ಬೆಂಗಳೂರು | ಯುಗಾದಿ ಹಬ್ಬದ ದಿನ ರೌಡಿ ಶೀಟರ್‌ ಭೀಕರ ಹತ್ಯೆ

Date:

Advertisements

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ಯುಗಾದಿ ಹಬ್ಬದ ದಿನದಂದು ರೌಡಿ ಶೀಟರ್ ಒಬ್ಬನ ಭೀಕರ ಹತ್ಯೆಯಾಗಿದೆ.

ಹತ್ಯೆಯಾದ ರೌಡಿಶೀಟರ್‌ನನ್ನು ಮಂಜ ಅಲಿಯಾಸ್ ನೇಪಾಳಿ ಮಂಜ ಎಂದು ಗುರುತಿಸಲಾಗಿದೆ. ಹಬ್ಬದ ದಿನ ಮದ್ಯಪಾನ ಪಾರ್ಟಿಗೆ ಹೋಗಿದ್ದ ವೇಳೆ, ಎರಡು ಬೈಕ್‌ಗಳಲ್ಲಿ ಬಂದ ಹಂತಕರ ಪಡೆ ಕ್ಷಣಮಾತ್ರದಲ್ಲಿ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

Advertisements

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಹೆಬ್ಬಗೋಡಿ ಸೇರಿದಂತೆ ಹಲವೆಡೆ ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಪ್ರಕರಣ ದಾಖಲಿಸಿದ್ದರು. ವಿರೋಧಿಗಳು ಹಾಗೂ ಪೊಲೀಸರ ಕಿರುಕುಳ ತಾಳಲಾರದೆ ಕುಣಿಗಲ್‌ನಲ್ಲಿ ಮನೆ ಮಾಡಿಕೊಂಡಿದ್ದ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪುಟ್ಟ ರಾಷ್ಟ್ರಗಳಿಂದ ಇಸ್ರೇಲ್, ರಷ್ಯಾ, ಅಮೆರಿಕ ಕಲಿಯುವುದು ಬಹಳಷ್ಟಿದೆ!

ನಿನ್ನೆ ಯುಗಾದಿ ಹಬ್ಬದಂದು ಸ್ನೇಹಿತರು ಕರೆದರೂ ಎಂದು ಕುಣಿಗಲ್​ನಿಂದ ಬೆಂಗಳೂರಿಗೆ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಮದ್ಯಪಾನ ಪಾರ್ಟಿ ಮಾಡುತ್ತಿದ್ದ. ಈ ವೇಳೆ 2 ಬೈಕ್​ನಲ್ಲಿ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಂದಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X