ಬೆಳಗಾವಿ | ಯುವತಿ ಆತ್ಮಹತ್ಯೆ ಪ್ರಕರಣದಲ್ಲಿ ಹೊಸ ತಿರುವು, ಪ್ರೇಮ ಪ್ರಹಸನವೇ ಕಾರಣ?

Date:

Advertisements

ಬೆಳಗಾವಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಐಶ್ವರ್ಯಾ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರೀತಿಸಿದ ಯುವಕ ಕೈಕೊಟ್ಟು ಮತ್ತೋರ್ವ ಯುವತಿಯ ಕಡೆ ಮೆಲುಕು ಹಾಕಿದ್ದೇ ಈ ದುರ್ಘಟನೆಯ ಹಿಂದಿನ ಮುಖ್ಯ ಕಾರಣವೆಂದು ಪೊಲೀಸರು ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ.

ಯುವಕನ ಮೋಸವೇ ಮರಣಕ್ಕೆ ಕಾರಣ?
ಮೃತ ಯುವತಿ ಐಶ್ವರ್ಯಾ ಮತ್ತು ಆಕೆಯ ಪ್ರೇಮಿ ಆಕಾಶ್ ಇಬ್ಬರೂ ವಿಜಯಪುರ ಜಿಲ್ಲೆಯ ಚಡಚಣ ಮೂಲದವರಾಗಿದ್ದು, ವಿದ್ಯಾರ್ಥಿ ದಿನಗಳಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇತ್ತೀಚೆಗೆ ಆಕಾಶ್ ಮತ್ತೊಬ್ಬ ಯುವತಿಯೊಂದಿಗೆ ಸಂಬಂಧ ಬೆಳೆಸಿದ ವಿಷಯ ತಿಳಿದ ನಂತರ, ಇದರಿಂದ ನೊಂದ ಐಶ್ವರ್ಯಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಕೊನೆಯ ಕ್ಷಣದ ಮೆಸೇಜ್:
ಆತ್ಮಹತ್ಯೆಗೆ ಮೊದಲು ಐಶ್ವರ್ಯಾ ತನ್ನ ಪಿಜಿ ರೂಮಿನಿಂದ ಆಕಾಶ್‌ಗೆ ಮೆಸೇಜ್ ಕಳಿಸಿ, ತನ್ನ ಸಾವಿಗೆ ಆತ ಮತ್ತು ಇನ್ನೊಬ್ಬ ಯುವತಿಯೇ ಕಾರಣ ಎಂದು ಆರೋಪಿಸಿದ್ದಳು. ಈ ಸಂದೇಶ ಕಳುಹಿಸಿದ ತಕ್ಷಣ, ಆಕಾಶ್ ತಕ್ಷಣವೇ ಪಿಜಿ ರೂಮಿಗೆ ಬಂದು ಬಾಗಿಲು ಒಡೆದು, ಆಕೆಯ ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

Advertisements

ಪೊಲೀಸರ ತನಿಖೆ ಮುಂದುವರಿಯುತ್ತಿದೆ:
ಈ ಘಟನೆ ಸಂಬಂಧ ಪೊಲೀಸರು ಆಕಾಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Download Eedina App Android / iOS

X