ಗರ್ಭಿಣಿಯನ್ನು ದಾಖಲಿಸಿಕೊಳ್ಳಲು 2 ಬಾರಿ ಆಸ್ಪತ್ರೆ ಸಿಬ್ಬಂದಿ ನಕಾರ; ಕೈಗಾಡಿಯಲ್ಲೇ ಹೆರಿಗೆ – ಮಗು ಸಾವು

Date:

Advertisements

ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದ ಗರ್ಭಿಣಿಯನ್ನು ದಾಖಲಿಸಿಕೊಳ್ಳಲು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ನಿರಾಕರಿಸಿದ್ದು, ಮಹಿಳೆಯು ಕೈಗಾಡಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ಸೂಕ್ತ ರೀತಿಯಲ್ಲಿ ಹೆರಿಗೆಯಾಗದ ಪರಿಣಾಮ ಮಗು ಸಾವನ್ನಪ್ಪಿದೆ. ದುರ್ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ನಡೆದಿದೆ.

ರತ್ಲಾಮ್ ಜಿಲ್ಲೆಯ ಸೈಲಾನಾದಲ್ಲಿ ಘಟನೆ ನಡೆದಿದೆ. ಮಹಿಳೆಯನ್ನು ಹೆರಿಗೆಗಾಗಿ ದಾಖಲಿಸಲು ಆಕೆಯ ಪತಿ ಎರಡು ಬಾರಿ ಸಮುದಾಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಆದರೆ, ಎರಡು ಬಾರಿಯೂ ಆಕೆಯನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಯ ಸಿಬ್ಬಂದಿ ನಿರಾಕರಿಸಿದ್ದಾರೆ. ಹೆರಿಗೆಗೆ ಇನ್ನೂ ಸಮಯವಾಗಿಲ್ಲವೆಂದು ಆಕೆಯನ್ನು ವಾಪಸ್‌ ಕಳಿಸಿದ್ದಾರೆ. ಪರಿಣಾಮ, ಮಹಿಳೆಗೆ ರಸ್ತೆಯಲ್ಲೇ ಕೈಗಾಡಿ ಮೇಲೆ ಹೆರಿಗೆಯಾಗಿದೆ. ಮಗು ಸಾವನ್ನಪ್ಪಿದೆ.

ಘಟನೆಗೆ ಸಂಬಂಧಿಸಿದ ಸಿಸಿ ಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಬೆಳಕಿಗೆ ಬಂದ ಬಳಿಕ ಸೈಲಾನಾ ಬ್ಲಾಕ್‌ ವೈದ್ಯಕೀಯ ಅಧಿಕಾರಿಗೆ (ಬಿಡಿಒ) ಜಿಲ್ಲಾಡಳಿತ ಶೋಕಾಸ್ ನೋಟಿಸ್ ನೀಡಿದೆ. ಶುಶ್ರೂಷಕಿ ಚೇತನಾ ಚಾರೆಲ್ ಮತ್ತು ಗಾಯತ್ರಿ ಪಾಟೀದಾರ್‌ ಎಂಬವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

Advertisements

ಮೂಲಗಳ ಪ್ರಕಾರ, ಸೈಲಾನಾ ನಿವಾಸಿ ಕೃಷ್ಣ ಗ್ವಾಲಾ ಅವರು ತಮ್ಮ ಪತ್ನಿ ನೀತು ಅವರನ್ನು ಹೆರಿಗೆಗಾಗಿ ಮಾರ್ಚ್‌ 23ರ ರಾತ್ರಿ ಆರೋಗ್ಯಕ್ಕೆ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು. ಆದರೆ, ಶುಶ್ರೂಷಕಿ ಚೇತನಾ, ‘ಹೆರಿಗೆಗೆ ಇನ್ನೂ ಎರಡು/ಮೂರು ದಿನ ಬಾಕಿ ಇದೆ. ಈಗಲೇ ಆಕೆಯನ್ನು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿ ವಾಪಸ್ ಕಳಿಸಿದ್ದಾರೆ. ಮರುದಿನ (ಮಾರ್ಚ್‌ 24) ಮುಂಜಾನೆಯೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಕೆಯನ್ನು ಕೃಷ್ಣ ಅವರನ್ನು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಗ, ಕರ್ತವ್ಯದಲ್ಲಿದ್ದ ಶುಶ್ರೂಷಕಿ ಗಾಯತ್ರಿ ಕೂಡ ಅವರನ್ನು ವಾಪಸ್‌ ಕಳಿಸಿದ್ದಾರೆ.

ಮನೆಗೆ ಮರಳಿದ ಬಳಿಕ, ಹೆರಿಗೆ ನೋವು ಹೆಚ್ಚಾಗಿದೆ. ನೀತು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ವಾಹನಗಳು ಲಭ್ಯವಿಲ್ಲದೆ, ಆಕೆಯನ್ನು ಕೃಷ್ಣ ಅವರು ಕೈಗಾಡಿಯಲ್ಲಿ ಕೂರಿಸಿಕೊಂಡು ಆಸ್ಪತ್ರೆಯತ್ತ ಧಾವಿಸಿದ್ದಾರೆ. ಆದರೆ, ಆಸ್ಪತ್ರೆಗೆ ಬರುವುದಕ್ಕೂ ಮುನ್ನವೇ ಹೆರಿಗೆಯಾಗಿದ್ದು, ಶಿಶುವಿನ ಕಾಲುಗಳು ಮಾತ್ರ ಹೊರಬಂದಿದ್ದವು, ತಲೆ ಗರ್ಭದೊಳಗೇ ಇತ್ತು ಎಂದು ಹೇಳಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಶುಶ್ರೂಷಕಿ ಹೆರಿಗೆ ಮಾಡಿಸಿದ್ದು, ಶಿಶು ಗರ್ಭದಲ್ಲೇ ಮೃತಪಟ್ಟಿತ್ತು ಎಂದು ವರದಿಯಾಗಿದೆ.

ಸಂತ್ರಸ್ತ ದಂಪತಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಕರ್ತವ್ಯಲೋಪ ಎಸಗಿದ ಶುಶ್ರೂಷಕಿಯನ್ನು ಅಮಾನತು ಮಾಡಿದ್ದಾರೆ.

https://twitter.com/i/status/1905908964761739395

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X