ಐಪಿಎಲ್ : ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 6 ರನ್‌ಗಳ ರೋಚಕ ಜಯ

Date:

Advertisements

ಕೊನೆಯ ಓವರ್‌ನವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ ತಂಡವು 6 ರನ್‌ಗಳಿಂದ ರೋಚಕವಾಗಿ ಗೆದ್ದು ಬೀಗಿದೆ

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ಥಾನ್ ತಂಡವು 9 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತ್ತು. ಬಳಿಕ ಈ ಗುರಿಯನ್ನು ಸಾಧಿಸಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ, 6 ರನ್‌ಗಳ ಅಂತರದಿಂದ ಸೋಲು ಒಪ್ಪಿಕೊಂಡಿದೆ.

ಕೊನೆಯ ಓವರ್‌ನಲ್ಲಿ ಚೆನ್ನೈಗೆ ಗೆಲ್ಲಲು 20 ರನ್‌ಗಳ ಅವಶ್ಯಕತೆ ಇದ್ದಾಗ ರಾಜಸ್ಥಾನ ರಾಯಲ್ಸ್ ತಂಡದ ಪರವಾಗಿ ಕೊನೆಯ ಓವರ್ ಎಸೆದ ಸಂದೀಪ್ ಶರ್ಮಾ ಕೇವಲ 14 ರನ್‌ ಮಾತ್ರ ನೀಡಿ, ತಮ್ಮ ತಂಡದ ಪರ ಹೀರೋ ಎನಿಸಿಕೊಂಡರು. ಕೊನೆಯ ಓವರ್‌ನಲ್ಲಿ ಮಹೇಂದ್ರ ಸಿಂಗ್ ಧೋನಿಯವರ ವಿಕೆಟ್ ಪಡೆದದ್ದು, ಪಂದ್ಯವು ರಾಜಸ್ಥಾನದ ಗೆಲುವಿಗೆ ಕಾರಣವಾಯಿತು. ಬೌಂಡರಿ ಗೆರೆಯ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ಶಿಮ್ರಾನ್ ಹೆಟ್ಮಾಯರ್ ಅದ್ಭುತ ಕ್ಯಾಚ್ ಪಂದ್ಯದ ಗತಿಯನ್ನೇ ಬದಲಿಸಿತು

Advertisements

ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿರುದ್ಧ ನಡೆದಿದ್ದ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 50 ರನ್‌ಗಳ‌ ಅಂತರದಿಂದ ಸೋಲುವ ಮೂಲಕ, ತವರಿನ ಮೈದಾನದಲ್ಲಿ ತೀವ್ರ ಮುಖಭಂಗ ಅನುಭವಿಸಿತ್ತು. ಈ ಪಂದ್ಯದಲ್ಲಿ ಗೆದ್ದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸುಮಾರು 17 ವರ್ಷಗಳ ನಂತರ ಚೆನ್ನೈನಲ್ಲಿ ಗೆಲುವು ಸಾಧಿಸಿತ್ತು.

ಗುವಾಹಟಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ ಗೆಲುವು ಸಾಧಿಸುವ ಮೂಲಕ ಕೊನೆಗೂ ಈ ಬಾರಿಯ ಸೀಸನ್‌ನ ಮೊದಲ ಗೆಲುವನ್ನು ದಾಖಲಿಸಿಕೊಂಡಿದೆ. ಈವರೆಗೆ ರಾಜಸ್ಥಾನ ಮೂರು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಸೋಲು ಅನುಭವಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

Download Eedina App Android / iOS

X