ತವರಿನಲ್ಲೇ ಆಡಲ್ಲ ಎಂದ ಸನ್‌ರೈಸರ್ಸ್ ಹೈದಾರಾಬಾದ್; ಕಾರಣವೇನು?

Date:

Advertisements

ಸನ್‌ರೈಸರ್ಸ್ ಹೈದ್ರಾಬಾದ್ ತಂಡವು ತಮ್ಮ‌ತವರು ರಾಜ್ಯದಲ್ಲಿರುವ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಡುವುದಿಲ್ಲ. ಬೇಕಿದ್ದರೆ ಅಲ್ಲಿನ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸುತ್ತೇವೆ ಎಂದು ಹೇಳಿದೆ.

ಕ್ರೀಡಾಂಗಣದಲ್ಲಿನ ನೀಡಬೇಕಾದ ಉಚಿತ ಟಿಕೆಟ್‌ಗಳ ವಿಚಾರವಾಗಿ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (HCA) ಜೊತೆ ಎಸ್‌ಆರ್‌ಎಚ್ ಪ್ರಾಂಚೈಸಿ ನಡುವೆ ತಿಕ್ಕಾಟ ನಡೆಯುತ್ತಿದೆ. ಹೀಗಾಗಿ, ಪಂದ್ಯವನ್ನೇ ಸ್ಥಳಾಂತರಿಸುವುದಾಗಿ ಎಸ್‌ಆರ್‌ಎಚ್ ಪ್ರಾಂಚೈಸಿ ಎಚ್ಚರಿಕೆ ನೀಡಿದೆ.

ಎಚ್‌ಸಿಎ ಉನ್ನತ ಅಧಿಕಾರಿಗಳ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಫ್ರಾಂಚೈಸಿ ಆರೋಪಿಸಿದೆ. ತವರಿನಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬೇರೆ ಕ್ರೀಡಾಂಗಣಗಳಲ್ಲಿ ಆಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.

Advertisements

ಎಸ್‌ಆರ್‌ಎಚ್‌ನ ಜನರಲ್ ಮ್ಯಾನೇಜರ್ ಶ್ರೀನಾಥ್ ಟಿಬಿ ಅವರು ಎಚ್‌ಸಿಎ ಖಜಾಂಚಿ ಸಿಜೆ ಶ್ರೀನಿವಾಸ್ ರಾವ್ ಅವರಿಗೆ ಪತ್ರ ಬರೆದಿದ್ದಿದ್ದಾರೆ. ಎಚ್‌ಸಿಎ ನಡವಳಿಕೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ. “ಎಚ್‌ಸಿಎ ಅಧ್ಯಕ್ಷರ ನಡವಳಿಕೆಗಳು ತಂಡವು ಹೈದ್ರಾಬಾದ್ ಕ್ರೀಡಾಂಗಣದಲ್ಲಿ ಆಡುವುದು‌ ಇಷ್ಟವಿಲ್ಲ ಎಂಬಂತೆ ತೋರಿಸುತ್ತಿವೆ. ಹಾಗೇನಾದರೂ ಇದ್ದರೆ, ಲಿಖಿತವಾಗಿ ತಿಳಿಸಿಬಿಡಿ, ನಾವು ಬೇರೆ ಸ್ಥಳಕ್ಕೆ ಹೋಗುತ್ತೇವೆ” ಎಂದಿದ್ದಾರೆ.

ಕ್ರೀಡಾಂಗಣಕ್ಕೆ ಸೂಕ್ತವಾದ ಬಾಡಿಗೆ ಪಾವತಿಸುತ್ತೇವೆ.‌ಹಲವು ವರ್ಷಗಳಿಂದ, ಒಟ್ಟು 3,900 ಉಚಿತ ಟಿಕೆಟ್‌ಗಳಲ್ಲಿ 50 ಟಿಕೆಟ್‌ಗಳನ್ನು (F12A ಬಾಕ್ಸ್) ಎಚ್‌ಸಿಎಗೆ ಹಂಚಿಕೆ ಮಾಡಲಾಗಿದೆ. ಆದರೆ, ಈಗ ಬಾಕ್ಸ್ ಸಾಮರ್ಥ್ಯ ಕೇವಲ 30 ಎಂದು ಹೇಳಿಕೊಳ್ಳುತ್ತಿದ್ದೀರಿ. ಬೇರೆ ಬಾಕ್ಸ್‌ನಲ್ಲಿ ಹೆಚ್ಚುವರಿಯಾಗಿ 20 ಉಚಿತ ಟಿಕೆಟ್‌ಗಳನ್ನು ಕೇಳುತ್ತಿದ್ದೀರಿ. ನೀವು ಎಫ್‌3 ಬಾಕ್ಸ್ ಅನ್ನು ಲಾಕ್ ಮಾಡಿದ್ದೀರಿ. 20 ಹೆಚ್ಚುವರಿ ಉಚಿತ ಟಿಕೆಟ್ ಕೊಡದೇ ಇದ್ದರೆ ಬಾಕ್ಸ್‌ ತೆರೆಯಲ್ಲ ಎಂದಿದ್ದೀರಿ. ಇದು ವೃತ್ತಿಪರ ನಡೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X