ಛತ್ತೀಸಗಢ | ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಕಾಳಗ : 16 ಮಂದಿ ಹತ್ಯೆ

Date:

Advertisements

ಛತ್ತೀಸಗಢದ ಕೇರ್ಲಾಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಮಾವೋವಾದಿಗಳ ವಿರುದ್ಧ ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಇಂದು (ಶನಿವಾರ) ಜಂಟಿ ಕಾರ್ಯಾಚರಣೆ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಒಟ್ಟು 16 ಮಾವೋವಾದಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೇರ್ಲಾಪಾಲ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯು ಮಾವೋವಾದಿಗಳ ವಿರೋಧಿ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಈ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆದಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಖಚಿತ ಮಾಹಿತಿ ಆಧರಿಸಿ, ಬಿಎಸ್‌ಎಫ್‌ ಹಾಗೂ ಜಿಲ್ಲಾ ಮೀಸಲು ಪಡೆಯ (ಡಿಆರ್‌ಜಿ) ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಸ್ಥಳದಿಂದ 16 ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತಷ್ಟು ಶೋಧ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Advertisements
https://twitter.com/i/status/1905867996586819588

ಶನಿವಾರ ನಡೆದ ಭೀಕರ್‌ ಎನ್‌ಕೌಂಟರ್‌ ಮಾತ್ರವಲ್ಲದೆ, ಮಾರ್ಚ್‌ 1ರಂದು ಕೂಡ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಆ ವಳೆ, ಇಬ್ಬರು ನಕ್ಸಲ್ ಹೋರಾಟಗಾರರನ್ನು ಕೊಲ್ಲಲಾಗಿತ್ತು.

ಕಳೆದ ತಿಂಗಳು (ಫೆಬ್ರವರಿ) ಬಸ್ತಾರ್ ಪ್ರದೇಶದಲ್ಲಿ ನಡೆದ ಕಾರ್ಯಾರಣೆಯಲ್ಲಿ 40 ಮಂದಿ ಮಾವೋವಾದಿ ಹೋರಾಟಗಾರರನ್ನು ಕೊಲ್ಲಲಾಗಿದೆ. ಫೆಬ್ರವರಿಯಿಂದ ಇಂದಿನವರೆಗೆ 58 ಮಂದಿ ನಕ್ಸಲ್‌ ಹೋರಾಟಗಾರರನ್ನು ಭದ್ರತಾ ಪಡೆಗಳು ಕೊಂದಿವೆ.

2026ರ ಮಾರ್ಚ್‌ ವೇಳೆಗೆ ದೇಶದಲ್ಲಿ ನಕ್ಸಲ್ ಹೋರಾಟವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಆದರೆ, ಅವರು ನಕ್ಸಲ್‌ ಹೋರಾಟಗಾರರನ್ನು ಕೊಲ್ಲುವ ಮೂಲಕ ಹೋರಾಟದ ದನಿಯ ಸದ್ದಡಗಿಸುವ ದಾರಿ ಹಿಡಿದ್ದಾರೆ. ಆದರೆ, ದಕ್ಷಿಣದ ರಾಜ್ಯಗಳು ಪ್ರಮುಖವಾಗಿ ಕರ್ನಾಟಕವು ಮಾವೋವಾದಿ ಹೋರಾಟಗಾರರಿಗೆ ಸಶಸ್ತ್ರ ಹೋರಾಟವನ್ನು ಬಿಟ್ಟು, ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬಂದು ಹೋರಾಟ ಮುಂದುವರೆಸಲು ಅವಕಾಶ ಮಾಡಿಕೊಡುತ್ತಿದೆ.

ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ನಕ್ಸಲ್ ಹೋರಾಟಗಾರರಿಗೆ ಕರ್ನಾಟಕ ಸರ್ಕಾರ ಕರೆಕೊಟ್ಟಿದೆ. ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರುವ ನಕ್ಸಲ್ ಹೋರಾಟಗಾರರಿಗೆ ತಮ್ಮ ವಿರುದ್ಧದ ಪ್ರಕರಣಗಳ ತ್ವರಿತ ವಿಚಾರಣೆ ಮತ್ತು ಶೀಘ್ರ ಜಾಮೀನು ಪಡೆಯಲು ವಿಶೇಷ ನ್ಯಾಯಾಲಯ ಸ್ಥಾಪನೆ, ಶರಣಾಗತಿ ಪ್ಯಾಕೇಜ್‌ಗಳನ್ನು ನೀಡುತ್ತಿದೆ. ಆ ಮೂಲಕ, ನಕ್ಸಲ್ ಹೋರಾಟಗಾರರನ್ನು ಗೌರವಯುತವಾಗಿ ಮುಖ್ಯವಾಹಿನಿಗೆ ಕರೆತಂದು, ಕರ್ನಾಟಕವನ್ನು ನಕ್ಸಲ್ ಹೋರಾಟ ಮುಕ್ತ ರಾಜ್ಯವೆಂದು ಘೋಷಿಸಿದೆ.

ಆದರೆ, ಕೇಂದ್ರ ಮತ್ತು ಉತ್ತರ ಇತರ ರಾಜ್ಯ ಸರ್ಕಾರಗಳು ನಕ್ಸಲ್ ಹೋರಾಟಗಾರರನ್ನು ಕೊಲ್ಲುವುದನ್ನೇ ಆಧ್ಯತೆಯನ್ನಾಗಿ ಮಾಡಿಕೊಂಡಿವೆ. ನಿರಂತರ ಕಾರ್ಯಾಚರಣೆ ನಡೆಸಿ, ಹತ್ಯೆ ಮಾಡುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X