ವಿಜಯಪುರ | ಹರನಾಳ ಗ್ರಾಪಂ ಅವ್ಯವಹಾರ ಖಂಡಿಸಿ ದಸಂಸ ಪ್ರತಿಭಟನೆ

Date:

Advertisements

ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಹರನಾಳ ಗ್ರಾಪಂನಲ್ಲಿ ನಡೆದ ದೌರ್ಜನ್ಯ ಹಾಗೂ ನಿರಂತರ ಅವ್ಯವಹಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.

ಪಟ್ಟಣದ ಮೊಹರೆ ವೃತ್ತದಿಂದ ಮೆರವಣಿಗೆ ಮೂಲಕ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ದಸಂಸ ಮುಖಂಡರು, “ಗ್ರಾ.ಪಂ.ಯ 15ನೇ ಹಣಕಾಸು ಯೋಜನೆ ಅನುದಾನ, ಪ್ರವರ್ಗ-1ರ ಸದಸ್ಯರ ಗೌರವಧನ ಹಾಗೂ ಹೆಸ್ಕಾಂ ಇಲಾಖೆಗೆ ತುಂಬಬೇಕಾದ ಸುಮಾರು 18 ತಿಂಗಳ ವಿದ್ಯುತ್ ಬಿಲ್ ಸೇರಿದಂತೆ ಸುಮಾರು ವರ್ಷಗಳಿಂದ ಇದೇ ರೀತಿ ಹಲವು ಕಾಮಗಾರಿ ಮಾಡದೆ ಬೋಗಸ್ ಬಿಲ್ ತೆಗೆದಿದ್ದು, ಹರನಾಳ ಹಾಗೂ ಇಂಗಳಗಿ ಗ್ರಾಮದ ದಲಿತರ ಕಾಲೋನಿಯ ರಸ್ತೆ, ಚರಂಡಿ, ಬೀದಿ ದೀಪ ಅಭಿವೃದ್ಧಿ ಮಾಡಲಾರದೆ ಬೋಗಸ್ ಬಿಲ್ ಎತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಭಿವೃದ್ಧಿ ಅಧಿಕಾರಿ ಅಧ್ಯಕ್ಷರು ಹಾಗೂ ಇನ್ನಿತರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಭಿವೃದ್ಧಿ ಕಾಮಗಾರಿಗೆ ಬಳಸಬೇಕಾದ ಹಣವನ್ನು ಮರಳಿ ಸರ್ಕಾರದ ಖಾತೆಗೆ ಜಮೆ ಮಾಡಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅನ್ಯಾಯವನ್ನು ಕೇಳಲು ಹೋದ ದಲಿತ ಸಂಘರ್ಷ ಸಮಿತಿಯ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಅಧ್ಯಕ್ಷ ಹಾಗೂ ಮುಖಂಡರ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಏ.1ರಿಂದ ₹10,000 ಗೌರವಧನ ನೀಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

Advertisements

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ರಮೇಶ ಆಸಂಗಿ, ಜಿಲ್ಲಾ ಸಂಚಾಲಕ ಪ್ರಕಾಶ ಗುಡಿಮನಿ, ಪದಾಧಿಕಾರಿಗಳಾದ ವಿನಾಯಕ ಗುಣಸಾಗರ, ಅಶೋಕ ಚಲವಾದಿ, ಪರಶುರಾಮ ತಳವಾರ, ರಾಜಕುಮಾರ ಸಿಂದಗೇರಿ, ಮಂಜುನಾಥ ಯಂಟಮಾನ, ರಾವತ ಮಾಸ್ತಾರ ತಳಕೇರಿ, ಬಸವರಾಜ ಇಂಗಳಗಿ, ಪರಶುರಾಮ ಬಡಿಗೇರ, ಅಶೋಕ ಗುಡಿಸಲಮನಿ, ಪ್ರಕಾಶ ಶಾಂತಗಿರಿ, ರಾಜು ಮೆಟಗಾರ.ಪಿಂಟೂ ಬಾಸುತ್ತರ ಸೇರಿದಂತೆ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X