ಚಲಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಫರಹತಾಬಾದ್ ಬಳಿ ನಡೆದಿದೆ.
ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶಿನಾಥ್ (50) ಮೃತರು ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಜೇವರ್ಗಿ ಕಡೆಗೆ ಹೋಗುತ್ತಿದ್ದ ಬಸ್ನಲ್ಲಿ ಫರಹತಾಬಾದ್ ಬಳಿ ಏಕಾಏಕಿಯಾಗಿ ಕಾಶಿನಾಥ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಚಾಲಕ ಹಾಗೂ ಬಸ್ನಲ್ಲಿದ್ದ ಪ್ರಯಾಣಿಕರು ಅವರನ್ನು ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಸಾಗಿಸುವ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ.
ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.