ರಾಯಚೂರು | ಪಂಜಾಬ್ ರೈತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Date:

Advertisements

ಇತ್ತೀಚೆಗೆ ಪಂಜಾಬ್‌ ಸರ್ಕಾರ ಅಲ್ಲಿನ ರೈತರ ಮೇಲೆ ನಡೆಸಿದ ದೌರ್ಜನ್ಯ ಖಂಡಿಸಿ ರಾಯಚೂರಿನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ, ಎಲ್ಲಾ ಬೆಳೆಗಳಿಗೆ ಬೆಲೆ ನಿಗದಿ, ರೈತರು ಮತ್ತು ಕಾರ್ಮಿಕರ ಸಾಲ ಮನ್ನಾ ಹಾಗೂ ವಿದ್ಯುತ್ ದರ ಕಡಿಮೆಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಯ ಮುಖಂಡರು ಆಗ್ರಹಿಸಿದರು. ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

“ಪಂಜಾಬ್ ರೈತ ಚಳವಳಿಗಾರರ ಮೇಲೆ ನಡೆಸಿದ ದೌರ್ಜನ್ಯದ ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸಿ ತಪಿತಸ್ಥರ ವಿರುದ್ಧ ಕ್ರಮಕೈಕೊಳ್ಳಬೇಕೆಂದು ಆಗ್ರಹಿಸಿದರು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾದ ಯುಎಸ್ ಸೇರಿದಂತೆ ಇತರ ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳಿಗೆ ನಡೆಯುತ್ತಿರುವ ಮಾತುಕತೆಗಳನ್ನು ನಿಲ್ಲಿಸಬೇಕು. ಸರ್ಕಾರಗಳು ಇದನ್ನು ತಿರಸ್ಕರಿಸಬೇಕು ಮತ್ತು ಅದನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ತಿಳಿಸುವ ನಿರ್ಣಯಗಳನ್ನು ಅಂಗೀಕರಿಸಬೇಕು” ಎಂದು ಒತ್ತಾಯಿಸಿದರು.

Advertisements

ಎಲ್ಲಾ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು. ಕೇಂದ್ರ ಸರ್ಕಾರವು ತಕ್ಷಣವೇ ಎಲ್ಲಾ ಬೆಳೆಗಳ ಖರೀದಿಗೆ ಖಾತರಿ ನೀಡಬೇಕು.
ರೈತರು ಮತ್ತು ಕಾರ್ಮಿಕರ ಎಲ್ಲಾ ಸಾಲಗಳನ್ನು ಮನ್ನಾ ಮಾಡಬೇಕು. ಕೃಷಿ ಮತ್ತು ಗ್ರಾಮೀಣ ವಲಯಗಳಲ್ಲಿ ವಿದ್ಯುತ್ ದರ ಹೆಚ್ಚಳ ಮತ್ತು ಸ್ಮಾರ್ಟ್ ಮೀಟರ್ ಹೇರಿಕೆಯನ್ನು ಹಿಂಪಡೆಯಬೇಕು, ಕೊಳವೆ ಬಾವಿಗಳಿಗೆ ಉಚಿತ ವಿದ್ಯುತ್ ಮತ್ತು ಗೃಹ ಬಳಕೆ ಮತ್ತು ಅಂಗಡಿಗಳಿಗೆ 300 ಯುನಿಟ್ ವಿದ್ಯುತ್ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

ಈ ವೇಳೆ ಕೆ.ಜಿ.ವಿರೇಶ, ಡಿ.ಎಸ್.ಶರಣಬಸವ, ಮಲ್ಲನಗೌಡ, ಶ್ರೀನಿವಾಸ ಕಲವಲದೂಡ್ಡಿ, ಅಂಜಿನೇಯ್ಯ ಕುರುಬದೊಡ್ಡಿ, ಶ್ರೀನಿವಾಸ ಕೊಪ್ಪರ್, ಮುದಕಪ್ಪ ನಾಯಕ, ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X