ಬೀದರ್‌ | ಅಂತರ್ಜಾತಿ ವಿವಾಹ ದಂಪತಿಗಳಿಗೆ ಸನ್ಮಾನ

Date:

Advertisements


ಮಹಾಡ್ ಚೌಡರ್ ಕೆರೆ ಪ್ರವೇಶ ವಿಜಯೋತ್ಸವ ಅಂಗವಾಗಿ ಸಮಸಮಾಜ ನಿರ್ಮಾಣದ ಕುರಿತು ವಿಚಾರ ಸಂಕಿರಣ ಹಾಗೂ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಮಿತಿಯಿಂದ ಆಯೋಜಿಸಲಾಯಿತು.

ಬೀದರ್‌ ನಗರದ ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಂತೆ ಧಮ್ಮಾನಂದ ಮಹಾಥೇರೊ ಸಾನಿಧ್ಯ ವಹಿಸಿದ್ದರು.

ವಿಶೇಷ ಉಪನ್ಯಾಸ ನೀಡಲು ಆಗಮಿಸಿದ ಮಹಾರಾಷ್ಟ್ರದ ಮಹಾಡ ಪಟ್ಟಣದ ವ ಪ್ರೊ.ವಿಶಾಲ ಖಾಂಭೆ ದಂಪತಿ ಚೌಡಾರ್ ಕೆರೆಯಿಂದ ತಂದ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Advertisements

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಸ್ಥಾಪಕ ಪರಶುರಾಮ ನೀಲನಾಯಕ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಪ್ರತಿವರ್ಷ ನಾವೆಲ್ಲರೂ ಸಮಸಮಾಜ ನಿರ್ಮಾಣಕ್ಕಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತೋರಿದ ಮಾರ್ಗದಲ್ಲಿ ಸಾಗೋಣʼ ಎಂದು ತಿಳಿಸಿದರು.

ಪ್ರೊ.ವಿಶಾಲ ಖಾಂಭೆ ಮಾತನಾಡಿ, ʼಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚೌಡರ್ ಕೆರೆಯ ಕುರಿತು ನಡೆಸಿದ ಸತ್ಯಾಗ್ರಹ ಮತ್ತು ಕುಡಿಯುವ ನೀರಿಗಾಗಿ ಅಂಬೇಡ್ಕರ್‌ ಅವರು ನಡೆಸಿದ ಹೋರಾಟದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಕದಸಂಸ (ಭೀಮವಾದ) ಜಿಲ್ಲಾ ಸಂಚಾಲಕ ಸುನೀಲ ಸಂಗಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ್‌ ಚಿಮಕೋಡೆ, ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯಕುಮಾರ ಮಾಳಗೆ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ದೊಡ್ಡಿ, ಹುಮನಾಬಾದ್ ತಾಲೂಕಾ ಪಂಚಾಯತ ಸಹಾಯಕ ನಿರ್ದೇಶಕ ತಮ್ಮಣ್ಣಾ, ನಗರಸಭೆ ನಾಮನಿರ್ದೇಶಿತ ಸದಸ್ಯ ಸೂರ್ಯಕಾಂತ ಸಾಧುರೆ ಸೇರಿದಂತೆ ಪ್ರಮುಖರಾದ ಎಂ.ಎ. ಜಬ್ಬಾರ್, ಶಶಿಕಾಂತ ಪೊಲೀಸ್ ಪಾಟೀಲ ಚೌಳಿ, ಗೌತಮ ಚಿಂತಲಗೇರಾ, ಸಂಜೀವಕುಮಾರ ಮೇಟಿ, ಸೂರ್ಯಕಾಂತ ಸಾಧುರೆ, ಗೋವಿಂದ ಪೂಜಾರಿ, ಸಚಿನ ಕೌಠಾ, ಕೃಷ್ಣಾ ಹೊಸಮನಿ, ಚಂದ್ರಕಾಂತ ಶಾಹಬಾದಕರ್, ಪಾಂಡುರಂಗ ಬೆಲ್ದಾರ್, ಸುರೇಶ ಕಾಳೆ, ಸಿದ್ಧಾರ್ಥ ಭಾವಿಕಟ್ಟಿ, ಸಿದ್ರಾಮ ಶಿಂಧೆ, ರಾಜು ಸಾಗರ, ಸುಧಾಕರ ಶೇರಿಕಾರ, ಬಬ್ರುವಾಹನ, ಧನರಾಜ, ಸಂಜೀವಕುಮಾರ ಡಾಕುಳಗಿ ಇದ್ದರು.

ಈ ಸುದ್ದಿ ಓದಿದ್ದೀರಾ? ಐಪಿಎಲ್ ಕ್ರಿಕೆಟ್ | ಆಟಗಾರರು, ಅಭಿಮಾನಿಗಳು ಮತ್ತು ಸೋಷಿಯಲ್ ಮೀಡಿಯಾ ಎಂಬ ಕಿಂದರಿಜೋಗಿ

ಕಾರ್ಯಕ್ರಮದ ಆಯೋಜಕರಾದ ಕಿಶ ನ್ವಾಘಮಾರೆ ಭಾಲ್ಕಿ, ಶಿವಕುಮಾರ ಶಿಂಧೆ ಚಂದನಹಳ್ಳಿ, ತುಕಾರಾಮ ಮೇತ್ರೆ, ಪುಟ್ಟರಾಜ್ ದೀನೆ, ಅಂಕುಶ ಡಾಂಗೆ, ಸುಧಾಕರ ಸಂಗಮ, ಅಡ್ವಾನಿ ನಾಯಕ, ಶಿವರಾಜ ಮಹೇಶಗೊಂಡ ಉಪಸ್ಥಿತರಿದ್ದರು. ಸುನೀಲ ಸಂಗಮ ಸ್ವಾಗತಿಸಿದರು, ಅಂಬಾದಾಸ ಗಾಯಕವಾಡ್ ವಂದಿಸಿದರು, ಅಂಬಾದಾಸ ಸೋನಿ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X