ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆ ಎತ್ತಿಹಿಡಿದಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಒಟ್ಟು 1,200 ಕೋಟಿ ರೂ. ವೆಚ್ಚದ ಯೋಜನೆ ಆಶ್ರಮದ ಸರಳತೆಯನ್ನು ಅಳಿಸಿಹಾಕುತ್ತದೆ ಮತ್ತು ಅದನ್ನು ಗಾಂಧಿ ಮೌಲ್ಯಗಳಿಂದ ದೂರವಾದ ಸರ್ಕಾರಿ ನಿಯಂತ್ರಿತ ಸ್ಮಾರಕವಾಗಿ ಪರಿವರ್ತಿಸುತ್ತದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಯೋಜನೆ ಮಹಾತ್ಮ ಗಾಂಧಿ ಪರಂಪರೆಗೆ ಮಾಡಿದ ದ್ರೋಹವಾಗಿದೆ. ಮೂಲ ಆಶ್ರಮ ಇರುವ ಸ್ಥಳ ಬದಲಾಯಿಸುವುದು ಜೊತೆಗೆ ವಸ್ತುಸಂಗ್ರಹಾಲಯ, ಆಂಫಿಥಿಯೇಟರ್ ಹಾಗೂ ಆಹಾರ ಕೇಂದ್ರದೊಂದಿಗೆ ಆಧುನೀಕೃತ ಅಂಗಳವಾಗಿ ಮರುರೂಪಿಸಲು ಸರ್ಕಾರ ಯತ್ನಿಸುತ್ತಿದೆ. ಗಾಂಧಿವಾದಿ ಚಿಂತನೆಗೆ ಯೋಜನೆಯಲ್ಲಿ ಬೆಲೆ ನೀಡಲಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಪುನರಾಭಿವೃದ್ಧಿ ಪ್ರಶ್ನಿಸಿ ಈ ಹಿಂದೆ ತುಷಾರ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಸೆಪ್ಟೆಂಬರ್ 2022ರಲ್ಲಿ ತಿರಸ್ಕರಿಸಿತ್ತು. ಆದರೆ ಹೈಕೋರ್ಟ್ ತೀರ್ಪು ಆಶ್ರಮದ ಪರಂಪರೆಯನ್ನು ನಿರ್ಲಕ್ಷಿಸುತ್ತದೆ ಎಂದು ಸುಪ್ರೀಂ ಕೋರ್ಟ್ನಲ್ಲಿ ದಾಖಲಿಸಿರುವ ಅರ್ಜಿಯಲ್ಲಿ ವಿವರಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್ ಜನ್ಮದಿನ ಏ.14ರಂದು ಕೇಂದ್ರ ಸರಕಾರಿ ಕಚೇರಿಗಳಿಗೆ ರಜಾ ದಿನವಾಗಿ ಘೋಷಣೆ
ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿ, ಪ್ರಕರಣದ ವಿಚಾರಣೆ ಮುಗಿಯುವವರೆಗೆ ಎಲ್ಲ ನಿರ್ಮಾಣ ಅಥವಾ ಪುನರಾಭಿವೃದ್ಧಿ ಚಟುವಟಿಕೆಗಳಿಗೆ ತಡೆ ನೀಡಬೇಕು. ಶತಮಾನದಷ್ಟು ಹಳೆಯದಾದ ಆಶ್ರಮದ ಸ್ಥಳಾಕೃತಿಯನ್ನು ಯೋಜನೆ ಬದಲಿಸುತ್ತದೆ ಜೊತೆಗೆ ಅದರ ಆಶಯಗಳಿಗೆ ಮಾರಕ. ಯೋಜನೆಯಡಿ 40 ಕಟ್ಟಡಗಳನ್ನು ಸಂರಕ್ಷಿಸಲಾಗುತ್ತಿದ್ದು ಉಳಿದ 200 ನಿರ್ಮಿತಿಗಳನ್ನು ನಾಶ ಅಥವಾ ಮರುನಿರ್ಮಾಣ ಮಾಡಲಾಗುತ್ತಿದೆ ಅರ್ಜಿಯಲ್ಲಿ ತಿಳಿಸಲಾಗಿದೆ.
ಹರಿಜನ ಕುಟುಂಬಗಳನ್ನು ಸ್ಥಳಾಂತರಿಸಿ ಪ್ರಸ್ತುತ ಈ ಪ್ರದೇಶದ ಮೇಲ್ವಿಚಾರಣೆ ಮಾಡುತ್ತಿರುವ ಗಾಂಧಿವಾದಿ ಟ್ರಸ್ಟ್ಗಳನ್ನು ಮೂಲೆಗುಂಪಾಗಿಸುತ್ತದೆ. ಮುಖ್ಯಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದ ಸರ್ಕಾರಿ ಪ್ರಾಬಲ್ಯದ ಸಂಸ್ಥೆಗೆ ಹಸ್ತಾಂತರಿಸುವ ಉದ್ದೇಶದಿಂದ ಯೋಜನೆ ಹಮ್ಮಿಕೊಳ್ಳಲಾಗಿದ್ದು ಸರ್ಕಾರ ಸ್ಮಾರಕವನ್ನು ಸ್ವಾಧೀನಪಡಿಸಿಕೊಳ್ಳುವ ಕುತಂತ್ರ ರೂಪಿಸಿದೆ. ಸ್ವತಂತ್ರ ಗಾಂಧಿವಾದಿಗಳು, ಇತಿಹಾಸಕಾರರು ಮತ್ತು ಆಶ್ರಮದ ಪಾಲಕರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಬೇಕು. ಸರ್ಕಾರದ ನಿಯಂತ್ರಣ ಇರಬಾರದು ಸ್ವತಂತ್ರ ಗಾಂಧಿವಾದಿಗಳು, ಇತಿಹಾಸಕಾರರು ಮತ್ತು ಆಶ್ರಮದ ಪಾಲಕರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಬೇಕು ಹಾಗೂ ಸರ್ಕಾರದ ನಿಯಂತ್ರಣ ಇರಬಾರದು ಎಂದು ಅರ್ಜಿದಾರರು ವಿವರಿಸಿದ್ದಾರೆ.
ದಲಿತರನ್ನು ಹರಿಜನ ಎಂದು ನಾಮಕರಣ ಮಾಡಿದವರು ಗಾಂಧೀಜಿ. ಇಂತಹ ಅನೇಕ ಚಟುವಟಿಕೆಗಳಿಂದ ದಲಿತರು ಭಾರಿ ಬೆಲೆ ತೆರುವಂತೆ ಮಾಡಿದ್ದರು ಗಾಂಧೀಜಿ. ಬ್ರಿಟಿಷ್ರ ವಿರುದ್ಧ ಅನೇಕ ಬಾರಿ ಉಪವಾಸ ಕುಳಿತರು, ಆದರೆ ಒಮ್ಮಯೂ ದಲಿತರಿಗೆ ಶಿಕ್ಷಣ ಬೇಕು, ಬಡತನ ತೊಲಗಬೇಕೆಂದು ಯಾವತ್ತೂ ಉಪವಾಸ ಕೂರಲಿಲ್ಲ. ಆದರೂ ಮಹಾತ್ಮಾ, ರಾಷ್ಟ್ರಪಿತಾ ಎಂದು ಕರೆಸಿಕೊಂಡರು 🤣🤣🤣🤣