ರಾಯಚೂರು | ಬೀದಿನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಸಾವು

Date:

Advertisements

ಬೀದಿನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಗ್ರಾಮದಲ್ಲಿ ನಡೆದಿದೆ.

ಸಿದ್ದು ಬೀರಪ್ಪ ಮೃತ ಬಾಲಕ ಎಂದು ಗುರುತಿಸಲಾಗಿದೆ. ತಾಯಿಯು ಬಯಲು ಬಹಿರ್ದೆಸೆಗೆ ತೆರಳಿದಾಗ ಭಾವಿಸಿ ಹಿಂದೆಯೂ ಅಲ್ಲಿಗೆ ಹೋಗುವಾಗ ಬೀದಿ ನಾಯಿಗಳ ಗುಂಪೊಂದು ದಾಳಿ ಮಾಡಿ ಎಳೆದಾಡಿ ಗಂಭೀರ ಗಾಯಗೊಳಿಸಿವೆ ಎನ್ನಲಾಗಿದೆ.

ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿ ಬಾಲಕ ಮೃತಪಟ್ಟಿದ್ದಾನೆಂದು ಹೇಳಲಾಗಿದೆ. ಬಾಲಕನ ಸಾವಿನ ಸುದ್ದಿ ಕೇಳಿ ಇಡೀ ಗ್ರಾಮದ ಆಕ್ರಂದನ ಮುಗಿಲು ಮುಟ್ಟಿದೆ.

Advertisements

ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ರಾಯಚೂರು ತಾಲೂಕಿನ ಮರ್ಚೆಟ್ಹಾಳ್ ಗ್ರಾಮದಲ್ಲಿ ಐದನೇ ತರಗತಿ ವಿದ್ಯಾರ್ಥಿ ಮೇಲೆ ನಾಯಿ ದಾಳಿ ಮಾಡಿದ್ದರಿಂದ ವಿದ್ಯಾರ್ಥಿ ಗಂಭೀರ ಗಾಯಗೊಂಡ ವರದಿಯಾಗಿತ್ತು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ತಡವಾಗಿ ಬಿತ್ತನೆಯಾದ ಹಿಂಗಾರು ಬೆಳೆ; ಕಟಾವಿನವರೆಗೆ ಕಾಲುವೆಗೆ ನೀರು ಬಿಡುಗಡೆ

“ಬೀದಿನಾಯಿಗಳ ಹಾವಳಿ ಬಗ್ಗೆ ಹಲವು ಬಾರಿ ಹೋರಾಟ, ಪ್ರತಿಭಟನೆ ನಡೆದರೂ ಕೂಡಾ ಬೀದಿನಾಯಿ ಹಾವಳಿಗೆ ಕಡಿವಾಣ ಹಾಕುವುದಕ್ಕೆ ಆಗುತ್ತಿಲ್ಲ” ಎಂದು ಸಾರ್ವಜನಿಕರ ಬೇಸರ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X