ಅಧಿವೇಶನ ಆರಂಭದಿಂದ ಅಂತ್ಯದವರೆಗೂ ಸರ್ಕಾರದ ವಿರುದ್ಧ ಸತ್ಯಾಗ್ರಹ : ಯಡಿಯೂರಪ್ಪ

Date:

Advertisements
  • ಗ್ಯಾರಂಟಿ ಅನುಷ್ಠಾನಕ್ಕಾಗಿ ಹೋರಾಟಕ್ಕಿಳಿದ ಬಿಜೆಪಿ
  • ವಿಧಾನಸೌಧದೆದುರು ಪ್ರತಿಭಟನೆಗೆ ಅಣಿಯಾದ ಬಿಎಸ್‌ವೈ

ಗ್ಯಾರಂಟಿ ಯೋಜನೆಗಳ ಜಾರಿಗೆ ಆಗ್ರಹಿಸಿ ಜೂನ್ 3 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಸಭೆ ಅಧಿವೇಶನದ ಆರಂಭದಿಂದ ಅಂತ್ಯದವರೆಗೂ ಸರ್ಕಾರದ ವಿರುದ್ಧ ಸತ್ಯಾಗ್ರಹ ನಡೆಸುವುದಾಗಿ ಮಾಜಿ ಸಿ ಎಂ ಯಡಿಯೂರಪ್ಪ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿಯಾಗಲೇಬೇಕು. ಅದಾಗದಿದ್ದಲ್ಲಿ ಕಾರ್ಯಕರ್ತರ ಜೊತೆ ಕುಳಿತು ಸತ್ಯಾಗ್ರಹ ಮಾಡುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದಂತೆಯೇ 15 ಕೆಜಿ ಅಕ್ಕಿ ಕೊಡಬೇಕು. ನಿರುದ್ಯೋಗಿ ಪದವೀಧರ ಬ್ಯಾಂಕ್ ಖಾತೆಗೆ 3,000 ಹಣ ಕೊಡಬೇಕು. ಹಾಗೆಯೇ ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಲು ಅವಕಾಶ ಕೊಡದಂತೆ ಹೋರಾಟ ಮಾಡುವುದಾಗಿ ಹೇಳಿದರು.

Advertisements

ಅಧಿವೇಶನದ ಆರಂಭದ ದಿನದಿಂದ ನಾನು, ನಮ್ಮ ಕಾರ್ಯಕರ್ತರು ಸತ್ಯಾಗ್ರಹ ಮಾಡುತ್ತೇವೆ. ವಿಧಾನಸಭೆಯಲ್ಲಿ ನಮ್ಮ ಪಕ್ಷದ ಶಾಸಕರು ಇದಕ್ಕಾಗಿ ಹೋರಾಟ ಮಾಡಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಮಧ್ಯವರ್ತಿಗಳನ್ನು ದಾಟಿ ಫಲಾನುಭವಿಗಳಿಗೆ ಯೋಜನೆ ಲಾಭ ಸಿಗಲಿ: ಸಚಿವ ಡಾ. ಎಚ್ ಸಿ ಮಹದೇವಪ್ಪ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಪ್ರಚಂಡ ಗೆಲುವು ದಾಖಲಿಸಲಿದೆ. ಇದಕ್ಕೆ ಅಗತ್ಯವಿರುವ ಸಿದ್ದತೆ ಮಾಡಿಕೊಂಡಿದ್ದೇವೆ. ರಾಜ್ಯದಲ್ಲಿ 25-26 ಲೋಕಸಭಾ ಸ್ಥಾನ ಗೆಲ್ಲುವ ಮೂಲಕ ಕೇಂದ್ರದ ನಮ್ಮ ಸರ್ಕಾರವನ್ನು ಬಲಪಡಿಸಬೇಕಿದೆ ಎಂದು ಬಿಎಸ್ ವೈ ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X