ರಾಯಚೂರು | ಮರಳು ದಂಧೆ ಖಂಡಿಸಿ ಪ್ರತಿಭಟನೆ

Date:

Advertisements

ಮರಳು ದಂಧೆಯಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ನಿರ್ಲಕ್ಷ್ಯದಿಂದ ಮೂವರು ಅಮಾಯಕರು ಬಲಿಯಾಗಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಿಗರ ರಕ್ಷಣಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶುಕ್ರವಾರ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದಲ್ಲಿ ರಾತ್ರಿ ವೇಳೆ ಕೊಳವೆಭಾವಿ ಕೊರೆದು ಛತ್ತಿಸಗಡ ರಾಜ್ಯದ ಮೂವರು ಕಾರ್ಮಿಕರು ಮಲಗಿರುವಾಗ ಅಕ್ರಮ ಮರಳು ದಂಧೆ ಮಾಡುವವವರು ಜೆಸಿಬಿ ಹರಿಸಿದ ಕಾರಣ ಮೃತಪಟ್ಟಿದ್ದರು. ಅಕ್ರಮ ಮರಳುದಂಧೆಗೆ ಅಮಾಯಕರು ಬಲಿಯಾಗಿದ್ದು ಖಂಡನೀಯ. ಅಕ್ರಮ ಮರಳುದಂಧೆಗೆ ಹಿರಿಯ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶಾಲಾ ಬಾಲಕಿ ಸಾವು ಪ್ರಕರಣ; ಆರೋಪಿಗೆ ಷರತ್ತುಬದ್ಧ ಜಾಮೀನು

Advertisements

“ಕಳೆದ ಡಬಲ್ ಎಂಜಿನ್ ಸರ್ಕಾರ ಜಿಲ್ಲೆಯ ಅಕ್ರಮ ಮರಳುಗಾರಿಕೆಯ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಧಿಕಾರಿಗಳಿಗೆ ವರವಾಗಿದೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಮರಳುಗಾರಿಕೆಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಇಮ್ರಾನ್ ಬಡೇಸಾಬ್, ನಜೀರ್ ಅಹ್ಮದ್, ಸೈಯದ್ ರಶೀದ್, ಇಮಾಮ್ ಹುಸೇನ್, ಮನ್ಸೂರ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕಾಯಂ ಜನತಾ ನ್ಯಾಯಾಲಯದ ಬಗ್ಗೆ ಜಾಗೃತಿ ಅಭಿಯಾನ

ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ...

ಇಂಡಿ | ಬಿಜೆಪಿ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಅಭಿಯಾನ; ತನಿಖೆಗೆ ಒತ್ತಾಯ

ವಿಜಯಪುರ ಜಿಲ್ಲೆ ಇಂಡಿ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

Download Eedina App Android / iOS

X