾಳಿಕೆ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ.

Date:

Advertisements

ಪಂಜಾಬ್ ರಾಜ್ಯದಲ್ಲಿ ರೈತರ ಮೇಲೆ ನಡೆಸಿದ ದಾಳಿಯು ಅಮಾನುಷವಾಗಿದ್ದು ಹಲ್ಲೆಯನ್ನು ಖಂಡಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ವಿವಿಧ ಸಂಘಟನೆಗಳ ರೈತ ಹೋರಾಟಗಾರರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಹಲ್ಲೆ ನಡೆಸಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿ ದಾವಣಗೆರೆ ಜಿಲ್ಲಾಧಿಕಾರಿಗಳ ಮೂಲಕ ಪಂಜಾಬ್ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಇತ್ತೀಚಿಗೆ ಪಂಜಾಬ್ ರಾಜ್ಯದಲ್ಲಿ ರೈತರ ಮೇಲೆ ನಡೆದ ದಾಳಿಯು ಅಮಾನುಷವಾಗಿದೆ.‌ ಈ ನಿಟ್ಟಿನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮಾರ್ಚ್ 28 ರಂದು ಪ್ರತಿಭಟನಾ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ನಡೆಸುತ್ತಿದೆ.‌ ಅಂತಹ ದಾಳಿಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಖಂಡಿಸುತ್ತದೆ. ರೈತರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಸರ್ಕಾರಗಳು ಅದನ್ನು ಗಮನಿಸುತ್ತಿಲ್ಲ. ರೈತ ಚಳುವಳಿ ಮತ್ತೊಮ್ಮೆ ಪುಟ್ಟಿದೇಳುವ ನಿಟ್ಟಿನಲ್ಲಿ ಹೊರಟಿದೆ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

1001749575
ಜಯದೇವ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟ

ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ಸುನಿತ್ ಕುಮಾರ್ “ಪಂಜಾಬ್ ನಲ್ಲಿ, ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಪಂಜಾಬ್ ಸರ್ಕಾರವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಪೊಲೀಸರ ಮೂಲಕ ದಬ್ಬಾಳಿಕೆಯನ್ನು ನಡೆಸುತ್ತಿದೆ. ದೇಶದ ಸಂವಿಧಾನದ ಪ್ರಕಾರ, ದೇಶದ ನಾಗರಿಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಪ್ರತಿಭಟಿಸುವ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕನ್ನು ಹೊಂದಿದ್ದಾರೆ. ರೈತರಿಗೆ ಮಾರಕವಾದ ವಿದ್ಯುತ್ ಬಿಲ್ ತಂದಿದ್ದಾರೆ.‌ ಈಗಿರುವ ವಿದ್ಯುತ್ ಬಿಲ್ ಕಟ್ಟುವುದಕ್ಕೆಯೇ ರೈತರಿಗೆ ಸಾದ್ಯವಿಲ್ಲ. ರೈತರಿಗೆ ವಿದ್ಯುತ್ ಬಿಲ್ ಅಗತ್ಯವಿಲ್ಲ. ರೈತರನ್ನು ಶೋಷಿಸುವ ಗುತ್ತಿಗೆ ಆಧಾರಿತ ಕೃಷಿ ಬೇಡ. ಎಪಿಎಂಸಿ ಗಳಲ್ಲಿ ದಲ್ಲಾಳಿಗಳು, ಮಧ್ಯವರ್ತಿಗಳು ರೈತರನ್ನು ದೋಚುತ್ತಿದ್ದಾರೆ. ಅದನ್ನು ಸರಿಪಡಿಸಿ ಎಂದರೆ ಮತ್ತೆ ರೈತರ ಶೋಷಣೆಯ ಕೃಷಿ ಕಾಯ್ದೆ ತರುತ್ತಿದ್ದಾರೆ. ಇಂತಹ ಸರ್ಕಾರಗಳಿಂದ ರೈತರಿಗೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ರೈತ ಸಮುದಾಯ ಒಟ್ಟಾಗಿ ಬೀದಿಗಿಳಿಯುವುದು ಅನಿವಾರ್ಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ರೈತ ಮುಖಂಡ ಅರುಣ್ ಕುಮಾರ್ ಕುರುಡಿ ಮಾತನಾಡಿ, “ಮಾರ್ಚ್ 19 ರಂದು, ಕೇಂದ್ರ ಸರ್ಕಾರದ ಮಂತ್ರಿಗಳೊಂದಿಗೆ ಮಾತನಾಡಿ ಹಿಂತಿರುಗುತ್ತಿದ್ದ ರೈತ ನಾಯಕರನ್ನು ಬಂಧಿಸಲಾಗಿದೆ. ಶಂಭು ಮತ್ತು ಖಾನೌರಿಯಲ್ಲಿ ಡೇರೆಗಳು ಮತ್ತು ವಸ್ತುಗಳನ್ನು ಬುಲ್ಡೋಜರ್ ಮೂಲಕ ಧ್ವಂಸಗೊಳಿಸಿ ರೈತರ ಧರಣಿಯನ್ನು ಬಲವಂತವಾಗಿ ಹತ್ತಿಕ್ಕಲಾಯಿತು. ಟ್ರ್ಯಾಕ್ಟರ್ ಟ್ರಾಲಿಗಳು ಸೇರಿದಂತೆ ರೈತರ ಉಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ಮತ್ತು ರೈತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಈ ಮೂಲಕ ಪಂಜಾಬ್ ಸರ್ಕಾರ ರೈತರ ಮೇಲೆ ದೌರ್ಜನ್ಯವೆಸಗಿದೆ” ಎಂದು ಆಪಾದಿಸಿದರು.‌

1001749563
ಪಂಜಾಬನಲ್ಲರೈತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಕಾರ್ಮಿಕ ಮುಖಂಡ ಮಂಜುನಾಥ ಕೈದಾಳ ಮಾತನಾಡಿ, “ಪಂಜಾಬ್‌ನಲ್ಲಿ ಪೊಲೀಸ್ ರಾಜ್ಯವನ್ನು ಸ್ಥಾಪಿಸುವ ಮೂಲಕ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ತುಳಿದು ಹಾಕಲಾಗುತ್ತಿದೆ. ಕರ್ನಲ್ ಪುಷ್ಪಿಂದರ್ ಸಿಂಗ್ ಬಾತ್ ವಿರುದ್ಧದ ಪೊಲೀಸ್ ದೌರ್ಜನ್ಯ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಸ್ಪಷ್ಟ ಸೂಚನೆಗಳ ಹೊರತಾಗಿಯೂ ಬುಲ್ಡೋಜರ್‌ಗಳಿಂದ ಜನರ ಮನೆಗಳನ್ನು ಕೆಡವಿದ್ದಾರೆ.‌ ಗೂಂಡಾಗಳ ರೀತಿ ರೈತರ ಮೇಲೆ ವರ್ತಿಸುತ್ತಿದ್ದಾರೆ. ಈ ಕೂಡಲೇ ರೈತರನ್ನು ಬಿಡುಗಡೆಗೊಳಿಸಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ವಿವಿಧ ಸಂಘಟನೆಗಳು, ಹಕ್ಕೊತ್ತಾಯಗಳ ಈಡೇರಿಕೆಗೆ ಕೇಂದ್ರ ಮತ್ತು ಪಂಜಾಬ್ ರಾಜ್ಯಪಾಲರನ್ನು ಒತ್ತಾಯಿಸಿದರು.‌

ಹಕ್ಕೊತ್ತಾಯಗಳು;

ರೈತರ ಮೇಲೆ ಪೊಲೀಸರು ಬಳಸುತ್ತಿರುವ ಕುರುಡು ಬಲವನ್ನು ನಿಲ್ಲಿಸಬೇಕು ಮತ್ತು ಪ್ರತಿಭಟಿಸುವ ಜನರ ಪ್ರಜಾಸತ್ತಾತ್ಮಕ ಹಕ್ಕನ್ನು ಪುನಃಸ್ಥಾಪಿಸಬೇಕು. ಬಂಧಿಸಲ್ಪಟ್ಟ ಅಥವಾ ಜೈಲಿನಲ್ಲಿರುವ ಎಲ್ಲಾ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು.ರೈತರ ಟ್ರ್ಯಾಕ್ಟರ್-ಟ್ರಾಲಿಗಳು ಸೇರಿದಂತೆ ಎಲ್ಲಾ ಉಪಕರಣಗಳನ್ನು ಹಿಂತಿರುಗಿಸಬೇಕು. ಹಾನಿಗೊಳಗಾದ ಅಥವಾ ಕದ್ದ ಸರಕುಗಳಿಗೆ ಪರಿಹಾರ ನೀಡಬೇಕು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಲ್ಲೆ, ಕ್ರಮಕ್ಕೆ ಮಹಿಳಾ ಒಕ್ಕೂಟ ಆಗ್ರಹ.

  1. ಪ್ರತಿಭಟನೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಜಿಲ್ಲಾ ಮುಖಂಡರಾದ ಹೊನ್ನೂರು ಮುನಿಯಪ್ಪ, ಮಧು ತೊಗಲೇರಿ, ಐರಣಿ ಚಂದ್ರು, ಸತೀಶ್ ಅರವಿಂದ್, ಆವರಗೆರೆ ಚಂದ್ರು , ಶ್ರೀನಿವಾಸ್ ಇ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ ಸಾಂಪ್ರದಾಯಿಕ, ಸೌಹಾರ್ಧತೆಯಿಂದ ಆಚರಿಸಿ; ಡಿಸಿ ಜಿ.ಎಂ.ಗಂಗಾಧರಸ್ವಾಮಿ

"ಕಲೆ ಸಾಂಸ್ಕೃತಿಕತೆಗೆ ಹೆಸರುವಾಸಿಯಾದ ದೇಶದಲ್ಲಿ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ...

ದಾವಣಗೆರೆ | ಬೀದಿ ನಾಯಿ ದಾಳಿಗೆ ಗಾಯಗೊಂಡು ರೇಬೀಸ್ ತಗುಲಿದ್ದ ಮಗು ಸಾವು

ದಾವಣಗೆರೆ ನಗರದ ಶಾಸ್ತ್ರೀನಗರದಲ್ಲಿ ಮನೆ ಮುಂದೆ ಆಟ ಆಡುವ ವೇಳೆ ಬೀದಿ...

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ಚಿತ್ರದುರ್ಗದಲ್ಲಿ ವಿಶೇಷವಾಗಿ ಸ್ವಾತಂತ್ರ್ಯ ದಿನಾಚರಣೆ: ಕುರಿಗಾಹಿಯಿಂದ ಧ್ವಜಾರೋಹಣ

ಇಡೀ ದೇಶಾದ್ಯಂತ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತದೆ. ಶಾಲೆಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ರಾಜಕೀಯ...

Download Eedina App Android / iOS

X