ಚಾಮರಾಜನಗರ | ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದರೆ ಉಗ್ರ ಹೋರಾಟ : ವಕ್ತಾರ ರಾಜೂಗೌಡ

Date:

Advertisements

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ರಾಜ್ಯ ವಕ್ತಾರ ರಾಜೂಗೌಡ ‘ ಬಂಡೀಪುರ ರಾತ್ರಿ ಸಂಚಾರ ನಿಷೇಧ ತೆರವಿಗೆ ಮುಂದಾದರೆ ಉಗ್ರ ಹೋರಾಟ ‘ ನಡೆಸುವ ಎಚ್ಚರಿಕೆ ನೀಡಿದರು.

” ಕಳೆದ ವರ್ಷ ಕೇರಳದ ವೈನಾಡಿನ ಲೋಕಸಭಾ ಚುನಾವಣೆ ವೇಳೆ ಪ್ರಿಯಾಂಕ ಗಾಂಧಿಯವರು ಬಂಡೀಪುರದ ರಾತ್ರಿ ಸಂಚಾರ ನಿಷೇಧ ತೆರವು ಮಾಡಿಸುವುದೇ ನನ್ನ ಗುರಿ ಎಂದಿದ್ದರು. ಅದರಂತೆ, ಹೈಕಮಾಂಡ್ ನಾಯಕರ ಮಾತಿಗೆ ರಾಜ್ಯ ಸರ್ಕಾರ ತಲೆಯಾಡಿಸಿ ರಾತ್ರಿ ಸಂಚಾರ ತೆರವು ಮಾಡುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪರಿಶೀಲನೆ ಮಾಡುವ ಮಾತನಾಡಿದ್ದಾರೆ ” ಎಂದು ಆರೋಪಿಸಿದರು.

” ಹುಲಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬಂಡೀಪುರದಲ್ಲಿ, ಹುಲಿಗಳ ಸಂರಕ್ಷಣೆ ಸಹ ಅತ್ಯಗತ್ಯವಾಗಿದೆ. ಒಂದು ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಪ್ರವಾಸೋದ್ಯಮ ಕೂಡ ಮುಖ್ಯವಾಗಿದೆ. ಅಂತಹದರಲ್ಲಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಡಿಕೆಶಿ ರಾತ್ರಿ ಸಂಚಾರ ತೆರವು ಮಾಡುವ ಬಗ್ಗೆ ಹೇಳಿದ್ದು ಖಂಡನೀಯ. ತಾಲ್ಲೂಕಿನ ಜನತೆ ಇಂತಹ ವಿಚಾರಕ್ಕೆ ಸಹಕಾರಿಯಾಗಬಾರದು ವಿರೋಧಿಸಬೇಕು. ಈಗಾಗಲೆ, ಪ್ರತಿನಿತ್ಯ ಮಾನವ ಪ್ರಾಣಿ ಸಂಘರ್ಷ ನಡೆಯುತ್ತಿದೆ, ಇನ್ನು ರಾತ್ರಿ ಸಂಚಾರ ಆರಂಭವಾದರೆ ಸಂಘರ್ಷ ಹೆಚ್ಚಾಗುತ್ತದೆ, ಅಕ್ರಮ ಸಾಗಾಟಕ್ಕೆ ಅವಕಾಶ ನೀಡಿದಂತಾಗುತ್ತದೆ. ಪ್ರಾಣಿ ಭೇಟೆ, ಕಳ್ಳಸಾಗಾಣೆ ಹೆಚ್ಚಳವಾಗುವ ಆತಂಕವಿದೆ ” ಎಂದು ಹೇಳಿದರು.

Advertisements

ಸರ್ಕಾರ ಇಂತಹ ದುಸ್ಸಾಹಸಕ್ಕೆ ಕೈಹಾಕಿದರೆ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು, ಉಗ್ರ ಹೋರಾಟ ಮಾಡಲಾಗುವುದು ಎಂದು ಸರ್ಕಾರ ಹಾಗೂ ಅರಣ್ಯ ಸಚಿವರಿಗೆ ಎಚ್ಚರಿಕೆ ನೀಡಿ. ಜನ ಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು. ಈ ಕ್ಷೇತ್ರದ ಶಾಸಕರು ಪ್ರತಿಕ್ರಿಯೆ ನೀಡಿಲ್ಲ, ಪಕ್ಷಾತೀತವಾಗಿ ಬಂಡೀಪುರ ಉಳಿವಿಗೆ ಕೈಜೋಡಿಸಬೇಕು, ಮುಂದಿನ ದಿನಗಳಲ್ಲಿ ಸರ್ಕಾರ ಇಂತಹ ಕ್ರಮ ಕೈಗೊಂಡರೆ ಶಾಸಕರು ವಿರೋಧಿಸಬೇಕು, ನಮ್ಮ ಜೊತೆ ಹೊರಾಟಕ್ಕೆ ಬರಬೇಕು ಎಂದರು.

ಈಗಾಗಲೇ ಅರಣ್ಯ ಒತ್ತುವರಿ ನಡೆಸುತಿದ್ದು ಅಕ್ರಮ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳು ತಲೆ ಎತ್ತಿವೆ. ಈ ಹಿಂದೆ ಅನುಮತಿ ಇರದ ರೆಸಾರ್ಟ್ ಹೋಂ ಸ್ಟೇ ತೆರವು ಮಾಡಬೇಕು ಎಂದು ಆಗ್ರಹಿಸಿದರು.

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಜಾತ್ರೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದ್ದು, ಅರಣ್ಯ ಇಲಾಖೆ ನಿರಿನ ಟ್ಯಾಂಕ್ ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಂಗಾರಿನ ಮೊದಲ ಉಳುಮೆ ‘ ಹೊನ್ನಾರು ‘

ಜೆಡಿಎಸ್ ಮುಖಂಡ ಬಸವರಾಜ ಸ್ವಾಮಿ ಪತ್ರಿಕಾಗೋಷ್ಟಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X