ಬಿಹಾರ | ನಿರ್ಮಾಣ ಹಂತದ ಸೇತುವೆ ಕುಸಿತ ; ತಿಂಗಳಲ್ಲೇ ಎರಡನೇ ಘಟನೆ

Date:

Advertisements
  • ಬಿಹಾರ ಕಿಶನ್‌ಗಂಜ್‌ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ
  • ಜೂನ್‌ 4ಕ್ಕೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದಿದ್ದ ನಿರ್ಮಾಣ ಹಂತದ ಸೇತುವೆ

ಬಿಹಾರ ರಾಜ್ಯದ ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಶನಿವಾರ (ಜೂನ್‌ 24) ನಿರ್ಮಾಣ ಹಂತದ ಸೇತುವೆಯೊಂದರ ಭಾಗ ಕುಸಿದು ಬಿದ್ದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ ಕುಸಿದು ಬಿದ್ದು ಮೂರು ವಾರಗಳ ಬಳಿಕ ಇದೀಗ ಮತ್ತೊಂದು ಸೇತುವೆ ಕುಸಿದಿದೆ.

“ರಾಜಧಾನಿ ಪಾಟ್ನಾ ಜಿಲ್ಲೆಯಿಂದ 400 ಕಿ.ಮೀ ದೂರದಲ್ಲಿರುವ ಕಿಶನ್ಗಂಜ್ ಜಿಲ್ಲೆಯ ಮೆಚ್ಚಿ ನದಿಯ ಮೇಲಿನ ಸೇತುವೆಯ ಕಂಬ ಕುಸಿದಿದೆ. ಎನ್‌ಎಚ್—27ಇ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಿರ್ಮಾಣ ಹಂತದಲ್ಲಿರುವ ಈ ಸೇತುವೆ ಅಸ್ಸಾಂ ರಾಜ್ಯದ ಕಿಶನ್ಗಂಜ್ ಮತ್ತು ಕತಿಹಾರ್ ಜಿಲ್ಲೆಗಳನ್ನು ಸಂಪರ್ಕಿಸುತ್ತಿತ್ತು” ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.

Advertisements

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಕಾರಣ ಪತ್ತೆಗೆ ತಜ್ಞರಿರುವ ಐದು ಸದಸ್ಯರ ತಂಡವನ್ನು ರಚಿಸಲಾಗಿದೆ. ಸೇತುವೆ ನಿರ್ಮಾಣದಲ್ಲಿ ದೋಷವಿದ್ದಂತೆ ಮೇಲ್ನೋಟಕ್ಕೆ ಕಾಣುತ್ತದೆ ಎಂದು ಅರವಿಂದ್ ಕುಮಾರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರಪ್ರದೇಶ | ಪೊಲೀಸ್ ಬಂಧನದಲ್ಲಿದ್ದ ಇಬ್ಬರು ದಲಿತರ ಸಾವು; ಕಸ್ಟಡಿ ಕೊಲೆ ಆರೋಪ

ಬಿಹಾರ ರಾಜ್ಯದಲ್ಲಿ ಪೂರ್ಣಗೊಂಡಿರುವ ಮತ್ತು ನಿರ್ಮಾಣ ಹಂತದಲ್ಲಿರುವ ಎಲ್ಲ ಸೇತುವೆಗಳ ರಚನೆ ಕುರಿತು ಪರಿಶೀಲನೆ ನಡೆಸುವುದು ಅಗತ್ಯವಿದೆ ಎಂದು ಬಿಹಾರ ಎಂಜಿನಿಯರ್ ಅಸೋಸಿಯೇಷನ್ ತಿಳಿಸಿದೆ.

ಜೂನ್ 4 ರಂದು ಖಗಾರಿಯಾ ಜಿಲ್ಲೆಯಲ್ಲಿ ಗಂಗಾನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ನಾಲ್ಕು ಪಥದ ಬೃಹತ್ ಸೇತುವೆ ಕುಸಿದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X